ಕಬಡ್ಡಿ ಗಲಾಟೆ; ಬಿಜೆಪಿ-ಕಾಂಗ್ರೆಸ್‌ ಸ್ವಪ್ರತಿಷ್ಠೆ ಭರಾಟೆ! 


Team Udayavani, Mar 13, 2021, 7:45 PM IST

Shivamogga Kabaddi

ಶಿವಮೊಗ್ಗ: ಶಿವಮೊಗ್ಗ ಬಿಜೆಪಿಯ ಶಕ್ತಿ ಕೇಂದ್ರ. ಏಳರಲ್ಲಿ ಆರು ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದಾರೆ. ಘಟಾನುಘಟಿ ನಾಯಕರೇ ಇದ್ದಾಗಲೂ ಭದ್ರಾವತಿ ಕ್ಷೇತ್ರವನ್ನು ಈವರೆಗೆ ಗೆಲ್ಲಲು ಸಾಧ್ಯವಾಗಿಲ್ಲ. ಅದಕ್ಕೆ ಕಾರಣ ವ್ಯಕ್ತಿ ಕೇಂದ್ರಿತ ರಾಜಕೀಯ ವ್ಯವಸ್ಥೆ. 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಇಬ್ಬರು ಧ್ರುವಗಳಿಂತಿದ್ದ ದಿ| ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಹಾಗೂ ಬಿ.ಕೆ. ಸಂಗಮೇಶ್ವರ್‌ ಅವರೇ ಗೆಲುವು ಸಾ ಧಿಸಿರುವುದು ವಿಶೇಷ. ಕಬಡ್ಡಿ ಘಟನೆ ಮೂಲಕ ಬಿಜೆಪಿ ನೆಲೆಯೂರಲು ಹವಣಿಸುತ್ತಿದೆ. ಎರಡೂ ಪಕ್ಷಗಳಿಗೆ ಇದು ಪ್ರತಿಷ್ಠೆಯ ಕಣವಾಗಿದೆ.

12 ದಿನಗಳ ಹಿಂದೆ ನಡೆದ ಕಬಡ್ಡಿ ಪಂದ್ಯಾವಳಿ ಗಲಾಟೆ ಈಗ ರಾಜಕೀಯ ತಿರುವು ಪಡೆದಿದ್ದು ರಾಜ್ಯದ ಗಮನ ಸೆಳೆದಿದೆ. ಶಾಸಕ ಬಿ.ಕೆ. ಸಂಗಮೇಶ್‌ ಹಾಗೂ ಮಕ್ಕಳ ಮೇಲೆ ಅಟ್ರಾಸಿಟಿ, ಕೊಲೆ ಯತ್ನ ದೂರು  ದಾಖಲಾಗಿದ್ದು ಈ ವಿಚಾರ ಸದನದಲ್ಲೂ ಪ್ರಸ್ತಾಪ ಆಗಿ ಅಂತಿಮವಾಗಿ ಸಂಗಮೇಶ್‌ ಅವರನ್ನು  ಸದನದಿಂದ ಹೊರಹಾಕಲಾಗಿದೆ.  ಇದೇ ಘಟನೆ ಹಿಡಿದು ಈಗ ಕಾಂಗ್ರೆಸ್‌ ಶಿವಮೊಗ್ಗದಲ್ಲಿ ಬೃಹತ್‌ ಜನಾಕ್ರೋಶ ಸಮಾವೇಶ ಏರ್ಪಡಿಸಿದ್ದು ರಾಜ್ಯದ ಎಲ್ಲ ನಾಯಕರು ಭಾಗವಹಿಸುತ್ತಿದ್ದು, ಸಿಎಂ ತವರಲ್ಲೇ ಸರಕಾರಕ್ಕೆ ಬಿಸಿ ಮುಟ್ಟಿಸುವ ಪ್ರಯತ್ನದಲ್ಲಿದ್ದಾರೆ.

ಹಿಂದುತ್ವ ಪ್ರತಿಪಾದಕರೇ: ಹಾಗೆ ನೋಡಿದರೆ ಬಿ.ಕೆ. ಸಂಗಮೇಶ್‌ ಹಾಗೂ ಎಂ.ಜೆ.ಅಪ್ಪಾಜಿ ಹಿಂದೂ  ಧರ್ಮ ವಿರೋ ಧಿಗಳಲ್ಲ. ಪ್ರತಿ ವರ್ಷದ ಹಿಂದೂ ಮಹಾಸಭಾ ಗಣೇಶ ಮೆರವಣಿಗೆಯಲ್ಲಿ ಹಾಲಿ ಮತ್ತು ಮಾಜಿ ಶಾಸಕರೂ ಭಾಗವಹಿಸುತ್ತಿದ್ದು ಬಿಜೆಪಿಗೆ ಇಲ್ಲಿ ಬೇರೂರಲು ಅವಕಾಶ ಸಿಗದಂತಾಗಿತ್ತು. ಹೀಗಾಗಿ ಬಿಜೆಪಿ ಪ್ರತಿ ಚುನಾವಣೆಯಲ್ಲೂ ಠೇವಣಿ ಪಡೆಯಲು ಹೆಣಗಾಡಬೇಕಿತ್ತು. ಎಂ.ಜೆ.ಅಪ್ಪಾಜಿ ನಿಧನದ ನಂತರ ಬಿಜೆಪಿ ಈಗ ಬೇರೂರುವ ತವಕದಲ್ಲಿದೆ. ಭದ್ರಾವತಿಯಲ್ಲಿ ಗಲಾಟೆಗಳು ಹೊಸದೇನಲ್ಲ. ಆದರೆ  ಇದೇ ಮೊದಲ ಬಾರಿಗೆ ಈ ಪ್ರಕರಣದಲ್ಲಿ ಖುದ್ದು ಶಾಸಕರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣ ರಾಜ್ಯ ವ್ಯಾಪಿ ಸದ್ದು ಮಾಡಿದೆ.

ನೇರ ಅಖಾಡಕ್ಕೆ: ಈವರೆಗ ಸಂಗಮೇಶ್‌ ಹಾಗೂ ಅಪ್ಪಾಜಿ ವಿರುದ್ಧ ಪ್ರಬಲ ಸ್ಪ ರ್ಧಿ ಹಾಕದೆ ಇದ್ದ ಬಿಜೆಪಿ ಹೊಂದಾಣಿಕೆ ರಾಜಕಾರಣ ನಡೆಸಿತ್ತು. ಲೋಕಸಭೆ ಚುನಾವಣೆ ವೇಳೆ ಹಾಲಿ ಮತ್ತು ಮಾಜಿ ಶಾಸಕರ ಜತೆ ಹೊಂದಾಣಿಕೆ ಮಾಡಿಕೊಂಡು ಹೆಚ್ಚು ಮತ ಪಡೆಯುತ್ತಿದ್ದದು ಗುಟ್ಟಾಗಿ ಉಳಿದಿಲ್ಲ. ಇದೇ ಮೊದಲ ಬಾರಿಗೆ ಸಂಗಮೇಶ್‌ ವಿರುದ್ಧ ಬಿಜೆಪಿ ತೊಡೆ ತಟ್ಟಿದೆ. ಪಂಚಾಯ್ತಿ ರಾಜಕಾರಣಕ್ಕೆ ಹೆಸರುವಾಸಿಯಾದ  ಭದ್ರಾವತಿ ಕ್ಷೇತ್ರದಲ್ಲಿ ಬಿಜೆಪಿ ರಾಜಕಾರಣ ಫಲ ನೀಡುವುದೇ ಕಾಲವೇ ಹೇಳಬೇಕಿದೆ.

ಶರತ್‌ ಭದ್ರಾವತಿ 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.