ಕಾಂಗ್ರೆಸ್ನಿಂದ ಕಾಗೋಡು ಮತ್ತೆ ಸ್ಪರ್ಧೆ; ಮಗಳಿಂದ ಸುಳಿವು?
Team Udayavani, Apr 2, 2022, 3:55 PM IST
ಸಾಗರ: 2023ರಲ್ಲಿ ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತ್ತೊಮ್ಮೆ ಕಾಂಗ್ರೆಸ್ನಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ಪರ್ಧಿಸಬಹುದು ಎಂಬ ಸುಳಿವನ್ನು ಅವರ ಪುತ್ರಿ, ಕೆಪಿಸಿಸಿ ಕಾರ್ಯದರ್ಶಿ ಡಾ. ರಾಜನಂದಿನಿ ವ್ಯಕ್ತಪಡಿಸಿದ್ದಾರೆ.
ಕಾಗೋಡು ಅವರು 2013ರಲ್ಲಿಯ ಚುನಾವಣೆಯನ್ನೇ ತಮ್ಮ ಅಂತಿಮ ಸ್ಪರ್ಧೆ ಎಂದು ಘೋಷಿಸಿದ್ದರು. ಆ ಬಾರಿ ಗೆಲುವು ಸಾಧಿಸಿದ ಅವರು 2018 ರಲ್ಲಿ ಸ್ಪರ್ಧೆಸುವುದಿಲ್ಲ ಎಂದಿದ್ದರೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಒತ್ತಾಸೆಯಿಂದ ಮತ್ತೊಮ್ಮೆ ಸ್ಪರ್ಧಿಸಿದ್ದರು. ಈಗಲೂ ಅವರು ಚುರುಕಾಗಿದ್ದಾರೆ. ದೈಹಿಕ ಆರೋಗ್ಯ ಚೆನ್ನಾಗಿದೆ. ಹಾಗಾಗಿ ನಾವೆಲ್ಲ ಒಕ್ಕೊರಲಿನಿಂದ ಆಗ್ರಹ ಪಡಿಸಿದರೆ ಅವರು ಮತ್ತೊಮ್ಮೆ ಸ್ಪರ್ಧಿಸಲಿದ್ದಾರೆ ಎಂಬರ್ಥದಲ್ಲಿ ರಾಜನಂದಿನಿ ಮಾತನಾಡಿ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಕಾಗೋಡು ತಿಮ್ಮಪ್ಪ ಅವರ ಸಾಗರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಅವರಿಗೆ ಜನಸೇವೆ ಮಾಡಲು ಇನ್ನಷ್ಟು ಆಸಕ್ತಿ ಇದ್ದು, ಕಾಂಗ್ರೆಸ್ ಪಕ್ಷದಿಂದ ಅವರ ಹೆಸರನ್ನೇ ಹೈಕಮಾಂಡ್ಗೆ ಕಳಿಸಿಕೊಡಲಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.
ಈಗಾಗಲೇ ಚುನಾವಣೆಯ ಜ್ವರ ಆರಂಭವಾಗಿದ್ದು, ಕಾಗೋಡು ಸ್ಪರ್ಧಿಸುವುದಿಲ್ಲ ಎಂಬ ಕಲ್ಪನೆಯಲ್ಲಿಯೇ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಕಾಗೋಡು ಪುತ್ರಿ ಡಾ. ರಾಜನಂದಿನಿ ಅಲ್ಲದೆ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ತೀ.ನ.ಶ್ರೀನಿವಾಸ್, ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಮೊದಲಾದವರ ಹೆಸರು ಕಾಂಗ್ರೆಸ್ ಟಿಕೆಟ್ನ ಆಕಾಂಕ್ಷಿಗಳ ಪಟ್ಟಿಯಲ್ಲಿ ಓಡಾಡುತ್ತಿತ್ತು. ಕಾಗೋಡು ಸಾಗರ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಗೆಲುವು ಸಾಧಿಸಿರುವ ಕಾಗೋಡು ಹೆಸರೇ ಮತ್ತೊಮ್ಮೆ ಮುಂಚೂಣಿಗೆ ಬರುವ ಮೂಲಕ ಆಕಾಂಕ್ಷಿಗಳಿಗೆ ನಿರಾಶೆ ಉಂಟಾಗುವ ಎಲ್ಲ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ