ಶಿವಮೊಗ್ಗ: ಮಳೆಗಾಗಿ ಕಪಿಲೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುತ್ತಿದ್ದ ವೇಳೆ ಸುರಿದ ಮಳೆ
Team Udayavani, Jun 20, 2023, 8:33 PM IST
ಶಿವಮೊಗ್ಗ: ಮಲೆನಾಡಿನಲ್ಲಿ ರೈತರು ಮಳೆಗಾಗಿ ಪೂಜೆ ಸಲ್ಲಿಸುವ ವೇಳೆ ವರುಣ ದೇವ ಕೃಪೆ ತೋರಿ ಮಳೆ ಸುರಿದ ಪ್ರಸಂಗ ಶಿವಮೊಗ್ಗ ಜಿಲ್ಲೆಯ ಹನಸವಾಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಮಳೆಯಾಗಲಿಲ್ಲ ಎಂದು ಗ್ರಾಮಸ್ಥರು ಮೇಲಿನ ಹಸನವಾಡಿ ಗ್ರಾಮದ ಕಪಿಲೇಶ್ವರ ಸ್ವಾಮಿ ದೇವಾಲಯದಲ್ಲಿ ಮುದ್ದೆ ಪಾರಾವ್ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದ ವೇಳೆ ಏಕಾಏಕಿ ಮಳೆ ಸುರಿಯಲು ಆರಂಭವಾಗಿದೆ, ಮಳೆ ಸುರಿಯುತ್ತಿದ್ದಂತೆ ಗ್ರಾಮದ ಜನ ದೇವಸ್ಥಾನದ ಗಂಟೆ ಬಾರಿಸುತ್ತಾ ಸಂಭ್ರಮಿಸಿದರು.
ರಾತ್ರಿಯಿಡೀ ಭಜನೆ, ಬೆಳಿಗ್ಗೆ ಗಂಗೆಪೂಜೆ, ಅಭಿಷೇಕ ನಡೆಸಿದ ವೇಳೆ ವರುಣ ದೇವರು ಗ್ರಾಮದ ಜನರ ಮೊರೆಗೆ ಕೃಪೆ ತೋರಿದ್ದಾನೆ ಮಳೆಯ ರಭಸಕ್ಕೆ ದೇವಸ್ಥಾನದ ಎದುರು ಹಾಕಿದ್ದ ಶಾಮಿಯಾನ ಕುಸಿದು ಬಿದ್ದಿದೆ.
ಬರದ ಸಂದರ್ಭದಲ್ಲಿ ಹಿಂದಿನಿಂದಲೂ ವಿಶೇಷ ಸಂಪ್ರದಾಯ ಆಚರಿಸಿಕೊಂಡು ಬಂದಿರುವ ಗ್ರಾಮಸ್ಥರು ಈ ಬಾರಿಯೂ ಮಳೆ ಬಾರದೆ ಇರುವುದರಿಂದ ದೇವರ ಮೊರೆ ಹೋಗಿದ್ದಾರೆ. ದೇವಾಲಯದ ಬಳಿಯೇ ಮುದ್ದೆ ತಯಾರಿಸಿ, ದೇವರಿಗೆ ನೈವೇದ್ಯ ಇಟ್ಟು ಪೂಜೆ ಸಲ್ಲಿಸುವ ವೇಳೆ ಮಳೆರಾಯ ಪ್ರವೇಶ ಮಾಡಿದ್ದಾನೆ ಇದರಿಂದ ಗ್ರಾಮದ ಜನ ಕುಣಿದು ಕುಪ್ಪಳಿಸಿದ್ದಾರೆ.
ಇದನ್ನೂ ಓದಿ: ಕುಷ್ಟಗಿ ಪೊಲೀಸರ ಕಾರ್ಯಾಚರಣೆ: ಶ್ರೀಗಂಧ ಕಳ್ಳರ ಬಂಧನ, ಸೊತ್ತುಗಳು ವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ