ಬಾಲಕಿಯ ಕಿಡ್ನ್ಯಾಪ್ ಮಾಡಿ ನಾಲೆಗೆ ಎಸೆದ ಕಿರಾತಕರು
Team Udayavani, Sep 20, 2017, 4:37 PM IST
ಶಿವಮೊಗ್ಗ: ನಗರದ ಗೋಪಾಳಂ ಬಡಾವಣೆಯ ಎಸೆಸೆಲ್ಸಿ ವಿದ್ಯಾರ್ಥಿನಿಯೊಬ್ಬಳನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿ ತುಂಗಾ ನಾಲೆಗೆ ಎಸೆದ ಕಳವಳಕಾರಿ ಘಟನೆ ಬುಧವಾರ ಬೆಳಗ್ಗೆ ನಡೆದಿದ್ದು, ಅದೃಷ್ಟವಷಾತ್ ಬಾಲಕಿ ರಕ್ಷಣೆಗೊಳಗಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಅಂಗಡಿಗೆಂದು ಹೋಗಿದ್ದ ಬಾಲಕಿ ಈಶ್ವರಿ ಎಂಬ 16 ವರ್ಷದ ಬಾಲಕಿಯನ್ನು ಆಮ್ನಿ ವಾಹನದಲ್ಲಿ ಬಂದ ಮುಸುಕು ಧಾರಿಗಳು ಅಪಹರಿಸಿ ಅನುಪಿನಕಟ್ಟೆ ಎಂಬಲ್ಲಿ ನಾಲೆಗೆ ಎಸೆದು ಪರಾರಿಯಾಗಿದ್ದಾರೆ.
ಸುಮಾರು 1 ಗಂಟೆಗಳ ಕಾಲ ಬಾಲಕಿ ರಕ್ಷಣೆಗಾಗಿ ಪರದಾಡಿದ್ದು , ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬಂದಿಗಳು ಹರಸಾಹಸ ಪಟ್ಟು ಈಶ್ವರಿಯನ್ನು ಸುರಕ್ಷಿತವಾಗಿ ಮೇಲಕ್ಕೆ ತಂದಿದ್ದಾರೆ. ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಈಶ್ವರಿ ಪೋಷಕರಿಗೆ ನೆರೆ ಮನೆಯವರೊಂದಿಗೆ ಜಗಳವಾಗಿದ್ದು ಇದೇ ಹಿನ್ನಲೆಯಲ್ಲಿ ಕೃತ್ಯ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ತುಂಗಾ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು , ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ