15 ದಿನದೊಳಗೆ ರಾಜ್ಯ ಧಾರ್ಮಿಕ ಪರಿಷತ್ ರಚನೆ: ಕೋಟ ಶ್ರೀನಿವಾಸ ಪೂಜಾರಿ
Team Udayavani, Jan 11, 2020, 4:01 PM IST
ಶಿವಮೊಗ್ಗ: ಮುಂದಿನ 15 ದಿನದೊಳಗೆ ರಾಜ್ಯ ಧಾರ್ಮಿಕ ಪರಿಷತ್ ರಚನೆ ಮಾಡಲಾಗುತ್ತದೆ. ರಾಜ್ಯದ 30 ಜಿಲ್ಲೆಯಲ್ಲೂ ಜಿಲ್ಲಾ ಧಾರ್ಮಿಕ ಪರಿಷತ್ ಇರಲಿದೆ ಎಂದು ರಾಜ್ಯ ಮೀನುಗಾರಿಕೆ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನಿಡಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜಿಲ್ಲಾ ಧಾರ್ಮಿಕ ಪರಿಷತ್ ಮೂಲಕ ದೇವಾಲಯಗಳಿಗೆ ಆಡಳಿತಾತ್ಮಕ ವ್ಯವಸ್ಥಾಪನಾ ಸಮಿತಿ ರಚಿಸಲಾಗುವುದು. ರಾಜ್ಯದಲ್ಲಿ ಹಲವೆಡೆ ದೇವಾಲಯಗಳ ಜಾಗ ಒತ್ತುವರಿಯಾಗಿದೆ. ಅದನ್ನು ತೆರವುಗೊಳಿಸಲು ಸರ್ವೇ ಪ್ರಕ್ರಿಯೆ ಸಹ ಪ್ರಾರಂಭ ಮಾಡಲಾಗುತ್ತಿದೆ ಎಂದರು.
ಮೀನುಗಾರಿಕಾ ಇಲಾಖೆಯಲ್ಲಿ 28 ಸಾವಿರ ಫಲಾನುಭವಿಗಳಿಗೆ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ. ಸಾಂಕೇತಿಕವಾಗಿ 3 ಮೀನುಗಾರರಿಗೆ ಪ್ರಧಾನಿಗಳು ಕ್ರೆಡಿಟ್ ಕಾರ್ಡ್ ವಿತರಿಸಿದ್ದಾರೆ. ರೈತರು ಹೇಗೆ ಕ್ರೆಡಿಟ್ ಕಾರ್ಡ್ ಬಳಸಿ ವ್ಯವಹಾರ ಮಾಡುತ್ತಾರೆ ಅದೇ ರೀತಿ ಮೀನುಗಾರರಿಗೆ ಮಾಡಬಹುದು. ಎಂದರು.
23 ಸಾವಿರ ಮಹಿಳೆಯರು ಸ್ವಸಹಾಯ ಹಾಗೂ ರಾಷ್ಟ್ರೀಯ ಬ್ಯಾಂಕುಗಳಲ್ಲಿ ಮಾಡಿದ 50 ಸಾವಿರ ರೂ ಸಾಲ ಮನ್ನ ಮಾಡಲಾಗಿದೆ. ಒಟ್ಟು 60 ಕೋಟಿ ರೂ ಮೀನುಗಾರಿಕೆ ಮಹಿಳೆಯರ ಸಾಲಮನ್ನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಗಳೂರು ಗಲಭೆಗೆ ಸಂಬಂಧಿಸಿದ ಸಿಡಿ ಬಿಡುಗಡೆ ವಿಚಾರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರು ಸಂಪೂರ್ಣ ಸಿಡಿ ಯಾಕೇ ಬಿಡುಗಡೆ ಮಾಡಿಲ್ಲ ಎಂದು ಆತಂಕವಾಗುತ್ತಿದೆ. ಅವರು ಸಿಎಂ ಅಗಿದ್ದಾಗ ನಾನು ವಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದೇನೆ. ಸಮಾಜದ ಶಾಂತಿ-ಸುವ್ಯವಸ್ಥೆ ಕಾಪಾಡುವುದು ಆಡಳಿತ ಹಾಗೂ ವಿಪಕ್ಷದ ಜವಾಬ್ದಾರಿ ಎಂದು ಅವರೇ ಹೇಳಿದ್ದರು ಎಂದರು.
ಕುಮಾರಸ್ವಾಮಿ ಅವರ ಪ್ರಕಾರ ಮುಗ್ಧರು, ಅಮಾಯಕರಲ್ಲಿ ಕಲ್ಲು ಹೊಡೆದೋರು ಬರುತ್ತಾರಾ? ಶಸ್ತ್ರಾಗಾರದ ಬೀಗ ಒಡೆದು, ಪೊಲೀಸರ ಮೇಲೆ ಕಲ್ಲು ತೂರೋರು ಅಮಾಯಕರೇ? ಮಾಜಿ ಸಿಎಂ ಅಗಿ ಆಡಳಿತ ನಡೆಸಿದವರು ಹೀಗೆ ಹೇಳುವುದು ಸರಿಯಲ್ಲ ಎಂದ ಸಚಿವರು, ಅವರ ಗೊಂದಲ ಬಗೆಹರಿಸಲು ನ್ಯಾಯಾಂಗ ತನಿಖೆ ಮಾಡ ಲಾಗುತ್ತಿದೆ. ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ