ರೈತರ ಮೂಗಿಗೆ ತುಪ್ಪ ಸವರಿದ ಕುಮಾರಸ್ವಾಮಿ
Team Udayavani, Oct 7, 2018, 6:10 AM IST
ಶಿವಮೊಗ್ಗ: ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಮೂಗಿಗೆ ತುಪ್ಪ ಹಚ್ಚಿದ್ದು ಬಿಟ್ಟರೆ ಇನ್ನೇನೂ ಆಗಿಲ್ಲ. ಸಾಲ ಮನ್ನಾ ಹೇಳಿಕೆ ಬರೀ ಹೇಳಿಕೆಯಾಗಿಯೇ ಉಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಸಾಲ ಮನ್ನಾ ಪ್ರಕಟಿಸಿದ್ದರು. ಆದರೆ, ಇದುವರೆಗೂ ಸಹಕಾರಿ ಬ್ಯಾಂಕುಗಳಿಗೆ ಯಾವುದೇ ಸ್ಪಷ್ಟ ನಿರ್ದೇಶನ ಬಂದಿಲ್ಲ. ಹೊಸ ಸಾಲವೂ ಸಿಗುತ್ತಿಲ್ಲ. ರೈತರ ಆತ್ಮಹತ್ಯೆ ಹೆಚ್ಚಾಗಿದೆ. ರಾಷ್ಟ್ರೀಕೃತ ಬ್ಯಾಂಕುಗಳ ಜತೆ ಸರಕಾರ ಚರ್ಚಿಸಿಲ್ಲ. ಬ್ಯಾಂಕ್ಗಳು ಈಗಲೂ ರೈತರಿಗೆ ನೋಟಿಸ್ ನೀಡುತ್ತಲೇ ಇವೆ. ಒಟ್ಟಾರೆ ರೈತರನ್ನು ರಾಜ್ಯ ಸರಕಾರ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳು ವಂಚಿಸುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.
ರಾಜ್ಯದ 55 ತಾಲೂಕುಗಳಲ್ಲಿ ಈಗಲೂ ಭೀಕರ ಬರವಿದೆ. ಸಂಪುಟ ವಿಸ್ತರಣೆ, ಸಮ್ಮಿಶ್ರ ಸರಕಾರದ ಗೊಂದಲ, ಸಚಿವರ ನಿರ್ಲಕ್ಷéಗಳಿಂದ ಸರಕಾರ ಇದೆಯೋ?, ಇಲ್ಲವೋ? ಎಂಬಂತಾಗಿದೆ. ಇದೊಂದು ಕೆಟ್ಟ ಸರಕಾರ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ