ಕುಮುಧ್ವತಿ ನದಿಯಲ್ಲಿ ಮೀನುಗಳ ಮಾರಣಹೋಮ
Team Udayavani, Apr 5, 2022, 3:32 PM IST
ರಿಪ್ಪನ್ಪೇಟೆ: ಸಮೀಪದ ಬಿದರಹಳ್ಳಿ ಗ್ರಾಮದ ಕುಮುಧ್ವತಿ ನದಿಯಲ್ಲಿ ಕಿಡಿಗೇಡಿಗಳು ವಿಷ ಬೆರೆಸಿ ಮೀನು ಸೇರಿದಂತೆ ಪ್ರಾಣಿ ಪ್ರಬೇಧಗಳ ಮಾರಣಹೋಮ ನಡೆಸಿರುವ ಘಟನೆ ನಡೆದಿದೆ. ಬಿದರಹಳ್ಳಿ ಕುಮುಧ್ವತಿ ನದಿಯಲ್ಲಿ ಕಿಡಿಕೇಡಿಗಳು ನದಿಯ ನೀರಿಗೆ ಮೈಲುತುತ್ತ ವಿಷ ಬೆರೆಸಿ ಪ್ರಾಣಿ ಪ್ರಬೇಧಗಳ ಮಾರಣಹೋಮ ನಡೆಸಿದ್ದಾರೆ.
ಕುಮುಧ್ವತಿ ನದಿಯಲ್ಲಿ ಬೇಸಿಗೆ ಕಾರಣದಿಂದ ನೀರು ಇಂಗಿ ಹೋಗಿದ್ದು ಅಲ್ಲಲ್ಲಿ ಕೆಲ ಹೊಂಡದಲ್ಲಿ ಪ್ರಾಣಿ ಪ್ರಬೇಧಗಳು ಜೀವಿಸುತ್ತವೆ. ಇದನ್ನೇ ಗುರಿಯಾಗಿಸಿಕೊಂಡು ಕಿಡಿಕೇಡಿಗಳು ವಿಷಯುಕ್ತ ‘ಮೈಲುತುತ್ತ’ವನ್ನು ಆ ನೀರಿಗೆ ಬೆರೆಸಿ ಲಕ್ಷಾಂತರ ಪ್ರಾಣಿ ಸಂಕುಲಗಳ ಮಾರಣಹೋಮಕ್ಕೆ ಕಾರಣವಾಗಿದ್ದಾರೆ. ವಿಷ ಬೆರೆಸಿದ್ದರಿಂದ ಮೀನು, ಕಪ್ಪೆ ಹಾಗೂ ಇನ್ನಿತರ ಜೀವಿಗಳು ನದಿಯ ದಂಡೆಯ ಮೇಲೆ ಬಿದ್ದಿದ್ದು ಇದನ್ನು ತಿನ್ನುವ ಹಕ್ಕಿಗಳು ಸಹ ಸಾಯುವ ಸಾಧ್ಯತೆ ಇದೆ. ಇನ್ನು ಜಾನುವಾರುಗಳು ಕುಡಿಯಲು ಇದೇ ನೀರು ಬಳಸುವುದರಿಂದ ಅವುಗಳ ಜೀವಕ್ಕೂ ಕಂಟಕವಾಗಿದೆ.
ಈ ಬಗ್ಗೆ ಅಮೃತ ಗ್ರಾಪಂ ಪಿಡಿಒಗೆ ವಿಚಾರಿಸಿದಾಗ ವಿಷಯ ಗಮನಕ್ಕೆ ಬಂದಿದ್ದು ಕಿಡಿಕೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು