ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ
Team Udayavani, Apr 6, 2020, 4:19 PM IST
ಶಿವಮೊಗ್ಗ: ಕೋವಿಡ್ -19 ಸೋಂಕು ಭೀkyasanur forest diseaseತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆ ಜಿಲ್ಲೆಯಲ್ಲಿ ಮಂಗನ ಖಾಯಿಲೆಗೆ ಮತ್ತೊಂದು ಬಲಿಯಾಗಿದೆ.
ತೀರ್ಥಹಳ್ಳಿ ತಾಲೂಕಿನ ಉಡುಕೆರೆ ಗ್ರಾಮದ ಸುಬ್ರಹ್ಮಣ್ಯ (52) ಮಂಗನ ಖಾಯಿಲೆಗೆ ಬಲಿಯಾದ ವ್ಯಕ್ತಿ.
ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಪ್ರಾಥಮಿಕ ಕೇಂದ್ರ ವ್ಯಾಪ್ತಿಯ ಉಡುಕೆರೆ ಗ್ರಾಮದ ಸುಬ್ರಹ್ಮಣ್ಯ ಅವರಿಗೆ ಕಳೆದ ಮಾರ್ಚ್ 30 ರಂದು ಮಂಗನ ಖಾಯಿಲೆ ( ಕ್ಯಾಸನೂರು ಫಾರೆಸ್ಟ್ ಡಿಸೀಸ್) ಇರುವುದು ಪತ್ತೆಯಾಗಿತ್ತು. ಅಂದಿನಿಂದಲೂ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಣಿಪಾಲ್ ಆಸ್ಪತ್ರೆಯಲ್ಲಿ ಸುಬ್ರಹ್ಮಣ್ಯ ಇಂದು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 132 ಜನರಲ್ಲಿ ಈ ಖಾಯಿಲೆ ಕಾಣಿಸಿಕೊಂಡಿದ್ದು, ಇದುವರೆಗೆ ಜಿಲ್ಲೆಯಲ್ಲಿ 5 ಜನರನ್ನು ಬಲಿ ಪಡೆದಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿಯೇ 105 ಜನರಲ್ಲಿ ಈ ಖಾಯಿಲೆಯ ಪಾಸಿಟಿವ್ ಕಂಡುಬಂದಿದೆ. ಹೊಸನಗರದಲ್ಲಿ 1 ಹಾಗೂ ಸಾಗರ ತಾಲೂಕಿನ 26 ಜನರಲ್ಲಿ ಕ್ಯಾಸನೂರು ಫಾರೆಸ್ಟ್ ಡಿಸೀಸ್ ಪಾಸಿಟಿವ್ ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿಸಿ ಕಚೇರಿ ಮುಂದೆ ಆಜಾನ್ ವಿಚಾರ: ಹಿಂದೂ ಕಾರ್ಯಕರ್ತರಿಂದ ಗೋಮೂತ್ರ ಹಾಕಿ ಸ್ಥಳ ಶುದ್ದೀಕರಣ
ಜಿಲ್ಲಾಧಿಕಾರಿ ಕಚೇರಿ ಮುಂದೆ ಆಜಾನ್ ಕೂಗಿರುವುದು ಅಕ್ಷಮ್ಯ ಅಪರಾಧ: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಆಜಾನ್; ಯುವಕನ ಮೇಲೆ ಕೇಸ್, ಎಚ್ಚರಿಕೆ
ಮೈಕ್ ಆಫ್ ಆಗುತ್ತದೆ ಎಂಬುದು ಸುಳ್ಳು : ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ
ಸಿದ್ದರಾಮಯ್ಯ ಯಾವ ಕಾರಣಕ್ಕೂ ಕೋಲಾರದಲ್ಲಿ ಸ್ಪರ್ಧಿಸಲ್ಲ; ಮಾಡಿದರೂ..: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್ಐ ಪಾತ್ರ?
ಏನು ಹೇಳಿದರೂ ನಿನದೇ ಸರಿ …ಸಂಕಟ ಕಾಲದಲ್ಲಿ ಮತದಾರನೇ ವೆಂಕಟರಮಣ !
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ
ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ
ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ