­1989-90ರ ಬಿಕಾಂ ಸಹಪಾಠಿಗಳ ಭೇಟಿ ಕಾರ್ಯಕ್ರಮ ನಾಳೆ

ಎಲ್‌.ಬಿ. ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನಕ್ಕೆ ಸಜ್ಜು

Team Udayavani, Feb 27, 2021, 4:18 PM IST

L B COllahe

ಸಾಗರ: ನಗರದ ಪ್ರತಿಷ್ಠಿತ ಎಲ್‌ಬಿ ಕಾಲೇಜಿನ 1989-90ರ ಸಾಲಿನ ಬಿಕಾಂನ ಸುಮಾರು 146 ವಿದ್ಯಾರ್ಥಿಗಳು ಸುಮಾರು 30 ವರ್ಷಗಳ ನಂತರ ಸ್ನೇಹ ಸಮ್ಮಿಲನದ ಮೂಲಕ ಕಾಲೇಜಿನ ದೇವರಾಜ ಅರಸು ಸಭಾಂಗಣದಲ್ಲಿ ಮತ್ತೂಮ್ಮೆ ಒಬ್ಬರನ್ನೊಬ್ಬರು ಭೇಟಿ ಆಗುವ ಕಾರ್ಯಕ್ರಮ ಫೆ. 28ರಂದು ನಡೆಯಲಿದೆ.

ಸಿನೆಮಾಗಳಲ್ಲಿ ಕಾಣುವ ದೃಶ್ಯವೊಂದು ನಿಜವಾಗಿಯೂ ಸಾಕಾರಗೊಳ್ಳಲಿದೆ. ಕಳೆದ ವರ್ಷ ಮಾರ್ಚ್‌ನ ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಕೇವಲ ಕಾಮರ್ಸ್‌ ವಿಭಾಗದ ಮೂರು ವಿಭಾಗಗಳ ವಿದ್ಯಾರ್ಥಿಗಳು ವಾಟ್ಸ್‌ ಆ್ಯಪ್‌ ಗುಂಪನ್ನು ರೂಪಿಸಿಕೊಂಡರು. ಮಾಹಿತಿಗಳನ್ನು ಸಂಗ್ರಹಿಸುವ ಸಮಯದಲ್ಲಿ ತಮ್ಮೊಂದಿಗೆ ಕಲಿತ ಏಳು ಸಹಪಾಠಿಗಳು ಇಹದ ವ್ಯವಹಾರವನ್ನೇ ಮುಗಿಸಿರುವುದು ಕೂಡ ಗಮನಕ್ಕೆ ಬಂದಿತು. ಆಗ ನಡೆಯುತ್ತಿದ್ದ ಸಂಭಾಷಣೆಗಳ ಫಲವಾಗಿ, ಕೊರೊನಾ ಇಳಿಕೆಯಾದ ಸಂದರ್ಭದಲ್ಲಿ ಎಲ್ಲರೂ ಒಂದೆಡೆ ಸೇರಲು ತೀರ್ಮಾನಿಸಿರುವುದರ ಪರಿಣಾಮವಾಗಿ ಈ ಸ್ನೇಹ ಸಮ್ಮಿಲನ ಕಾರ್ಯಕ್ರಮ ಏರ್ಪಾಟಾಗಿದೆ. ಕೇವಲ ವಿದ್ಯಾರ್ಥಿಗಳು ಮಾತ್ರ ಸಮ್ಮಿಲನಗೊಳ್ಳದೆ, ತಮಗೆ ಪಾಠ ಮಾಡಿದ ಆ ಕಾಲದ ವಾಣಿಜ್ಯ ಮತ್ತು ಅರ್ಥಶಾಸ್ತ್ರ ವಿಭಾಗದ ಗುರುಗಳಿಗೆ ಗುರುವಂದನೆ ಮಾಡಲು ಕೂಡ ತೀರ್ಮಾನಿಸಿದ್ದಾರೆ. ಆ ದಿನ ಕುಟುಂಬ ಸಮೇತ ಪಾಲ್ಗೊಳ್ಳಲು 110 ವಿದ್ಯಾರ್ಥಿಗಳು ಈಗಾಗಲೇ ಖಚಿತಪಡಿಸಿದ್ದಾರೆ. ಪುಣೆ, ಮುಂಬೈ, ಚೆನ್ನೈ, ಮಂಗಳೂರು ಮೊದಲಾದೆಡೆ ನೆಲೆಸಿರುವವರು ಆ ದಿನ ಒಂದೆಡೆ ಸೇರಲಿದ್ದಾರೆ, ಕುಳಿತು ಊಟ ಮಾಡಲಿದ್ದಾರೆ.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಗುಂಪಿನ ದಿನೇಶ್‌ ಹುಲಿಮನೆ, ಇಲ್ಲಿ ಪದವಿ ಮುಗಿಸಿದ ನಂತರ ಸಾಗರಕ್ಕೆ ಒಮ್ಮೆಯೂ ಕಾಲಿಡದವರು ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈವರೆಗೆ ಕಾಲೇಜಿನ ಇತಿಹಾಸದಲ್ಲಿ ಇಂತಹ ಹಳೆಯ ವಿದ್ಯಾರ್ಥಿಗಳ ಸಮ್ಮಿಲನದಂತಹ ಕಾರ್ಯಕ್ರಮ ನಡೆದಿರಲಿಲ್ಲ ಎಂದೂ ಹೇಳಲಾಗುತ್ತಿದೆ. ನಾವು ಕೂಡ ಕೇವಲ ಕಾಮರ್ಸ್‌ ವಿದ್ಯಾರ್ಥಿಗಳು ಸೇರುತ್ತಿದ್ದೇವೆಯೇ ವಿನಃ ಸಂಸ್ಕೃತ, ಕನ್ನಡ ಭಾಷಾ ವಿದ್ಯಾರ್ಥಿಗಳನ್ನು ಒಳಗೊಳಿಸಲು ಸಾಧ್ಯವಾಗುತ್ತಿಲ್ಲ. ಆದರೆ ಇಂತಹ ಪ್ರಯತ್ನ ಮುಂದಿನ ದಿನಗಳಲ್ಲಿ ಇತರ ವಿಭಾಗ, ವರ್ಷಗಳ ಹಳೆಯ ವಿದ್ಯಾರ್ಥಿಗಳಿಗೆ ಇಂತಹ ಸಮಾಗಮದ ಯೋಜನೆ ಹಾಕಿಕೊಳ್ಳಲು ಸ್ಫೂರ್ತಿ ಆಗುತ್ತದೆ ಎಂಬ ನಂಬಿಕೆ ಇದೆ ಎಂದರು.

ಸಾವಿರಾರು ವಿದ್ಯಾರ್ಥಿಗಳಿಂದ ಸುವರ್ಣ ಕಾಲ ಕಂಡ ಎಲ್‌ಬಿ ಕಾಲೇಜು ಇಂತಹ ಪ್ರಯತ್ನಗಳ  ಪ್ರಭಾವದಿಂದ ಮತ್ತೂಮ್ಮೆ ತನ್ನ ವೈಭವದ ದಿನಗಳನ್ನು ಕಾಣುವಂತಾಗಬೇಕು ಎಂದು ಸಮಾಗಮ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿರುವ ಗಣಪತಿ ಬ್ಯಾಂಕ್‌ನ ಸರಸ್ವತಿ ನಾಗರಾಜ್‌, ಎಸ್‌ಆರ್‌ಎಸ್‌ ಗುರುಲಿಂಗಯ್ಯ, ಯಾಗೈನ್‌ ಶಶಿಧರ್‌, ನಾರಾಯಣ ಜೋಗ್‌, ಸುರೇಶ್‌ ಮುಂಗರವಳ್ಳಿ, ವೆಂಕಟೇಶ್‌ ರಾವ್‌, ತಾರಾನಾಥ ಶೆಟ್ಟಿ ಆಶಯ ವ್ಯಕ್ತಪಡಿಸುತ್ತಾರೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.