ಮುಳುಗಡೆ ಸಂತ್ರಸ್ತರಿಗೆ ಜಮೀನು ನೀಡಿ
ಸುಗ್ರೀವಾಜ್ಞೆ ತರಲು ಕೆಪಿಸಿಸಿ ವಕ್ತಾರ-ನ್ಯಾಯವಾದಿ ಕೆ. ದಿವಾಕರ್ ಸಲಹೆ
Team Udayavani, Apr 27, 2022, 2:51 PM IST
ಸಾಗರ: ಜಿಲ್ಲೆಯಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರಿಗೆ 13,067 ಎಕರೆ ಜಮೀನು ನೀಡಿದ್ದು ಈ ತನಕ ಅವರ ಹೆಸರಿಗೆ ಅದನ್ನು ಮಂಜೂರು ಮಾಡಿ ಕೊಡದೆ, ಸಂತ್ರಸ್ತರನ್ನು ಸರ್ಕಾರ ಸತಾಯಿಸುತ್ತಿದೆ. ಈ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾವನಾತ್ಮಕ ಹೇಳಿಕೆ ನೀಡುವುದರ ಬದಲು ಕೇಂದ್ರ ಸರ್ಕಾರದ ಮೂಲಕ ಸುಗ್ರೀವಾಜ್ಞೆ ಮಾಡಿಸಲು ರಾಜ್ಯ ಸರ್ಕಾರ ಒತ್ತಡ ಹೇರಬೇಕು ಎಂದು ಕೆಪಿಸಿಸಿ ವಕ್ತಾರ ಹಾಗೂ ನ್ಯಾಯವಾದಿ ಕೆ. ದಿವಾಕರ್ ಸಲಹೆ ನೀಡಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡೆನೂರು, ಲಿಂಗನಮಕ್ಕಿ ಸೇರಿದಂತೆ 1959ರಿಂದ 1967ರವರೆಗೆ ನಾಡಿಗೆ ಬೆಳಕು ನೀಡುತ್ತೀರಿ ಎಂದು ಬಿಂಬಿಸಿದಂತಹ ಸಾವಿರಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ. ಆದರೆ ಜಮೀನಿನ ಜೊತೆ ತಮ್ಮ ಸರ್ವಸ್ವವನ್ನೂ ಕಳೆದುಕೊಂಡು ಕಳೆದ ಏಳು ದಶಕಗಳಿಂದ ಬೇರೆಬೇರೆ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಜನರ ಪರವಾಗಿ ಯಾವುದೇ ಸರ್ಕಾರಗಳು ಧ್ವನಿ ಎತ್ತದೆ ಇರುವುದು ದುರದೃಷ್ಟಕರ ಸಂಗತಿ ಎಂದು ಹೇಳಿದರು.
ಅರಣ್ಯ ಭೂಮಿಯನ್ನು ಕಂದಾಯ ಭೂಮಿ ವ್ಯಾಪ್ತಿಗೆ ತರುವ ಕೆಲಸವನ್ನು 1980ರಿಂದ 2017ರ ತನಕ ಯಾರೂ ಮಾಡಿಲ್ಲ. ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಣ್ಣ ತಿದ್ದುಪಡಿ ಮಾಡಿದರೆ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡಲು ಸಾಧ್ಯವಿದೆ. ಕಾಗೋಡು ತಿಮ್ಮಪ್ಪ ಅವರು ಕಂದಾಯ ಸಚಿವರಾಗಿದ್ದಾಗ ಮದನ್ ಗೋಪಾಲ್ ನೇತೃತ್ವದಲ್ಲಿ ಸಮಿತಿ ನಡೆಸಿ ಸರ್ವೇ ಕಾರ್ಯ ನಡೆದಿತ್ತು. ನಂತರ ಅದು ನನೆಗುದಿಗೆ ಬಿದ್ದಿದೆ. 2017ರ ಫೆ.23ರಲ್ಲಿ ಕಾಗೋಡು ತಿಮ್ಮಪ್ಪ ಅವರ ಸೂಚನೆ ಮೇರೆಗೆ 9,934 ಎಕರೆ ಪ್ರದೇಶವನ್ನು ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ಡಿನೋಟಿಫೈ ಮಾಡಲಾಗಿದೆ. ಆದರೆ ಅದನ್ನು ಕೇಂದ್ರಕ್ಕೆ ಕಳಿಸಿ ಕಾನೂನು ತಿದ್ದುಪಡಿ ಮಾಡುವ ಕೆಲಸ ಮಾಡಲಿಲ್ಲ. ನಂತರ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಶಿವಕುಮಾರ್ ಎಂಬ ಅಧಿಕಾರಿ ನೇತೃತ್ವದಲ್ಲಿ ಸರ್ವೇ ಪ್ರಯತ್ನ ನಡೆಸಲಾಗಿತ್ತು. ಅದು ಅಂತಿಮ ಹಂತ ಕಂಡಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಹಿಜಾಬ್ ನಂತರ ನಡೆದ ಬೇರೆ ಬೇರೆ ಘಟನೆಗಳು ಕೋಮು ಸಾಮರಸ್ಯಕ್ಕೆ ಧಕ್ಕೆ ತರುತ್ತಿದೆ. ಬೆಲೆ ಏರಿಕೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಹುನ್ನಾರವಾಗಿಯೇ ಈ ಕೃತ್ಯಗಳು ನಡೆಯುತ್ತಿವೆ. ಇಂತಹ ಸಲ್ಲದ ವಿಚಾರಗಳನ್ನು ಪ್ರಸ್ತಾಪಿಸುವ ಚಟುವಟಿಕೆಗಳನ್ನು ಬಿಜೆಪಿ ನೇರವಾಗಿ ಮಾಡದೆ ಪಕ್ಷದ ಪರವಿರುವ ಸಂಘಟನೆಗಳಿಂದ ವ್ಯವಸ್ಥಿತವಾಗಿ ಮಾಡಿಸುತ್ತಿದೆ. ರಾಜ್ಯ ಸರ್ಕಾರ ಈ ಬಗ್ಗೆ ಸ್ಪಷ್ಟ ನಿಲುವು ವ್ಯಕ್ತಪಡಿಸುವ ಅಗತ್ಯವಿದೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್ ಮಾತನಾಡಿ, ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಸಣ್ಣಪುಟ್ಟ ಸಮಾಜಗಳನ್ನು ಗುರುತಿಸಿ ಟಿಕೆಟ್ ನೀಡುವತ್ತ ಗಮನ ಹರಿಸಬೇಕು. ಜೊತೆಗೆ ಒಂದೇ ಕುಟುಂಬದವರಿಗೆ ಟಿಕೆಟ್ ನೀಡುವುದು ಸರಿಯಲ್ಲ. ತಂದೆ ನಂತರ ಮಕ್ಕಳಿಗೆ, ಅಣ್ಣನ ನಂತರ ತಮ್ಮನಿಗೆ ಟಿಕೆಟ್ ಕೊಡುವ ಪ್ರವೃತ್ತಿ ದೂರವಾಗಬೇಕು ಎಂದು ಒತ್ತಾಯಿಸಿದರು.
ಸಾಮಾಜಿಕ ಕಾರ್ಯಕರ್ತ ರಾಜು ಎಂ. ತಲ್ಲೂರು ಮಾತನಾಡಿ, ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಒಂದು ವರ್ಷದಲ್ಲಿ ಮೂರು ಬಾರಿ ಬೇರೆ ಬೇರೆ ಚುನಾವಣೆಯಲ್ಲಿ ಸೋಲು ಕಂಡಿರುವವರಿಗೆ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು. ಕಳೆದ ಚುನಾವಣೆಯಲ್ಲಿ ನಾನು ಕಾಂಗ್ರೆಸ್ನಿಂದ ನಿಂತು ಸೋಲು ಅನುಭವಿಸಿದ್ದೇನೆ. ಈ ಬಾರಿ ಪಕ್ಷ ನನ್ನನ್ನು ಗುರುತಿಸಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕು ಎಂದು ಹೇಳಿದರು.
ದೇವರಾಣೆಯಾಗಿಯೂ ನಾನು ಯಾರಲ್ಲೂ ಚುನಾವಣೆಗೆ ಟಿಕೆಟ್ ಕೇಳಲ್ಲ. ಆದರೆ ಶಿವಮೊಗ್ಗ ಜಿಲ್ಲೆಯ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು “ಸರ್ವ’ ಅರ್ಹತೆಗಳು ನನಗಿವೆ ಎಂದು ಭಾವಿಸುತ್ತೇನೆ. ಕೆ.ದಿವಾಕರ್, ರಾಜ್ಯ ಕಾಂಗ್ರೆಸ್ ವಕ್ತಾರ
ಸೊರಬದಲ್ಲಿ ಹಾಲಿ, ಮಾಜಿ ಶಾಸಕರು ಕೊರೊನಾ ಕಾಲದಲ್ಲಿಯೂ ಕ್ಷೇತ್ರದಲ್ಲಿ ಕಾಣಿಸಲಿಲ್ಲ. ಬಗರ್ ಹುಕುಂ ವಿಚಾರ ಬಿಟ್ಟರೆ ಬೇರೆ ಪ್ರಸ್ತಾಪಗಳೇ ಅವರಿಂದ ನಡೆಯುತ್ತಿಲ್ಲ. ಸೋತರೂ ಇವತ್ತಿಗೂ ಜನರ ಪರ ಕೆಲಸ ಮಾಡುತ್ತಿರುವುದು ನಾನು. -ರಾಜು ತಲ್ಲೂರು, ಸೊರಬ ಕಾಂಗ್ರೆಸ್ ಪ್ರಮುಖ
ಕೇಸರಿ ಶಾಲು ಧರಿಸಿ ಗೂಂಡಾಗಿರಿ ಮಾಡುವ ಮೂಲಕ ಬಿಜೆಪಿ ಸನ್ಯಾಸಿಗಳ ವಸ್ತ್ರಕ್ಕೆ ಅವಮಾನ ಮಾಡಿದೆ. -ಪ್ರಫುಲ್ಲಾ ಮಧುಕರ್, ವಿಧಾನ ಪರಿಷತ್ ಮಾಜಿ ಸದಸ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ