ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಕೃಷಿಗೆ ಕಂಟಕ


Team Udayavani, Jul 17, 2020, 11:21 AM IST

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಕೃಷಿಗೆ ಕಂಟಕ

ಸೊರಬ: ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕಂಟಕವನ್ನುಂಟು ಮಾಡುತ್ತಿದೆ ಎಂದು ಮಾಜಿ ಶಾಸಕ ಎಸ್‌. ಮಧು ಬಂಗಾರಪ್ಪ ಆರೋಪಿಸಿದರು.

ತಾಲೂಕಿನ ಕುಬಟೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಹಿತಕ್ಕೆ ಧಕ್ಕೆ ತರುವ ಕರಾಳ ಕಾಯ್ದೆಯಾಗಿದ್ದು, ಈಗಾಗಲೇ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಜ್ಯಪಾಲರಿಂದ ಅಂಕಿತ ಪಡೆಯಲಾಗಿದೆ. ಭೂ ಸುಧಾರಣೆ ಕಾಯ್ದೆ ಜಾರಿಯಾದ ದಿನ ರೈತರಿಗೆ ದುರಂತ ದಿನವಾಗಿದ್ದು, ಈ ನಿಟ್ಟಿನಲ್ಲಿ ಬಲವಾಗಿ ವಿರೋಧಿ ಸುತ್ತೇನೆ ಎಂದರು.

ಮೂಡಿ ಮತ್ತು ಮೂಗೂರು ಏತ ನೀರಾವರಿ ಯೋಜನೆಗಳಿಗೆ ಎಸ್‌. ಬಂಗಾರಪ್ಪ ಅವರ ಅವ ಧಿಯಲ್ಲಿಯೇ ರೂಪುರೇಷೆಗಳನ್ನು ತಯಾರಿಸಿ, ಅಂದೇ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ತಾವು ಶಾಸಕರಾದ ಅವ ಧಿಯಲ್ಲಿ ಮತ್ತು ಶಾಸಕರಾಗಿರದ ಸಂದರ್ಭದಲ್ಲಿಯೂ ತಂದೆಯವರ ಕನಸಿನ ಕೂಸಾದ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಪ್ರಯತ್ನ ಪಟ್ಟಿದ್ದೇನೆ. ಎಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ ಬಜೆಟ್‌ನಲ್ಲಿ ಅನುದಾನ ಮೀಲಿಟಿತ್ತು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹಿಂದಿನ ಸರ್ಕಾರದಲ್ಲಿ ಮೀಸಲಿಟ್ಟ ಅನುದಾನವನ್ನು ಬಜೆಟ್‌ನಲ್ಲಿ ಮಂಡಿಸಿದ್ದಾರೆ. ಇದರಲ್ಲಿ ಕ್ಷೇತ್ರದ ಶಾಸಕರ ಕೊಡುಗೆ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕೋವಿಡ್ ಸಂಕಷ್ಟದಿಂದ ಜನತೆ ನಗರ ಪ್ರದೇಶಗಳನ್ನು ತೊರೆದು ಗ್ರಾಮೀಣ ಪ್ರದೇಶಗಳತ್ತ ಮುಖ ಮಾಡುತ್ತಿದ್ದಾರೆ. ಅವರನ್ನು ಗೌರವದಿಂದ ಕಾಣಬೇಕು. ಸರ್ಕಾರ ನಗರ ಪ್ರದೇಶದಲ್ಲಿ ಕೈಗೊಳ್ಳುವ ಕ್ರಮಗಳನ್ನು ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಬೇಕು. ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗುತ್ತಿರುವ ಮಾಹಿತಿ ಇದ್ದು, ಕೋವಿಡ್‌ ಸೋಂಕು ಪರೀಕ್ಷಾ ಕೇಂದ್ರಗಳನ್ನು ಹೆಚ್ಚು ಪ್ರಾರಂಭಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ರಾಜಕಾರಣದ ಭವಿಷ್ಯವನ್ನು ಬದಲಾವಣೆ ಮಾಡಿದವರು ಎಸ್‌. ಬಂಗಾರಪ್ಪನವರು. ಡಿಕೆಶಿ ಅವರು ಸದಾ ಈ ಗೌರವವನ್ನಿಟ್ಟುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಅವರು ನಮ್ಮ ಕುಟುಂಬದ ಆಪ್ತರಲ್ಲೊಬ್ಬರು. ಡಿ.ಕೆ. ಶಿವಕುಮಾರ್‌ ಅವರು ಗೀತಾ ಶಿವರಾಜ್‌ಕುಮಾರ್‌ ಅವರ ಮನೆಗೆ ಭೇಟಿ ನೀಡಿದ್ದನ್ನು ಮಧು ಬಂಗಾರಪ್ಪ ಅವರನ್ನು ಕಾಂಗ್ರೆಸ್‌ಗೆ ಸೆಳೆಯಲು ಯತ್ನಿಸುತ್ತಿದ್ದಾರೆ ಎನ್ನುವ ವದಂತಿ ಹಬ್ಬಿದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಾನು ಈಗಲೂ ಜೆಡಿಎಸ್‌ನಲ್ಲಿಯೇ ಇದ್ದು, ಇನ್‌ ಆ್ಯಕ್ಟಿವ್‌ ಕಾರ್ಯಾಧ್ಯಕ್ಷನಾಗಿದ್ದೇನೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಪುನರುಚ್ಚರಿಸಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.