ವಕೀಲರಿಗೆ ಆದರ್ಶ ವ್ಯಕ್ತಿತ್ವ ಅಗತ್ಯ: ನ್ಯಾ| ವಿಶ್ವನಾಥ ಶೆಟಿ


Team Udayavani, Aug 20, 2017, 5:23 PM IST

lawers.jpg

ತೀರ್ಥಹಳ್ಳಿ: ಕಾನೂನಿನ ಮೂಲಕ ಸಮಾಜಕ್ಕೆ ಒಳ್ಳೆಯದಾಗುವಂತೆ ಕಾರ್ಯ ನಿರ್ವಹಿಸಿದ ಶ್ರೇಷ್ಟ ನ್ಯಾಯಮೂರ್ತಿ ರಾಮಾ ಜೋಯ್ಸ ದೇಶ ಕಂಡ ಶ್ರೇಷ್ಟ ನ್ಯಾಯಾಧೀಶರ ಸಾಲಿನಲ್ಲಿ ಇವರು ಮುಂಚೂಣಿಯಲ್ಲಿದ್ದಾರೆ. ತಮ್ಮ ಬರವಣಿಗೆಯ ಮೂಲಕ ಸಮಾಜಕ್ಕೆ ಜ್ಞಾನದ ಸಂಪತ್ತನ್ನು ನೀಡಿದ ಮೇದಾವಿ ವ್ಯಕ್ತಿಯಾಗಿದ್ದಾರೆ ಎಂದು
ಲೋಕಾಯುಕ್ತ ಪಿ.ವಿಶ್ವನಾಥ ಶೆಟ್ಟಿ ಹೇಳಿದರು. ಪಟ್ಟಣದ ಗೋಪಾಲಗೌಡ ರಂಗ ಮಂದಿರದಲ್ಲಿ ಪಪಂ ತೀರ್ಥಹಳ್ಳಿ, ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಪುರಂದರ ವೇದಿಕೆ ಸಂಯುಕ್ತಾಶ್ರಯದಲ್ಲಿ ನಡೆದ ಮಾಜಿ ರಾಜ್ಯಪಾಲ
ವಿಶ್ರಾಂತ ನ್ಯಾಯಮೂರ್ತಿ ರಾಮಾ ಜೋಯಿಸ್‌ ಅವರ ಪೌರ ಸನ್ಮಾನ ಹಾಗೂ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಮಾಜೋಯಿಸ್‌ ಅವರು ಬದುಕಿನಲ್ಲಿ ವ್ಯಕ್ತಿನಿಷ್ಠೆಯನ್ನು ಬೆಳೆಸಿಕೊಂಡವರು. ನ್ಯಾಯದ ಹಾದಿಯಲ್ಲಿ ನ್ಯಾಯ ನೀಡುವ ಮುಖಾಂತರ ಶ್ರೇಷ್ಠ ವಕೀಲರಾಗಿ ಧರ್ಮ ಹಾಗೂ ಕರ್ತವ್ಯ ತೋರಿದವರು. ಒಬ್ಬ ಆದರ್ಶ ವ್ಯಕ್ತಿತ್ವದ ವಕೀಲರಾಗಿ ನನಗೆ ಪ್ರೇರಣೆ ನೀಡಿದವರು ಎಂದರು. ತಮ್ಮ ಬರವಣಿಗೆಯ ಮೂಲಕ ರಾಜಧರ್ಮವನ್ನು ಬಿಂಬಿಸುತ್ತ ತಮ್ಮ ಕಾರ್ಯದಲ್ಲೂ ಧರ್ಮನಿಷ್ಠೆ ಹಾಗೂ ಕರ್ತವ್ಯನಿಷ್ಠೆ ತೋರಿದ ವಿಶಿಷ್ಟ ವ್ಯಕ್ತಿತ್ವದವರಾಗಿದ್ದರು. ರಾಮಾಜೋಯಿಸ್‌ ಸಮಾಜಕ್ಕೆ ನೀಡಿದ ಕಾಣಿಕೆ ಯುವ ಪೀಳಿಗೆಗೆ ಉತ್ತೇಜನವಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾಜದಲ್ಲಿ ಬೆಳೆಯುವ ಅವಕಾಶ ಪ್ರತಿಯೊಬ್ಬರಿಗೂ ಇದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ವಿಧಾನ ಪರಿಷತ್‌ ಮಾಜಿ ಸಭಾಪತಿ, ಮಾಜಿ ಸಚಿವ ಬಿ.ಎಲ್‌. ಶಂಕರ್‌, ಆಧ್ಯಾತ್ಮ, ಧರ್ಮ ಹಾಗೂ ರಾಜಧರ್ಮದ ಬಗ್ಗೆ ಸಾಹಿತ್ಯ ಕೃಷಿಯ ಹಾದಿಯಲ್ಲಿ ನಡೆದುಬಂದ ರಾಮಾಜೋಯಿಸ್‌ ನಂಬಿದ ಸಿದ್ಧಾಂತಗಳಿಗೆ ಬದ್ಧರಾಗಿ ನಡೆದವರು. ರಾಜ್ಯ ಕಂಡ ಅತ್ಯುತ್ತಮ ನ್ಯಾಯಾಧೀಶರ ಒಬ್ಬರಾಗಿದ್ದ ಅವರು ರಾಜಧರ್ಮದ ಹಾದಿಯಲ್ಲಿ ನೈತಿಕತೆಯ ನೆಲೆದಲ್ಲಿ ಬದುಕಿ ನ್ಯಾಯಾಂಗಕ್ಕೆ ಹೆಚ್ಚಿನ ಗೌರವ ಮೂಡುವಂತೆ ಮಾಡಿದ ವ್ಯಕ್ತಿಯಾಗಿದ್ದರು ಎಂದರು. ಪೌರ ಸನ್ಮಾನ ಹಾಗೂ ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಿಶ್ರಾಂತಿ ನ್ಯಾಯಮೂರ್ತಿ ರಾಮಾ ಜೋಯಿಸ್‌, ಇಂದಿನ ದಿನಗಳಲ್ಲಿ ಸನ್ಮಾನ, ಪುರಸ್ಕಾರಗಳು ವ್ಯವಹಾರದ ಕೆಲಸವಾಗಿದೆ. ಹುಟ್ಟೂರಿನಲ್ಲಿ ನನಗೆ ಮಾಡಿದ ಸನ್ಮಾನ ಹೆಮ್ಮೆ ಎನಿಸುತ್ತದೆ. ಧರ್ಮಕ್ಕಿಂತ ಹೆಚ್ಚಿನ ಸ್ಥಾನಮಾನ ಸಂಸ್ಕೃತಿಯಲ್ಲಿಂದಿಲ್ಲ. ವಕೀಲರೆಂದರೆ ಕೇವಲ ಹಣ ಮಾಡುವ ವೃತ್ತಿಯಲ್ಲ. ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ಸೇವೆ ಮಾಡುವ ವೃತ್ತಿ ಎಂದು ಭಾವಿಸಿ ಕಾರ್ಯ ನಿರ್ವಹಿಸಬೇಕು ಎಂದರು. ಮನುಷ್ಯನಾಗಿ ಹುಟ್ಟಿದ ಮೇಲೆ ಯಾವ ರೀತಿ ನಡೆದುಕೊಳ್ಳಬೇಕು ಎಂಬ ಜೀವನವೇ ಧರ್ಮ. ಧರ್ಮವೆಂದರೆ ಜೀವನದ ಗುಣಗಳು. 1947ರಲ್ಲಿ ನಾನು ಎಸ್ಸೆಸ್ಸೆಲ್ಸಿ ಪೂರೈಸಿದ ಸಂದರ್ಭದಲ್ಲಿ ಆರ್ಥಿಕ ಸ್ಥಿತಿ ದುಸ್ತರವಾಗಿತ್ತು. ಬದುಕು ಸಾಗಿಸಲು ಆಗುಂಬೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದೆ. ನಂತರ ನಾನು ಹಂತ ಹಂತವಾಗಿ ಬದುಕಿನ ಸವಾಲುಗಳನ್ನು ಸ್ವೀಕರಿಸುತ್ತಾ ಸಾಗಿದೆ. ನಾನು ವಕೀಲನಾಗಿದ್ದಾಗ ಶಿಕ್ಷಣವೆಂಬುದು ಮೂಲಭೂತ ಹಕ್ಕು ಆಗಿರಬೇಕೆಂಬುದರ ಬಗ್ಗೆ ನ್ಯಾಯಾಲಯದಲ್ಲಿ 5 ಮಂದಿ ನ್ಯಾಯಾಧೀಶರ ಮುಂದೆ ಮಾಡಿದ ವಾದದಲ್ಲಿ ಜಯ ದಕ್ಕಿಸಿಕೊಂಡು ಸಂವಿಧಾನದಲ್ಲಿ ಸೇರಿಸುವಂತೆ ಮಾಡಿದ ಪ್ರಯತ್ನ ನಾನೆಂದೂ ಮರೆಯಲಾರೆ. ಅಲ್ಪಸಂಖ್ಯಾತ ಹಾಗೂ ಬಹುಸಂಖ್ಯಾತ ಶಿಕ್ಷಣದಲ್ಲಿ ಅಸಾಮಾನತೆ ತೆಗೆಯಬೇಕು. ನಾನು ವಕೀಲನಾಗಿದ್ದಾಗ ತುಮಕೂರಿನಲ್ಲಿ 150 ಜನ ಹರಿಜನರಿಗೆ ನಿವೇಶನದ ವಿಚಾರದಲ್ಲಿ ಆದ ಅನ್ಯಾಯದ ಪ್ರಕರಣದಲ್ಲಿ ಅವರಿಗೆ ದೊರಕಿಸಿಕೊಟ್ಟ ಜಯ ವೃತ್ತಿಯಲ್ಲಿ ಮಾಡಿದ ಅಪಾರ ಸಾಧನೆ ಎಂದರು. ರಾಜ್ಯ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌ ಮಾತನಾಡಿ, ಅರ್ಹತೆ, ಯೋಗ್ಯತೆ, ಶುದ್ಧ ಚಾರಿತ್ರ್ಯ ಹಾಗೂ ದಕ್ಷತೆಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಕಾಲ ಬರಲಿದೆ. ಕೋಮು ಸೌಹಾರ್ದ, ಸಂವಿಧಾನದ ಬಗ್ಗೆ ಚಾಣಕ್ಯ ನೀತಿಯ ಬಗ್ಗೆ ತಮ್ಮ ಪುಸ್ತಕಗಳ ಮೂಲಕ ಅದ್ಭುತ ಲೇಖನಗಳನ್ನು ಬರೆದ ರಾಮಾ ಜೋಯಿಸ್‌ ಸಮಾಜಕ್ಕೆ ಅಪಾರ ಕಾಣಿಕೆ ನೀಡಿದ್ದಾರೆ. ಸಮಾಜದ ಕಣ್ಣು ತೆರೆಸುವ ಹಾಗೂ ಸಮಾಜದ ಸ್ವಾಸ್ಥ್ಯ ಕಾಪಾಡುವ ಬಗ್ಗೆ ಅವರ ಪುಸ್ತಕದಲ್ಲಿ ಬೆಳಕು ಚೆಲ್ಲಿದ್ದಾರೆ. ಒಬ್ಬ ನ್ಯಾಯಮೂರ್ತಿ ನೈತಿಕತೆ ಹಾಗೂ ಮಾನವೀಯತೆ ಮೌಲ್ಯಗಳೊಂದಿಗೆ ಹೇಗೆ ಬದುಕಬೇಕು ಎಂಬುದಕ್ಕೆ ರಾಮಾಜೋಯಿಸ್‌ ಒಬ್ಬ ಮರೆಯಲಾಗದ ವ್ಯಕ್ತಿಯಾಗಿದ್ದಾರೆ ಎಂದರು. ಶಾಸಕ ಕಿಮ್ಮನೆ ರತ್ನಾಕರ್‌ ಅಧ್ಯಕ್ಷತೆ ಸಮಾರಂಭದ ವಹಿಸಿದ್ದರು. ಮಾಜಿ ಶಾಸಕ ಆರಗ ಜ್ಞಾನೇಂದ್ರ, ಕೋಣಂದೂರು ಲಿಂಗಪ್ಪ, ಪಪಂ ಅಧ್ಯಕ್ಷ ಸಂದೇಶ್‌ ಜವಳಿ, ಉಪಾಧ್ಯಕ್ಷೆ ಲಕ್ಷ್ಮೀ ದೇವಮ್ಮ, ಪಪಂ ಅಧಿಕಾರಿ ನಟರಾಜ್‌ ಇದ್ದರು. ಇಮಿಯಾಜ್‌ ಪ್ರಾರ್ಥಿಸಿದರು. ಸಂದೇಶ್‌ ಜವಳಿ ಸ್ವಾಗತಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.