ಯಡೆಹಳ್ಳಿಕೆರೆ ಅಭಿವೃದ್ಧಿ ಕಾಮಗಾರಿಗೆ ಗೃಹ ಸಚಿವರಿಂದ ಶಂಕುಸ್ಥಾಪನೆ
Team Udayavani, Dec 28, 2021, 7:01 PM IST
ತೀರ್ಥಹಳ್ಳಿ: ಪಟ್ಟಣದ ಸಮೀಪ ಇರುವ ಯಡೇಹಳ್ಳಿಕೆರೆ ಅಭಿವೃದ್ಧಿಗೆ ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ಮಂಗಳವಾರ 25 ಲಕ್ಷ ರೂ ಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು.
ಹೊದಲ ಅರಳಾಪುರ ಹಾಗೂ ಮುಳುಬಾಗಿಲು ಗ್ರಾಮಪಂಚಾಯತಿಯ ಸಹಯೋಗದಲ್ಲಿ ಉದ್ಯೋಗ ಖಾತರಿ ಮೂಲಕ ಯಡೇಹಳ್ಳಿಕೆರೆ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ಈ ಹಿಂದೆಯೂ ಕೆರೆಯ ದಂಡೆಯಲ್ಲಿ ಪಟ್ಟಣಪಂಚಾಯತಿ ಹಾಗೂ ಗ್ರಾಮಪಂಚಾಯತಿಗಳ ನೆರವಿನಿಂದ ಮರಗಿಡಗಳನ್ನು ಬೆಳೆಸಿ, ಬೇಲಿ ನಿರ್ಮಿಸಿ ಸುಂದರಗೊಳಿಸಲಾಗಿದ್ದು ಈ ಮಹತ್ಕಾರ್ಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅಪಾರವಾದದ್ದು.
ಇದನ್ನೂ ಓದಿ: ತೀರ್ಥಹಳ್ಳಿ: ಕುಡಿದ ಮತ್ತಿನಲ್ಲಿ ಶಾಲೆಯ ವಿಗ್ರಹ ಧ್ವಂಸ ಮಾಡಿದ ಕುಡುಕ
ಸಚಿವರು ತಮ್ಮೂರು ಆರಗದ ಹಿರೀಕೆರೆ ಯನ್ನು ಇತ್ತೀಚೆಗೆ ಅಭಿವೃದ್ಧಿ ಪಡಿಸುವಲ್ಲಿ ವಿಶೇಷ ಕಾಳಜಿ ತೋರಿಸಿದ್ದು ಈಗ ಹಿರೀಕೆರೆಯು ಹೊಸ ಮೆರಗಿನಿಂದ ಕಂಗೊಳಿಸುತ್ತಿದೆ. ಇದೇ ಮಾದರಿಯಲ್ಲಿ ಆರಗ ಜ್ಞಾನೇಂದ್ರ ರವರು ತೀರ್ಥಹಳ್ಳಿ ಪಟ್ಟಣಕ್ಕೆ ಹೊಂದಿಕೊಂಡಿರುವ ಯಡೇಹಳ್ಳಿಕೆರೆ ಯನ್ನೂ ಅಭಿವೃದ್ಧಿ ಪಡಿಸುವ ಪಣ ತೊಟ್ಟಿದ್ದು ಪರಿಸರ ಪ್ರಿಯರ ಪ್ರಶಂಸೆಗೆ ಪಾತ್ರವಾಗಿದೆ.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ನಾಗರಾಜ್ ಶೆಟ್ಟಿ, ಮುಳುಬಾಗಿಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿ.ಆರ್.ಮೋಹನ್,ಪಟ್ಟಣ ಪಂಚಾಯಿತಿ ಸದಸ್ಯರಾದ ಸೊಪ್ಪುಗುಡ್ಡೆ ರಾಘವೇಂದ್ರ,ತಾಲ್ಲೂಕು ಪಂಚಾಯಿತಿ ಸಿ.ಇ.ಓ ಆಶಾಲತಾ,ಹೊದಲ ಗ್ರಾಮ ಪಂಚಾಯಿತಿ ಹಾಗೂ ಮುಳುಬಾಗಿಲು ಗ್ರಾಮ ಪಂಚಾಯಿತಿಯ ಸದಸ್ಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ