ಲೋಕ್‌ ಅದಾಲತ್‌ನಲ್ಲಿ 12,528 ಪ್ರಕರಣ ಇತ್ಯರ್ಥ


Team Udayavani, Mar 14, 2022, 6:00 PM IST

15

ಶಿವಮೊಗ್ಗ: ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿ ಬಾಕಿ ಇದ್ದ ವಿವಿಧ ವ್ಯಾಜ್ಯ ಹಾಗೂ ವ್ಯಾಜ್ಯ ಪೂರ್ವ 12528 ಪ್ರಕರಣಗಳು ಜಿಲ್ಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡವು.

ಪ್ರಕರಣಗಳನ್ನು ರಾಜಿ ಮಾಡಿಸಲು ಶಿವಮೊಗ್ಗದಲ್ಲಿ 15, ಭದ್ರಾವತಿಯಲ್ಲಿ 7, ಸಾಗರ, ಶಿಕಾರಿಪುರ, ತೀರ್ಥಹಳ್ಳಿಯಲ್ಲಿ ತಲಾ 4, ಸೊರಬದಲ್ಲಿ 3 ಹಾಗೂ ಹೊಸನಗರದಲ್ಲಿ 2 ಪೀಠ ರಚಿಸಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್‌.ಎ. ಮುಸ್ತಫಾ ಹುಸೇನ್‌ ಅವರ ಮಾರ್ಗದರ್ಶನದಲ್ಲಿ ರಾಜಿ ಸಂಧಾನ ಪ್ರಕ್ರಿಯೆಗಳು ನಡೆದವು.

ವಿಚಾರಣೆ ಹಂತದಲ್ಲಿ ಬಾಕಿ ಇದ್ದ ವಿವಿಧ ಸ್ವರೂಪದ 12287 ಹಾಗೂ ವಾಜ್ಯ ಪೂರ್ವ 241 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಇದೇ ವೇಳೆ 2019 ರ ಏ.16ರಂದು ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ವಿಮಾ ಕಂಪನಿ ಮೂಲಕ 70 ಲಕ್ಷ ರೂ. ಪರಿಹಾರವನ್ನು ಸೊರಬ ನ್ಯಾಯಾಲಯ ಒದಗಿಸಿತು. ಜತೆಗೆ 2019 ರ ನ.20ರಂದು ಬೆಂಗಳೂರಿನಲ್ಲಿ ಬೈಕ್‌ ಮತ್ತು ಲಾರಿಗಳ ನಡುವೆ ಅಪಘಾತ ಸಂಭವಿಸಿ ಮತಪಟ್ಟಿದ್ದ ಜ್ಯೂನಿಯರ್‌ ಎಂಜಿನಿಯರ್‌ ತಿಪ್ಪೇಸ್ವಾಮಿ (28) ಕುಟುಂಬಕ್ಕೆ 25 ಲಕ್ಷ ರೂ. ಚೆಕ್‌ ಅನ್ನು ಜಿಲ್ಲಾ ನ್ಯಾಯಾಲಯದಲ್ಲಿ ವಿತರಿಸಲಾಯಿತು.

ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ವಿವಿ ಧ ವಿಮೆ ಕಂಪನಿಗಳ ಹಾಗೂ ಬ್ಯಾಂಕ್‌ ಅ ಧಿಕಾರಿಗಳು, ಪ್ಯಾನಲ್‌ ವಕೀಲರು, ಅರ್ಜಿದಾರರ ಪರ ವಕೀಲರು ಹಾಗೂ ಕಕ್ಷಿದಾರರು ಭಾಗವಹಿಸಿದ್ದರು.

ಪ್ರಕರಣ ಶೀಘ್ರ ಇತ್ಯರ್ಥಕ್ಕೆ ವಕೀಲರು ಗಮನಹರಿಸಿ: 

ಲೋಕ ಅದಾಲತ್‌ ಮೂಲಕ ಜನ ಸಾಮಾನ್ಯರ ಸಿವಿಲ್‌, ವ್ಯಾಜ್ಯ ಪೂರ್ವ ಮತ್ತು ಇತರೆ ಪ್ರಕರಣಗಳನ್ನು ಗುರುತಿಸಿ ರಾಜೀ ಸಂಧಾನದ ಮೂಲಕ ಶೀಘ್ರ ಮತ್ತು ಸುಲಭವಾಗಿ ಇತ್ಯರ್ಥ ಪಡಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್‌.ಎ. ಮುಸ್ತಫಾ ಹುಸೇನ್‌ ತಿಳಿಸಿದರು.

ಜಿಲ್ಲಾ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ ಉದ್ಘಾಟಿಸಿ ಮಾತನಾಡಿದ ಅವರು ಲೋಕ್‌ ಅದಾಲತ್‌ ಮೂಲಕ ಜನ ಸಾಮಾನ್ಯರ ಪ್ರಕರಣಗಳನ್ನು ಬಗೆಹರಿಸಿ ಸೂಕ್ತ ಪರಿಹಾರ ನೀಡಲು ಸರಕಾರ 818 ಕೋಟಿ ರೂ. ಬಿಡುಗಡೆ ಮಾಡಿದೆ. ರಾಜೀ ಆಗಬಹುದಾದಂತಹ ವ್ಯಾಜ್ಯಗಳನ್ನು ಶೀಘ್ರ ಪರಿಹರಿಸಲು ವಕೀಲರು ಗಮನ ಹರಿಸಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ದೇವೆಂದ್ರಪ್ಪ, ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್‌. ಸರಸ್ವತಿ, ಹಿರಿಯ ನ್ಯಾಯಾ ಧೀಶರು, ಕಿರಿಯ ನ್ಯಾಯಾಧೀಶರು, ವಕೀಲರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.