
ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು
Team Udayavani, May 31, 2023, 8:30 PM IST

ಶಿವಮೊಗ್ಗ: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಇಬ್ಬರು ಸರಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ನಗ, ನಗದು, ಹಣ ಪತ್ತೆ ಹಚ್ಚಿದ್ದಾರೆ.
ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಪ್ರಶಾಂತ್ ಅವರಿಗೆ ಸೇರಿದ ಶಿವಮೊಗ್ಗದ ಮನೆ, ಕಚೇರಿ, ಶೆಟ್ಟಿಹಳ್ಳಿಯಲ್ಲಿರುವ ಫಾರ್ಮ್ ಹೌಸ್ ಸೇರಿ 5 ಕಡೆ ತಪಾಸಣೆ ನಡೆಸಿದ್ದು ಈ ವೇಳೆ 25 ಲಕ್ಷ ನಗದು, 3.5 ಕೆ.ಜಿ ಬಂಗಾರ, 24 ಕೆ.ಜಿ ಬೆಳ್ಳಿ, 50 ಬಾಟಲ್ ವಿದೇಶಿ ಮದ್ಯ, 150ರಿಂದ 200 ಜತೆ ಶೂಗಳು, 1 ಕೋಟಿ ರೂ. ಮೊತ್ತದ ಬ್ಯಾಂಕ್ ಡಿಪಾಸಿಟ್, ಮ್ಯೂಚುವಲ್ ಫಂಡ್, ಬೆಂಗಳೂರಿನಲ್ಲಿ ಎರಡು ನಿವೇಶನ, ಶೆಟ್ಟಿಹಳ್ಳಿಯಲ್ಲಿ 4.5 ಎಕರೆ ಹಾಗೂ 1.5 ಎಕರೆ ಕೃಷಿ ಭೂಮಿ ಪತ್ತೆಯಾಗಿದೆ.
ಜಿಲ್ಲಾ ಪಂಚಾಯಿತಿ ಜ್ಯೂನಿಯರ್ ಇಂಜಿನಿಯರ್ ಶಂಕರ್ ನಾಯ್ಕ ಅವರ ಶಿಕಾರಿಪುರದ ಮನೆ, ಕಚೇರಿ ಮೇಲೆ ದಾಳಿ ನಡೆಸಿ 390 ಗ್ರಾಂ ಬಂಗಾರ, 3 ಕೆ.ಜಿ ಬೆಳ್ಳಿ, 1 ಲಕ್ಷ ನಗದು, 12 ಎಕರೆ ಕೃಷಿ ಭೂಮಿ, 60ರಿಂದ 70 ಲಕ್ಷ ಮೌಲ್ಯದ ವಾಹನಗಳು ಪತ್ತೆ ಮಾಡಿದ್ದಾರೆ.
ಬೆಳಗ್ಗೆ 6ಗಂಟೆಗೆ ಶಾಕ್ ನೀಡಿದ ಅಧಿಕಾರಿಗಳು ರಾತ್ರಿ 9 ಗಂಟೆಯಾದರೂ ಪರಿಶೀಲನೆ ಮುಂದುವರೆಸಿದ್ದರು. ಇನ್ನಷ್ಟು ಅಕ್ರಮ ಆಸ್ತಿ ಪತ್ತೆಯಾಗುವ ನಿರೀಕ್ಷೆ ಇದೆ. ಲೋಕಾಯುಕ್ತ ಎಸ್ಪಿ ವಾಸುದೇವ್ ನೇತೃತ್ವದಲ್ಲಿ 3 ಮಂದಿ ಡಿವೈಎಸ್ಪಿ, 10 ಇನ್ಸ್ಪೆಕ್ಟರ್, 52 ಮಂದಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: Shocking ಮೃತ ಉರಗತಜ್ಞ ನರೇಶ್ ಮನೆಯಲ್ಲಿ ವಿಷಕಾರಿ ಹಾವುಗಳ ರಾಶಿ!
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಜಗದೀಶ್ ಶೆಟ್ಟರ್ಗೆ ಆಪರೇಷನ್ ಹಸ್ತದ ಹೊಣೆ

Tomorrow ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಿಲ್ಲಿಗೆ ?

JDS ಫ್ಯಾಮಿಲಿ ಟ್ರಸ್ಟ್; ಸಿಎಂ ಇಬ್ರಾಹಿಂ “ಭೂಗತ’: ಲಕ್ಷ್ಮಣ್ ವ್ಯಂಗ್ಯ

Cauvery issueತಮಿಳುನಾಡು ಸಿಎಂ ಭೇಟಿಗೆ 48 ತಾಸು ಕಾದು ಬರಿಗೈಯಲ್ಲಿ ಮರಳಿದ ಲೆಹರ್ ಸಿಂಗ್!

karnataka 2 ಕಡೆ ಸಂಶೋಧನ ಕೇಂದ್ರ ತೆರೆಯಲು ಆಪ್ಟೀವ್ ಕಂಪೆನಿಗೆ ಆಹ್ವಾನ
MUST WATCH
ಹೊಸ ಸೇರ್ಪಡೆ

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!