ದೀರ್ಘಾಯುಷಿ ಎಂಬ ಖ್ಯಾತಿಯ ಹುಲಿ ‘ಹನುಮ’ ಇನ್ನಿಲ್ಲ
ತನ್ನ ಹಾವಭಾವಗಳಿಂದಲೇ ಜನರಿಗೆ ಇಷ್ಟವಾಗುತ್ತಿದ್ದ....
Team Udayavani, Sep 22, 2022, 1:46 PM IST
ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ರಾಜ್ಯದಲ್ಲೆ ದೀರ್ಘಾಯುಷಿ ಎಂಬ ಖ್ಯಾತಿಗೆ ಒಳಗಾಗಿದ್ದ ಹುಲಿ ‘ಹನುಮ’ ಅನಾರೋಗ್ಯದಿಂದ ಮೃತ ಪಟ್ಟಿದೆ.
ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ : ಮೆದುಳು ನಿಷ್ಕ್ರಿಯಗೊಂಡ ಯುವತಿಯ ಹೃದಯ ಬೆಂಗಳೂರಿಗೆ ರವಾನೆ
ಸುಮಾರು 20 ವರ್ಷದ ಹಿಂದೆ ಜನ್ಮತಾಳಿದ್ದ ಈ ಹುಲಿಯು ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತಿತ್ತು.ಲಯನ್ ಸಫಾರಿಯಲ್ಲಿ ಅತಿಹೆಚ್ಚು ದಿನ ಬದುಕಿದ ಗಂಡು ಹುಲಿ ಎಂಬ ದಾಖಲೆಯನ್ನು ಹನುಮ ಬರದಿದೆ. ವಾಲಿ ಹಾಗೂ ರಾಮ ಹನುಮನ ಸೋದರರು. ಈ ಎರಡು ಹುಲಿಗಳು ಈ ಮೊದಲೇ ಸಾವನ್ನಪ್ಪಿವೆ. 18 ವರ್ಷಗಳ ಕಾಲ ಅವುಗಳು ಬದುಕಿದ್ದವು. ಮಲೇಶಂಕರ, ಚಾಮುಂಡಿಯ ಮಗ ಹನುಮ ಮಲೇಶಂಕರ ಹಾಗೂ ಚಾಮುಂಡಿ ನಡುವಿನ ಮೇಟಿಂಗ್ನಿಂದಾಗಿ ರಾಮ, ವಾಲಿ, ಹನುಮ ಜನಿಸಿದ್ದವು. ಲಯನ್ ಸಫಾರಿಯಲ್ಲಿಯೇ ಹುಟ್ಟಿದ್ದ ಇವುಗಳನ್ನ ನೋಡಲೇಂದೆ ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಪ್ರವಾಸಿಗರು ಬರುತ್ತಿದ್ದರು. ಹನುಮ ತನ್ನ ಹಾವಭಾವಗಳಿಂದಲೇ ಜನರಿಗೆ ಇಷ್ಟವಾಗುತ್ತಿದ್ದ.
ಹನುಮನ ಸಾವಿನಿಂದಾಗಿ ಲಯನ್ ಸಫಾರಿಯಲ್ಲಿ ಹುಲಿಗಳ ಸಂಖ್ಯೆ ನಾಲ್ಕಕ್ಕೆ ಇಳಿದಿದೆ. ಕೇವಲ ಎರಡುವರೆ ವರ್ಷದಲ್ಲಿ ರಾಮ, ವಾಲಿ, ಭರತ ಹಾಗೂ ಈಗ ಹನುಮ ಸಾವನ್ನಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್