LS Polls: ‘ಮೋದಿ ಪ್ರಧಾನಿಯಾಗಿಸಲು ಬಿಜೆಪಿ ಬೆಂಬಲಿಸಿ’
ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಮತದಾರರಿಗೆ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮನವಿ
Team Udayavani, Apr 14, 2024, 9:56 AM IST
ಶಿವಮೊಗ್ಗ: ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಜತೆ ಹೋಗದಂತೆ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮನವಿ ಮಾಡಿದರು.
ಗೋಪಾಳದ ಬಂಟರ ಭವನದಲ್ಲಿ ಬಿಜೆಪಿ ನಗರ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು, ಈಶ್ವರಪ್ಪನವರ ನಾಮಪತ್ರ ಸಲ್ಲಿಕೆಗೆ ಬಿಜೆಪಿಯ ಕಾರ್ಯ ಕರ್ತರು ಪಾಲ್ಗೊಂಡಿರುವುದು ಬೆಳಕಿಗೆ ಬಂದಿದೆ. ಈಶ್ವರಪ್ಪನವರ ನಾಮಪತ್ರ ಸಲ್ಲಿಕೆಗೆ ಎಷ್ಟು ಜನ ಪಾಲ್ಗೊಂಡಿದ್ದೀರಿ ಎಂದು ಮಹಿಳೆಯರನ್ನು ಪ್ರಶ್ನಿಸಿದರು. ಆಗ ಸಭೆಯಲ್ಲಿ ಭಾಗವಹಿಸಿದ್ದ ಕೆಲ ಮಹಿಳೆಯರು ಕೈ ಎತ್ತಿದಾಗ ಇನ್ನೊಮ್ಮೆ ಈ ತಪ್ಪು ಮಾಡದಿರಿ ಎಂದು ಮನವಿ ಮಾಡಿದರು.
ಏ.18 ರಂದು ಬೆಳಗ್ಗೆ 9.45ಕ್ಕೆ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದೇನೆ. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಯಡಿಯೂರ ಪ್ಪನವರು ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ದೇಶದಲ್ಲಿ ಪ್ರಧಾನಿ ಮೋದಿಯವರು ಮಹಿಳೆಯರಿಗೆ ಶೇ.33 ಮೀಸಲಾತಿಯನ್ನು ಕೊಟ್ಟಿದ್ದಾರೆ. ಎಲ್ಲೆಡೆ ಚುನಾವಣಾ ಕಾವು ಏರುತ್ತಿದೆ. ಇಡೀ ಪ್ರಪಂಚದಲ್ಲಿ ಪ್ರಜ್ಞಾವಂತ ಮತದಾರರನ್ನು ಹೊಂದಿರುವ ದೇಶ ಭಾರತ. ಮೋದಿ ಮತ್ತೂಮ್ಮೆ ದೇಶದ ಪ್ರಧಾನಿಯಾಗಬೇಕು. ಮತದಾರರು ಬಿಜೆಪಿಗೆ ಬೆಂಬಲ ನೀಡಬೇಕು ಎಂದರು.
ಕಾಂಗ್ರೆಸ್ ಗ್ಯಾರಂಟಿ ಮೂಲಕ ಅವಕಾಶ ಕೋರುತ್ತಿದೆ ಎಂದು ಟೀಕಿಸಿದ ಅವರು, ಐದು ಕೆ.ಜಿ. ಅಕ್ಕಿ ಕೊಡುತ್ತಿರುವುದು ಮೋದಿ ನೇತೃತ್ವದ ಕೇಂದ್ರ ಸರ್ಕಾರ. ಕೇಂದ್ರದ ಅಕ್ಕಿಗೆ ಸಿದ್ದರಾಮಯ್ಯ ಫೋಟೋ ಹಾಕಿದ್ದಾರೆ. ಶಕ್ತಿ ಯೋಜನೆ ಜಾರಿ ಬಳಿಕ ಹಳ್ಳಿಗಳಲ್ಲಿ ಬಸ್ಗಳು ಸಿಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದರು.
ಶಾಸಕ ಎಸ್.ಎನ್. ಚೆನ್ನಬಸಪ್ಪ ಪ್ರಮುಖರಾದ ಎಂ.ಬಿ. ಭಾನುಪ್ರಕಾಶ್, ಮೋಹನ್ ರೆಡ್ಡಿ, ಜ್ಞಾನೇಶ್ವರ್, ಗಾಯತ್ರಿ ದೇವಿ, ಸುರೇಖಾ ಮುರುಳಿಧರ್, ಎನ್.ಕೆ. ಜಗದೀಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ