Shimoga; ಪ್ರಣವಾನಂದ ಶ್ರೀ ಜೀವ ಬೆದರಿಕೆ ಆರೋಪಕ್ಕೆ ಮಧು ಬಂಗಾರಪ್ಪ ತಿರುಗೇಟು
Team Udayavani, Sep 16, 2023, 5:52 PM IST
ಶಿವಮೊಗ್ಗ: ಪ್ರಣವಾನಂದ ಸ್ವಾಮೀಜಿ ನಮ್ಮ ಸಮಾಜದವರೇ ಅಲ್ಲ. ಅವರೇನು ಈಡಿಗ ಸಮಾಜದವರಾ? ನಾನೇನು ಅವರ ಜಾತಕ ನೋಡಿಕೊಂಡು ಇರಲಾ. ಅವರ ಹಿನ್ನೆಲೆ ಕೆದಕಿ ನಿಮಗೆ ಗೊತ್ತಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಸಚಿವರು ಜೀವ ಬೆದರಿಕೆ ಹಾಕಿದ್ದಾರೆ ಎಂಬ ಸ್ವಾಮೀಜಿ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಮಧು ಬಂಗಾರಪ್ಪ, ಕಣ್ಣೀರು ಏಕೆ ಹಾಕಿದ್ದಾರೆ? ತಪ್ಪು ಮಾಡಿದ್ದಾರಾ? ಅವರನ್ನು ಬೇಕಾದಷ್ಟು ನೋಡಿದ್ದೇವೆ. ಇಂತಹ ಬುರುಡೆ ಬಿಟ್ಟುಕೊಂಡೆ ಬಂದಿದ್ದಾರೆ. ಕಳ್ಳತನ ಮಾಡಿದ್ದರೆ, ತಪ್ಪು ಮಾಡಿದ್ದರೆ ಕಣ್ಣೀರು ಹಾಕುತ್ತಾರೆ ಎಂದರು.
ನನ್ನ ವಿರುದ್ದ ಕಮಿಷನರ್, ಸ್ಪೀಕರ್, ಖರ್ಗೆ ಯಾರಿಗೆ ಬೇಕಾದರೂ ದೂರು ಕೊಡಲಿ. ನನಗೆ ಮಾಡಲು ಬೇಕಾದಷ್ಟು ಕೆಲಸ ಇದೆ. ಸ್ವಾಮೀಜಿ ಅವರು ಸುಮ್ಮನೆ ಪ್ರಚಾರ ತಗೆದುಕೊಳ್ಳುತ್ತಾರೆ. ನೀವುಗಳು ಇದನ್ನೆಲ್ಲಾ ಹಾಕುದು ನಿಲ್ಲಿಸಿ. ಇಂತಹವರಿಗೆಲ್ಲಾ ಏಕೆ ಪ್ರಚಾರ ಕೊಡುತ್ತೀರಿ ಎಂದು ಪ್ರಶ್ನಿಸಿದರು.
ಬಿ.ಕೆ ಹರಿಪ್ರಸಾದ್ ಅವರು ಹಿರಿಯರಿದ್ದಾರೆ. ಅವರಿಗೆ ಸ್ಥಾನಮಾನ ಕೊಡಬೇಡಿ ಎನ್ನಲು ನಾನು ಯಾರು ಎಂದರು.
ಬೆದರಿಕೆ ಆರೋಪ: ಸಚಿವ ಮಧು ಬಂಗಾರಪ್ಪ ಬೆಂಬಲಿಗರು ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.
ನನಗೆ ಜೀವ ಬೆದರಿಕೆ ಇದೆ. ಪೊಲೀಸ್ ಕಮಿಷನರ್ ಭೇಟಿ ಮಾಡುತ್ತಿದ್ದೇನೆ. ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್ ತೀರ್ಪು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್