ಭದ್ರಾ ಜಲಾಶಯ: ನಾಲ್ಕು ಹಂತದಲ್ಲಿ 47 ದಿನ ಕಾಲುವೆಗೆ ನೀರು; ಸಚಿವ ಮಧು ಬಂಗಾರಪ್ಪ
ತೋಟಗಾರಿಕೆ ಬೆಳೆ ಉಳಿಸಿಕೊಳ್ಳಲಷ್ಟೇ ಆದ್ಯತೆ, ಭತ್ತ ಬೆಳೆಯದಂತೆ ರೈತರಿಗೆ ಮನವಿ
Team Udayavani, Jan 6, 2024, 5:13 PM IST
ಶಿವಮೊಗ್ಗ: ಭದ್ರಾ ಜಲಾಶಯದ ಎಡದಂಡ ನಾಲೆಗೆ ಜ.10 ರಿಂದ ಮತ್ತು ಬಲದಂಡ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು.
ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ 2023-24ನೇ ಸಾಲಿನ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಅಧಿಕಾರಿಗಳು ಮತ್ತು ರೈತ ಮುಖಂಡರೊಂದಿಗೆ ಚರ್ಚಿಸಿ ಮಾತನಾಡಿದರು.
ಎಡದಂಡ ನಾಲೆಗೆ ಜ.10 ರಿಂದ ನೀರು ಹರಿಸಲಾಗುತ್ತಿದ್ದು, ಆನ್ ಮತ್ತು ಆಫ್ ಮಾದರಿ ಅನುಸರಿಸಲಾಗುವುದು. ಜ.10 ರಿಂದ 16 ದಿನ ಆನ್ ಮತ್ತು 15 ದಿನ ಆಫ್, ನಂತರ 17 ದಿನ ಆನ್, 15 ದಿನ ಆಫ್, 18 ದಿನ ಆನ್ 15 ದಿನ ಆಫ್ ಮತ್ತು 20 ದಿನ ಆನ್, 15 ದಿನ ಆಫ್ ಇರುತ್ತದೆ.
ಬಲದಂಡ ನಾಲೆಗೆ ಜ.20 ರಿಂದ ನೀರು ಹರಿಸಲಾಗುತ್ತಿದ್ದು ಮೊದಲಿಗೆ 12 ದಿನ ಆನ್, 20 ದಿನ ಆಫ್, 12 ದಿನ ಆನ್ 20 ದಿನ ಆಫ್, 14 ದಿನ ಆನ್ 20 ದಿನ ಆಫ್ ಮತ್ತು 15 ದಿನ ಆನ್ 20 ದಿನ ಆಫ್ ಇರುತ್ತದೆ ಎಂದರು.
ಪ್ರಸಕ್ತ ಸಾಲಿನಲ್ಲಿ ಸಾಕಷ್ಟು ಪ್ರಮಾಣದ ಮಳೆಯಾಗದ ಕಾರಣ ಭದ್ರಾ ಜಲಾಶಯದಲ್ಲಿ ನೀರಿನ ಕೊರತೆಯಾಗಿದೆ. ಜಲಾಶಯದ ಗರಿಷ್ಟ ನೀರಿನ ಸಂಗ್ರಹಣಾ ಮಟ್ಟ 186 ಅಡಿ, ಪ್ರಸ್ತುತ 35.370 ಅಡಿ ಸಂಗ್ರಹವಿದೆ. ಪ್ರಸ್ತತ ಜಲಾಶಯದಲ್ಲಿ ನೀರಾವರಿ ಬಳಕೆಗೆ ಬರುವ 12.50 ಟಿಎಂಸಿ ಪ್ರಮಾಣದ ನೀರನ್ನು ಬಲದಂಡ ನಾಲೆಗೆ 2650 ಕ್ಯೂಸೆಕ್ಸ್ ಮತ್ತು ಎಡದಂಡ ನಾಲೆಗೆ 380 ಕ್ಯೂಸೆಕ್ಸ್ ಮತ್ತು ಗೊಂದಿ ನಾಲೆ ಸೇರಿದಂತೆ ಪ್ರತಿದಿನ 0.27 ಟಿಎಂಸಿ ನೀರು ಹರಿಸಿದಲ್ಲಿ ಒಟ್ಟು 47 ದಿನಗಳಿಗೆ ನೀರು ಹರಿಸಬಹುದಾಗಿದೆ ಎಂದರು.
ಇದನ್ನೂ ಓದಿ: Cricket: ರಣಜಿ ಪಂದ್ಯ ಆಡಲು ಮೈದಾನಕ್ಕೆ ಆಗಮಿಸಿದ ಒಂದೇ ರಾಜ್ಯದ ಎರಡು ತಂಡಗಳು! ಕಾರಣವೇನು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ