ಸೊರಬದಲ್ಲಿ ಮುಂದುವರಿದ ಸೋದರರ ಕಾಳಗ


Team Udayavani, May 4, 2018, 6:15 AM IST

Madhu-Bangarappa,Kumar-Bang.jpg

ಸೋದರರ ಸವಾಲ್‌ ಎಂದೇ ಬಿಂಬಿತವಾಗಿರುವ ಸೊರಬ ಕ್ಷೇತ್ರ ರಾಜ್ಯದಲ್ಲಿ ಗಮನ ಸೆಳೆಯುವ ಕ್ಷೇತ್ರಗಳಲ್ಲಿ ಒಂದಾಗಿದೆ. ನಾಲ್ಕನೇ ಬಾರಿಗೆ ಪರಸ್ಪರ ಎದುರಾಗಿರುವ ಈ ಸಹೋದರರು ವಿಜಯದ ನಗೆ ಬೀರಲು ಭಾರೀ ಪೈಪೋಟಿ ನಡೆಸುತ್ತಿದ್ದಾರೆ. ಯಾರೇ ಗೆದ್ದರೂ ಅಂತರ ದೊಡ್ಡದಾಗಿರುವಂತೆ ಕಾಣಬರುತ್ತಿಲ್ಲ.

ಬಿಜೆಪಿಯಿಂದ ಕುಮಾರ್‌ ಬಂಗಾರಪ್ಪ ಮತ್ತು ಜೆಡಿಎಸ್‌ನಿಂದ ಮಧು ಬಂಗಾರಪ್ಪ ಸ್ಪರ್ಧಿಸಿದ್ದಾರೆ. 2004ರಲ್ಲಿ ಮೊದಲ ಬಾರಿಗೆ ಈ ಸೋದರರು ಪರಸ್ಪರ ಎದುರಾಗಿದ್ದರು. ಆಗ ಕುಮಾರ್‌ ಗೆಲುವು ಸಾಧಿಸಿದ್ದರು. 2008ರಲ್ಲಿ ಮತ್ತೂಮ್ಮೆ ನಡೆದ ಸೋದರರ ಕಾಳಗದಲ್ಲಿ ಮೂರನೇ ವ್ಯಕ್ತಿಯಾಗಿ ಹರತಾಳು ಹಾಲಪ್ಪ ಅನಾಯಾಸವಾಗಿ ಬಿಜೆಪಿಯಿಂದ ಗೆದ್ದು ಸಚಿವರೂ ಆದರು. 3ನೇ ಬಾರಿಗೆ ಎಂದರೆ ಕಳೆದ ಚುನಾವಣೆಯಲ್ಲಿ ಮಧು ಬಂಗಾರಪ್ಪ ಜೆಡಿಎಸ್‌ನಿಂದ ಮತ್ತು ಕುಮಾರ್‌ ಬಂಗಾರಪ್ಪ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಆಗ ಮಧು ಭಾರೀ ಅಂತರದಿಂದ ಗೆದ್ದು ಸೋಲಿಗೆ ಸೇಡು ತೀರಿಸಿಕೊಂಡಿದ್ದರು.

ಕುಮಾರ್‌ ಬಂಗಾರಪ್ಪ ಚುನಾವಣೆ ಘೋಷ ಣೆಗೆ ಸ್ವಲ್ಪ ಮೊದಲು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿಕೊಂಡರು. ಕುಮಾರ್‌ ಕಾಂಗ್ರೆಸ್‌ ತೊರೆಯು ತ್ತಲೇ ಜತೆಯಲ್ಲಿ ಅವರ ಬೆಂಬಲಿಗರೂ ಬಿಜೆಪಿ ಸೇರಿಕೊಂಡರು. ಕುಮಾರ್‌ ಬಿಜೆಪಿ ಸೇರುತ್ತಿದ್ದಂತೆ ಅಲ್ಲಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ತಲ್ಲೂರು ರಾಜು ಕಾಂಗ್ರೆಸ್‌ ಸೇರಿಕೊಂಡು ಟಿಕೆಟ್‌ ಗಿಟ್ಟಿಸಿಕೊಂಡರು. 

ಮೊದಲು ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿ ಯಾಗಿದ್ದ ಹರತಾಳು ಹಾಲಪ್ಪ ಅವರಿಗೆ ಸಾಗರ ದಲ್ಲಿ ಟಿಕೆಟ್‌ ನೀಡಿದ ಯಡಿಯೂರಪ್ಪನವರು ಸೊರಬದಲ್ಲಿ ಕುಮಾರ್‌ ಗೆಲ್ಲುವಂತೆ ಕೆಲಸ ಮಾಡ ಬೇಕೆಂಬ ನಿಬಂಧನೆ ವಿಧಿಸಿದ್ದರು. ಹೀಗಾಗಿ ಕುಮಾರ್‌ ಬೆಂಬಲಿಗರ ಪಡೆಯ ಜತೆಗೆ ಹರತಾಳು ಬೆಂಬಲಿಗರು ಮತ್ತು ಕಾರ್ಯಕರ್ತರು ಒಟ್ಟಾಗಿ ಬಿಜೆಪಿ ಗೆಲುವಿಗೆ ಯತ್ನ ನಡೆಸುತ್ತಿದ್ದಾರೆ. 

ಈಡಿಗ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಈ ಕ್ಷೇತ್ರದಲ್ಲಿ ಬಳಿಕದ ಸ್ಥಾನದಲ್ಲಿ ಲಿಂಗಾಯತರು, ಎಸ್‌ಸಿ, ಎಸ್ಟಿ, ಮಡಿವಾಳರು, ಬ್ರಾಹ್ಮಣರು, ಬೆಸ್ತರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಈಡಿಗ ಮತಗಳನ್ನು ಮಧು ಮತ್ತು ಕುಮಾರ್‌ ಹಂಚಿಕೊಂಡರೆ, ಲಿಂಗಾಯತರು, ಬ್ರಾಹ್ಮಣರು ಮತ್ತು ಮಡಿವಾಳರು ಲಾಗಾಯ್ತಿನಿಂದಲೂ ಬಿಜೆಪಿ ಬೆಂಬಲಿಸುತ್ತಾ ಬಂದಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ರಾಜು ತಲ್ಲೂರು ಮಡಿವಾಳ ಸಮುದಾ ಯದವ ರಾದ್ದರಿಂದ ಆ ಸಮು ದಾಯದ ಮತಗಳು ವಿಭಜನೆಗೊಳ್ಳುವುದು ಶತಸಿದ್ಧ. ಬೆಸ್ತರು ಮತ್ತು ದಲಿತರ ಮತಗಳು ಎಲ್ಲ ಪಕ್ಷಗಳಿಗೂ ಹೋಗುವ ಸೂಚನೆ ಇದೆ.

ಸೊರಬ ಶಾಸಕರ ಈ ಹಿಂದಿನ ಆದಾಯ 5 ಕೋಟಿ ರೂ. ಇತ್ತು. ಈ ಬಾರಿ 16 ಕೋಟಿ ರೂ.ಗೆ ಏರಿಕೆಯಾಗಿದೆ ಎಂದರೆ ತಾಲೂಕಿನ ಅಭಿವೃದ್ಧಿಯನ್ನು ಬಿಟ್ಟು ಶಾಸಕರು ತಮ್ಮನ್ನು ತಾವು ಅಭಿವೃದ್ಧಿ ಮಾಡಿಕೊಂಡಿದ್ದಾರೆ.
– ಕುಮಾರ್‌ ಬಂಗಾರಪ್ಪ, ಬಿಜೆಪಿ ಅಭ್ಯರ್ಥಿ

ನೀರಾವರಿ ಯೋಜನೆಗ ಳಿಗೆ ಅನುದಾನ ಬಿಡುಗಡೆಗೆ  ಪಾದಯಾತ್ರೆ ಮೂಲಕ ಒತ್ತಾಯಿಸಿದ್ದು, ಇದರ ಫಲವಾಗಿ 16 ಕೋಟಿ ರೂ. ವೆಚ್ಚದಲ್ಲಿ ಕಚವಿ ಏತ ನೀರಾವರಿ ಯೋಜನೆಗೆ ಅನುದಾನ ಬಿಡುಗಡೆ ಮಾಡಿದೆ. 
– ಮಧು ಬಂಗಾರಪ್ಪ, ಜೆಡಿಎಸ್‌ ಅಭ್ಯರ್ಥಿ

40-50 ವರ್ಷದಿಂದ ಅಧಿಕಾರ ನಡೆಸಿದ ಅಪ್ಪ-ಮಕ್ಕಳು ತಾಲೂಕಿಗೆ ನೀರಾವರಿ ಯೋಜನೆ, ಕ್ರೀಡಾಂಗಣ, ರೈತರಿಗೆ  ಯೋಜನೆ ರೂಪಿಸದ ಕಾರಣ ಸೊರಬ  ಹಿಂದುಳಿದ ತಾಲೂಕು ಎಂದು  ಗುರುತಿಸಿಕೊಂಡಿದೆ.
– ರಾಜು ತಲ್ಲೂರು, ಕಾಂಗ್ರೆಸ್‌ ಅಭ್ಯರ್ಥಿ

ಮತದಾರರ ಸಂಖ್ಯೆ
ಒಟ್ಟು ಮತದದಾರರು: 1,82,002
ಪುರುಷರು: 92764
ಮಹಿಳೆಯರು: 89238

ಜಾತಿವಾರು
ಡಿಗರು:58000
ಎಸ್‌ಸಿ:30000
ಮಡಿವಾಳರು:12000
ಲಿಂಗಾಯತರು:34000
ಬ್ರಾಹ್ಮಣರು:12000
ಬೆಸ್ತರು:6000
ಮುಸ್ಲಿಮರು: 9000

– ಗೋಪಾಲ್‌ ಯಡಗೆರೆ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.