ನ.28ರಂದು ಶರಾವತಿ ಮುಳುಗಡೆ ರೈತರ ಪಾದಯಾತ್ರೆ: ಮಧು ಬಂಗಾರಪ್ಪ
Team Udayavani, Nov 26, 2022, 1:23 PM IST
ಶಿವಮೊಗ್ಗ: ಶರಾವತಿ ಮುಳುಗಡೆ ರೈತರ ಪಾದಯಾತ್ರೆಯು ನವೆಂಬರ್ 28 ರಂದು ನಡೆಯಲಿದೆ. ಆಯನೂರಿನಿಂದ ಶಿವಮೊಗ್ಗ ನಗರದ ಪಾದಯಾತ್ರೆ ಸಾಗಲಿದೆ. ಬಳಿಕ ಎನ್ಇಎಸ್ ಮೈದಾನದಲ್ಲಿ ಸಾರ್ವಜನಿಕ ಸಭೆ ಆಯೋಜನೆ ಮಾಡಲಾಗಿದೆ ಎಂದು ಸೊರಬ ಮಾಜಿ ಶಾಸಕ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗೋಷ್ಠಿಲ್ಲಿ ಮಾತನಾಡಿದ ಅವರು, ಪಾದಯಾತ್ರೆ ಹಮ್ಮಿಕೊಂಡ ನಂತರ ಬಿಜೆಪಿ ನಾಯಕರು ಎಚ್ಚೆತ್ತುಕೊಂಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಹಾಲಿ ಸಿಎಂ ಬೊಮ್ಮಾಯಿ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. 15 ದಿನದೊಳಗೆ ಸಮಸ್ಯೆ ಸರಿಪಡಿಸುವುದಾಗಿ ಹೇಳುತ್ತಿದ್ದಾರೆ. ಜಿಲ್ಲೆಯ ಸಂಸದರು ಈ ತನಕ ಸಂಸತ್ತಿನಲ್ಲಿ ರೈತರ ಪರವಾನಗಿ ದನಿ ಎತ್ತಿಲ್ಲ ಎಂದರು.
ಶರಾವತಿ, ಬಗರ್ ಹುಕುಂ, ಕಸ್ತೂರಿರಂಗನ್ ವರದಿ ಸೇರಿದಂತೆ ಅನೇಕ ಕಾರಣಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕಾಗೋಡು ತಿಮ್ಮಪ್ಪ ಹಕ್ಮು ಪತ್ರ ನೀಡಿದರು. ಆದರೆ, ಅದನ್ನು ಈಗಿನ ಸರ್ಕಾರ ವಜಾಗೊಳಿಸಿದೆ. ದಮ್ಮು, ತಾಕತ್ ಬಗ್ಗೆ ಮಾತನಾಡುವ ಸಿಎಂ ಈಗ ಏಕೆ ಮಾತನಾಡುತ್ತಿಲ್ಲ. ಜಾತಿ, ಧರ್ಮದ ಬಗ್ಗೆ ಮಾತನಾಡುವ ಸಿಎಂ ಜಿಲ್ಲೆಯ ಮುಳುಗಡೆ ಜನರ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಹಾಗಾಗಿಯೇ ನಾವು ಹೋರಾಟ ರೂಪಿಸುತ್ತಿದ್ದೇವೆ. ಜಿಲ್ಲೆಯ ಜನತೆ 28ರ ಪಾದಯಾತ್ರೆಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಧು ಬಂಗಾರಪ್ಪ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ