ಶಿಕಾರಿಪುರ: ವಿದ್ಯುತ್ ಶಾಕ್ ಗೆ ವ್ಯಕ್ತಿ ಸಾವು
Team Udayavani, Oct 7, 2019, 5:03 PM IST
ಶಿವಮೊಗ್ಗ: ಬೋರ್ ವೆಲ್ ಪಂಪ್ ಚಾಲನೆ ಮಾಡಲು ತೆರಳಿದ್ದ ಸಂದರ್ಭದಲ್ಲಿ ವ್ತಕ್ತಿಯೊಬ್ಬರಿಗೆ ವಿದ್ಯುತ್ ಶಾಕ್ ತಗುಲಿ ಅವರು ಸಾವನ್ನಪ್ಪಿದ ದುರ್ಘಟನೆ ಘಟನೆ ಶಿಕಾರಿಪುರ ತಾಲೂಕಿನ ಅಗ್ರಹಾರ ಮುಚಡಿ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಶಾಕ್ ತಗುಲಿ ಮೃತಪಟ್ಟವರನ್ನು ನೀರುಗಂಟಿ ಮಲ್ಲೇಶಪ್ಪ (62) ಎಂದು ಗುರುತಿಸಲಾಗಿದೆ.
ಗ್ರಾಮಕ್ಕೆ ನೀರು ಸರಬರಾಜು ಮಾಡಲು ಬೋರ್ ವೆಲ್ ಪಂಪ್ ನ ಸ್ವಿಚ್ ಹಾಕಲು ಹೋಗಿದ್ದ ಸಂದರ್ಭದಲ್ಲಿ ಮಲ್ಲೇಶಪ್ಪನಿಗೆ ವಿದ್ಯತ್ ಶಾಕ್ ತಗುಲಿದೆ. ಚಪ್ಪಲಿ ಹಾಕಿಕೊಳ್ಳದೆ ಕೆಸರಲ್ಲಿ ನಿಂತು ಸ್ವಿಚ್ ಆನ್ ಮಾಡಿದ್ದರಿಂದ ವಿದ್ಯುತ್ ಶಾಕ್ ಹೊಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ