ಮಾರಿಯಮ್ಮ ದೇವಿಕರಗ ಮಹೋತ್ಸವ
Team Udayavani, May 21, 2018, 3:51 PM IST
ಭದ್ರಾವತಿ: ನ್ಯೂಟೌನ್ ಆಂಜನೇಯ ಅಗ್ರಹಾರದ ಶ್ರೀ ಮಾರಿಯಮ್ಮ ದೇವಿಯ ಕರಗ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು. ಅಮ್ಮನವರಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ ಮಾಡಲಾಯಿತು. ಭಕ್ತಾದಿಗಳಿಗೆ
ತೀರ್ಥಪ್ರಸಾದ ವಿತರಿಸಲಾಯಿತು.
ಮಧ್ಯಾಹ್ನ ಮಿಲಿó ಕ್ಯಾಂಪ್ನ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿರುವ ಶ್ರೀನಿವಾಸ ಸ್ವಾಮಿ ದೇವಸ್ಥಾನದಿಂದ ಜೋಡಿಕರಗದೊಂದಿಗೆ ಮೆರವಣಿಗೆಯ ಮೂಲಕ ಅಮ್ಮನವರನ್ನು ದೇವಾಲಯಕ್ಕೆ ಕರೆ ತರಲಾಯಿತು.
ಇದಕ್ಕೂ ಮೊದಲು ಭಕ್ತಾದಿಗಳಿಂದ ದೇವಸ್ಥಾನದ ಆವರಣದಲ್ಲಿ ಅಂಬಲಿ ಸಮರ್ಪಣೆ ಮಜ್ಜಿಗೆ, ತಂಪುಪಾನೀಯ
ವಿತರಣೆ ನಡೆಯಿತು.
ನಗರಸಭಾ ಸದಸ್ಯ ಗುಣಶೇಖರ್, ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಧಾನ ಅರ್ಚಕರು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು ಇನ್ನಿತರರು ಇದ್ದರು.
ನ್ಯೂಟೌನ್, ವಿದ್ಯಾಮಂದಿರ, ಹುಡ್ಕೊ ಕಾಲೋನಿ, ಜನ್ನಾಪುರ ಸೇರಿದಂತೆ ವಿವಿಧೆಡೆಗಳಿಂದ ಸಾವಿರಾರು ಭಕ್ತಾಗಳು
ಪಾಲ್ಗೊಂಡಿದ್ದರು. ಗಮನ ಸೆಳೆದ: ಕರಗ ಮಹೋತ್ಸವದಲ್ಲಿ ಕಾವಡಿ ಹರಕೆಯೊತ್ತ ಭಕ್ತರೊಬ್ಬರು ನೋಡುಗರ
ಗಮನ ಸೆಳೆದರು. ಸುಮಾರು 12 ಉದ್ದ ಕಬ್ಬಿಣದ ತ್ರಿಶೂಲ ಬಾಯಿ ಮೂಲಕ ಚುಚ್ಚಿಕೊಂಡು ಸುಮಾರು ಅರ್ಧ ಕಿ.ಮೀ ನಷ್ಟು ಮೆರವಣಿಗೆಯಲ್ಲಿ ಸಾಗಿ ಅಮ್ಮನವರಿಗೆ ಹರಕೆ ಸಮರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ
ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ
B.Y. Raghavendra: ಇಂಟರ್ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್ ಮತಬೇಟೆ
Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ