ಅನಧಿಕೃತ ಸಮಿತಿಯಿಂದ ಮಾರಿಕಾಂಬಾ ದೇವಸ್ಥಾನ ನಿರ್ವಹಣೆ ; ಎಂ.ನಾಗರಾಜ್ ಆರೋಪ


Team Udayavani, Jun 29, 2022, 5:56 PM IST

ಅನಧಿಕೃತ ಸಮಿತಿಯಿಂದ ಮಾರಿಕಾಂಬಾ ದೇವಸ್ಥಾನ ನಿರ್ವಹಣೆ ; ಎಂ.ನಾಗರಾಜ್ ಆರೋಪ

ಸಾಗರ: ಹಾಲಿ ಮಾರಿಕಾಂಬಾ ದೇವಸ್ಥಾನವನ್ನು ನಿರ್ವಹಣೆ ಮಾಡುತ್ತಿರುವುದು ಅನಧಿಕೃತ ಸಮಿತಿಯಾಗಿದ್ದು, ನಮ್ಮದು ನೋಂದಾವಣೆಗೊಂಡಿರುವ ಅಧಿಕೃತ ವ್ಯವಸ್ಥಾಪಕ ಸಮಿತಿಯಾಗಿದೆ. ನಾವು ಯಾವುದೇ ಅಧಿಕಾರದ ಆಸೆಗಾಗಿ ವ್ಯವಸ್ಥಾಪಕ ಸಮಿತಿ ರಚಿಸಿಲ್ಲ. ಬದಲಾಗಿ ದೇವಸ್ಥಾನ ಆಡಳಿತ ವ್ಯವಸ್ಥೆ ಅರ್ಹರ ಕೈಗೆ ತಲುಪಬೇಕು ಎನ್ನುವ ಉದ್ದೇಶದಿಂದ ನೂತನ ಸಮಿತಿಯನ್ನು ನೋಂದಾವಣೆ ಮಾಡಲಾಗಿದೆ ಎಂದು ನೋಂದಾಯಿತ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಉಪಾಧ್ಯಕ್ಷ ಎಂ.ನಾಗರಾಜ್ ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲಿ ಇರುವ ಸಮಿತಿಯನ್ನು ಜಾತ್ರೆ ನಿರ್ವಹಿಸಲು ರಚಿಸಲಾಗಿತ್ತು. ಆದರೆ ಕಳೆದ 15 ವರ್ಷಗಳಿಂದ ಸಮಿತಿಯು ಲೆಕ್ಕಪತ್ರವನ್ನು ಕೊಡದೆ, ಸರ್ವಸದಸ್ಯರ ಸಭೆಯನ್ನು ಸರಿಯಾಗಿ ಕರೆಯದೆ, ಭ್ರಷ್ಟಾಚಾರದಲ್ಲಿ ಮುಳುಗಿ ಅಧಿಕಾರಕ್ಕೆ ಅಂಟಿಕೊಂಡು ಕುಳಿತಿದೆ ಎಂದು ಆರೋಪಿಸಿದರು.

ಈಚೆಗೆ ಎಲ್ಲರ ಒತ್ತಡಕ್ಕೆ ಮಣಿದು ಸರ್ವಸದಸ್ಯರ ಸಭೆಯನ್ನು ಕರೆದಿದ್ದ ವ್ಯವಸ್ಥಾಪಕ ಸಮಿತಿ ಅರ್ಧಕ್ಕೆ ಸಭೆಯನ್ನು ನಿಲ್ಲಿಸಿ, 17 ಜನ ಹೊಸಬರನ್ನು ಸೇರಿಸಿಕೊಳ್ಳುತ್ತೇವೆ ಎಂದು ಹೇಳಿತ್ತು. ಸಭೆಯಲ್ಲಿ 15 ವರ್ಷದ ಲೆಕ್ಕಪತ್ರವನ್ನು ಒಂದೇ ಬಾರಿ ನೀಡಿದೆ. ಇದರಿಂದಾಗಿ ಸದಸ್ಯರಿಗೆ ಲೆಕ್ಕಪತ್ರ ನೋಡಲು ಸಹ ಆಗಿಲ್ಲ. ಹಾಲಿ ಆಡಳಿತ ನಡೆಸುತ್ತಿರುವ ಸಮಿತಿ ವಿರುದ್ಧ ಸಾಕಷ್ಟು ಭ್ರಷ್ಟಾಚಾರದ ಆರೋಪ ಇದೆ. ಸಮಿತಿ ನಡೆಸುತ್ತಿರುವ ಭ್ರಷ್ಟಾಚಾರದ ವಿರುದ್ಧ ಸಾಕಷ್ಟು ಮನವಿ ಸಲ್ಲಿಸಿದ್ದಾಗ್ಯೂ ಕಾನೂನಾತ್ಮಕ ಚೌಕಟ್ಟು ಹೊಂದಿಲ್ಲದೆ ಇರುವುದರಿಂದ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವ್ಯವಸ್ಥೆಯನ್ನು ಕಾನೂನು ಚೌಕಟ್ಟಿನೊಳಗೆ ತರಲು ನೋಂದಾಯಿತ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.

ಹಾಲಿ ನೋಂದಾಯಿತಸಮಿತಿಯಲ್ಲಿ ನೋಂದಾಯಿತ ಸದಸ್ಯರು ಇದ್ದಾರೆ. ಹಾಲಿ ಸಮಿತಿಯನ್ನು ಬರಕಾಸ್ತುಗೊಳಿಸಿ ನಮ್ಮ ಸಮಿತಿಗೆ ಅಧಿಕಾರ ಹಸ್ತಾಂತರಿಸುವಂತೆ ಜಿಲ್ಲಾಧಿಕಾರಿಗಳಿಗೆ, ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಸಮಿತಿಯು ತಕ್ಷಣ ಸರ್ವಸದಸ್ಯರ ಸಭೆಯನ್ನು ಕರೆದು ಸದಸ್ಯರು ಯಾರನ್ನು ಆಯ್ಕೆ ಮಾಡುತ್ತಾರೋ ಅವರು ಅಧಿಕಾರ ಮುಂದುವರೆಸಿಕೊಂಡು ಹೋಗಲು ಅವಕಾಶ ಕಲ್ಪಿಸಬೇಕು. ಹಾಲಿ ಸಮಿತಿಯು ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಹೆಸರಿನಲ್ಲಿ ಯಾವುದೇ ರೀತಿಯ ವಹಿವಾಟು ನಡೆಸಿದರೆ ಅವರ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ. ಶಾಸಕರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಮಂಜುನಾಥ ಎಸ್.ಎಲ್., ಕಾರ್ಯದರ್ಶಿ ವಿ.ಗುರು, ಸಹ ಕಾರ್ಯದರ್ಶಿ ಜಿ.ಚಂದ್ರಕಾಂತ್, ಸದಸ್ಯರಾದ ಚಂದ್ರಪ್ಪ ಎಲ್., ಕೆ.ಸಿದ್ದಪ್ಪ, ಪ್ರಶಾಂತ್, ಹೇರಂಬ, ಕೆ.ವಿ.ಪ್ರವೀಣಕುಮಾರ್, ರಾಘವೇಂದ್ರ, ನಾರಾಯಣಪ್ಪ, ಗಣಪತಿ ನೇರಲಗಿ, ಕೇಶವ ಕಾಮತ್, ಮಹಾಬಲೇಶ್ವರ ಹಾಜರಿದ್ದರು.

ಟಾಪ್ ನ್ಯೂಸ್

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.