27ರ ಬಂದ್‌ಗೆ ವ್ಯಾಪಕ ಬೆಂಬಲ ;ಶಿವಮೊಗ್ಗ ಯಶಸ್ವಿಗೊಳಿಸಲು ನಿರ್ಧಾರ


Team Udayavani, Sep 25, 2021, 3:52 PM IST

bandh

ಸಂಯುಕ್ತ ಕಿಸಾನ್‌ ಮೋರ್ಚಾದಿಂದ ಕರಪತ್ರ ಬಿಡುಗಡೆ

  ಶಿವಮೊಗ್ಗ: ವಿವಾದಿತ ಕೃಷಿ ಕಾನೂನುಗಳನ್ನು ಜಾರಿಗೊಳಿಸಿ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಸಂಯುಕ್ತ ಮೋರ್ಚಾ ಸೆ. 27ಕ್ಕೆ ಭಾರತ್‌ ಬಂದ್‌ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಸಂಯುಕ್ತ ಕಿಸಾನ್‌ ಮೋರ್ಚಾ ಭಾರತ್‌ ಬಂದ್‌ಗೆ ಕರೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್‌.ಆರ್‌. ಬಸವರಾಜಪ್ಪ ಮಾತನಾಡಿ, ಕಳೆದ 10 ತಿಂಗಳಿಂದ ಕೃಷಿ ಕಾಯ್ದೆಗಳನ್ನು ವಿರೋ ಧಿಸಿ, ದೆಹಲಿಯಲ್ಲಿ ನಮ್ಮ ರೈತರು ಪ್ರತಿಭಟನೆ ಮಾಡುತ್ತಿದ್ದರೂ ಕೂಡ ಸರ್ಕಾರ ಮೌನ ವಹಿಸಿದೆ. ಇದೊಂದು ಅತ್ಯಂತ ನಾಚಿಕೆಗೇಡಿನ ವಿಷಯವಾಗಿದೆ. ಇಡೀ ಪ್ರಪಂಚದಲ್ಲಿ ಇಂತಹ ಪ್ರತಿಭಟನೆಗೆ ಸರ್ಕಾರಗಳು ಉತ್ತರ ಹೇಳದಿರುವುದು ಅತ್ಯಂತ ಅವಮಾನಕರವಾಗಿದೆ ಎಂದರು. ಕೇಂದ್ರ ಸರ್ಕಾರ ರೈಲ್ವೆ, ಅಂಚೆ, ವಿಮಾನ ಸೇರಿದಂತೆ ಎಲ್ಲ ಕ್ಷೇತ್ರಗಳನ್ನೂ ಖಾಸಗೀಕರಣಕ್ಕೆ ಒಪ್ಪಿಸುತ್ತಿದೆ. ಈಗ ಕೃಷಿ ಕ್ಷೇತ್ರವೂ ಕೂಡ ಖಾಸಗೀಕರಣವಾಗುತ್ತಿದ್ದು, ರೈತರು ಅನಾಥರಾಗುವ ಕಾಲ ದೂರವಿಲ್ಲ. ಬೀಜ, ಗೊಬ್ಬರ, ತಂತ್ರಜ್ಞಾನ ಸೇರಿದಂತೆ ಎಲ್ಲವೂ ಕೂಡ ಖಾಸಗೀಕರಣವಾಗುತ್ತದೆ. ಕೃಷಿ ಪಾರಂಪರಿಕವಾದದ್ದು, ಇಂತಹ ಕೃಷಿಯನ್ನು ಈಗ ಖಾಸಗಿ ಕಂಪೆನಿಗಳ ಕೈಗೆ ಕೊಟ್ಟು ಅವರ ಬದುಕನ್ನು ಸರ್ಕಾರ ಕಸಿದುಕೊಳ್ಳುತ್ತಿದೆ. ರೈತ ಕೃಷಿ ಶಕ್ತಿಯನ್ನೇ ಕಳೆದುಕೊಳ್ಳುವ ಕಾಲ ದೂರವಿಲ್ಲ. ಇದೊಂದು ರೈತ ಸಂಸ್ಕೃತಿಯ ನಾಶ ಎಂದರು. ಕೆ.ಟಿ. ಗಂಗಾಧರ್‌ ಮಾತನಾಡಿ, ದೆಹಲಿಯಲ್ಲಿ ರೈತರು ನಡೆಸುತ್ತಿರುವ ಚಳವಳಿ ಐತಿಹಾಸಿಕವಾದದ್ದು, ಇದೊಂದು ಅಹಿಂಸೆಯ ಚಳವಳಿ. ಹಗಲು- ರಾತ್ರಿ ಚಳವಳಿ ನಡೆಸುತ್ತಿದ್ದಾರೆ. ಇಂತಹ ಚಳವಳಿಯನ್ನು ನಮ್ಮ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಾಯೋಜಿತ ಎಂದು ಕರೆಯುತ್ತಿರುವುದು ಅತ್ಯಂತ ದುರದೃಷ್ಟಕರ. ಹಾಗೆ ರೈತರನ್ನು ಜರಿಯುವ ಕೆಲಸಕ್ಕೆ ಬೊಮ್ಮಾಯಿಯವರಂತಹ ಭಾಷಾ ಪಂಡಿತರು ಮಾತನಾಡುತ್ತಿರುವುದು ಅತ್ಯಂತ ಹೇಯಕರ. ಚಳವಳಿಯನ್ನೇ ಮರೆತ ನಾಯಕರಿವರು ಎಂದು ದೂರಿದರು.

ಬಂದ್‌ನ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಎಂ. ಶ್ರೀಕಾಂತ್‌, ಸೆ.27ರಂದು ಶಿವಮೊಗ್ಗ ಬಂದ್‌ ಅತ್ಯಂತ ಯಶಸ್ವಿಯಾಗಲಿದೆ. ಎಂದರು. ಕೆ.ಎಲ್‌. ಅಶೋಕ್‌ ಮಾತನಾಡಿ, ಒಕ್ಕೂಟ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋ ಧಿಸುವುದರ ಜೊತೆಗೆ ವಿದ್ಯುತ್‌ ಮಸೂದೆ ರದ್ದು ಮಾಡುವಂತೆ, ಇಂಧನಗಳ ಬೆಲೆ ಇಳಿಸುವಂತೆ, ಭೂ ಸ್ವಾ ಧೀನ ಕಾಯ್ದೆ ಮತ್ತು ನೂತನ ಶಿಕ್ಷಣ ನೀತಿಗಳ ರದ್ದತಿಗೂ ಆಗ್ರಹಿಸಲಾಗುವುದು. ಒಟ್ಟಾರೆ, ಶಿವಮೊಗ್ಗ ಬಂದ್‌ ಅತ್ಯಂತ ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕೆ.ಪಿ. ಶ್ರೀಪಾಲ್‌, ಕೆ.ಎಲ್‌. ಅಶೋಕ್‌, ಎನ್‌. ರಮೇಶ್‌, ಎಸ್‌. ಶಿವಮೂರ್ತಿ, ಝೀಫಾನ್‌, ಆಫ್ತಾಪ್‌ ಪರ್ವೀಜ್‌, ಟಿ.ಎಚ್‌. ಹಾಲೇಶಪ್ಪ, ಶಾಂತವೀರ ನಾಯ್ಕ ಇತರರು ಇದ್ದರು.

27ರಂದು ಶಿರಾಳಕೊಪ್ಪ ಸಂಪೂರ್ಣ ಬಂದ್‌

ಜಯಪ್ಪ ಗೌಡ ಶಿರಾಳಕೊಪ್ಪ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ವಿವಿಧ ಕಾಯ್ದೆಗಳನ್ನು ವಿರೋ ಧಿಸಿ ಸೆ. 27 ರಂದು ನಡೆಯುವ ಭಾರತ್‌ ಬಂದ್‌ ದಿನದಂದು ಸಂಪೂರ್ಣ ಶಿರಾಳಕೊಪ್ಪ ಬಂದ್‌ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಜಯಪ್ಪ ಗೌಡ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ತಿಂಗಳಿಂದ ದೆಹಲಿಯಲ್ಲಿ ದೇಶದ ಎಲ್ಲಾ ಭಾಗದ ರೈತರು ಚಳುವಳಿ ಮಾಡುತ್ತಿದ್ದಾರೆ. ಆದರೆ ಸೌಜನ್ಯಕ್ಕಾದರೂ ಈ ಕಿವುಡು ಸರ್ಕಾರ ತಿದ್ದುಪಡಿ ಮಾರ್ಪಾಡನ್ನು ಸಂವಿಧಾನಬದ್ಧವಾಗಿ ಮಾಡಲು ಸಲಹೆ- ಸೂಚನೆ ತೆಗೆದುಕೊಳ್ಳುತ್ತಿಲ್ಲ. ಇಂತಹ ಸರ್ಕಾರಗಳಿಗೆ ಬುದ್ಧಿ ಕಲಿಸಬೇಕಾದರೆ ನಾವು ಅನಿವಾರ್ಯವಾಗಿ ಬೀದಿಗಿಳಿದು ಹೋರಾಟ ಮಾಡಬೇಕಾಗಿದೆ ಎಂದು ಹೇಳಿದರು. ತಾಲೂಕು ಗೌರವಾಧ್ಯಕ್ಷ ಪ್ಯಾಟಿ ಈರಪ್ಪ ಮಾತನಾಡಿ, ಕುಡಿಯುವ ನೀರಿಗೆ ಮೀಟರ್‌ ಜೋಡಿಸಿ ತೆರಿಗೆಯನ್ನು ಇಲ್ಲಿಯವರೆಗೂ ಆಡಳಿತ ನಡೆಸಿದ ಯಾವ ಸರ್ಕಾರಗಳೂ ಹಾಕಿಲ್ಲ. ಆದರೆ ಅ ಧಿಕಾರದಲ್ಲಿರುವ ಈ ಸರ್ಕಾರ ಇಂತಹ ದುರಾಲೋಚನೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಇಂತಹ ಲಜ್ಜೆಗೆಟ್ಟ ಸರ್ಕಾರಗಳಿಗೆ ಬಿಸಿ ಮುಟ್ಟಿಬೇಕಾಗಿದೆ. ಈಗ ರೈತಸಂಘದ ಒಕ್ಕೂಟಗಳು ಕರೆದಿರುವ ಭಾರತ್‌ ಬಂದ್‌ಗೆ ಶಿಕಾರಿಪುರ ತಾಲೂಕನ್ನು ರಾಜ್ಯ ರೈತಸಂಘವು ಸಂಪೂರ್ಣ ಬೆಂಬಲ ನೀಡುವುದರ ಜೊತೆ ಶಿರಾಳಕೊಪ್ಪ ಪಟ್ಟಣವನ್ನು ಬಂದ್‌ ಮಾಡಲು ಸಂಘ ತೀರ್ಮಾನಿಸಿದೆ ಎಂದರು. ದೇಶದ ರೈತರ ಆದಾಯವನ್ನು ದ್ವಿಗುಣ ಮಾಡುವುದಾಗಿ ಹೇಳಿ ಆಡಳಿತ ನಡೆಸುತ್ತಿರುವ ಸರ್ಕಾರಕ್ಕೆ 7 ವರ್ಷ ಕಳೆದಿದೆ. ಯಾವಾಗ ರೈತರ ಆದಾಯವನ್ನು ದ್ವಿಗುಣ ಮಾಡುವುದು ಈ ವಿಷಯ ಹೇಳಿಕೆಗೆ ಮಾತ್ರ ಸೀಮಿತವಾಗಿದೆ. ಕಾರ್ಯರೂಪಕ್ಕೆ ಬರಲಿಲ್ಲ ಎಂದು ಜಿಲ್ಲಾ ಉಪಾಧ್ಯಕ್ಷ ಪುಟ್ಟನ ಗೌಡ ಅಸಮಾಧಾನ ವ್ಯಕ್ತಪಡಿಸಿದರು. ಸೊರಬ ತಾಲೂಕು ರೈತಸಂಘದ ಅಧ್ಯಕ್ಷ ಹಾಲಪ್ಪ ಗೌಡ, ಗುತ್ಯಪ್ಪ ಕೋಲ್ಗುಣಸಿ, ಗುರು ಶಿರಾಳಕೊಪ್ಪ, ಬಸವರಾಜಪ್ಪ ಬಳ್ಳಿಗಾವಿ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.