ಜಯಂತಿಗಳು ಸಮಾಜ ಕಟ್ಟುವ ವೇದಿಕೆಯಾಗಲಿ


Team Udayavani, Apr 5, 2021, 9:06 PM IST

ದ್ಗಹಯತಹ್ಬ

ಶಿವಮೊಗ್ಗ: ಜಯಂತಿಗಳನ್ನು ಜಾತ್ರೆಗಳಂತೆ ಮಾಡದೆ ಸಮಾಜವನ್ನು ಕಟ್ಟುವ ಕೆಲಸಕ್ಕೆ ವೇದಿಕೆಯಾಗಿ ಬಳಿಸಿಕೊಳ್ಳಬೇಕು. ಹಲವು ಸಮುದಾಯಕ್ಕೆ ಸಂಬಂಧಪಟ್ಟ ಮಠಗಳು ಲಾಬಿ ಮಾಡುತ್ತಿದ್ದು, ಸರಕಾರದಿಂದ ಅನುದಾನದ ತರುತ್ತಿವೆ. ನೊಳಂಬ ಸಮಾಜ ಕೂಡ ಈ ನಿಟ್ಟಿನಲ್ಲಿ ಪ್ರಯತ್ನಿಸಲಿ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ಸಲಹೆ ನೀಡಿದರು.

ನಗರದ ನಂದಿ ವಿದ್ಯಾಸಂಸ್ಥೆಯಲ್ಲಿ ನೊಳಂಬ ವೀರಶೈವ ಯುವ ವೇದಿಕೆ, ನಂದಿ ವಿದ್ಯಾಸಂಸ್ಥೆ, ನಂದಿ ಮಹಿಳಾ ವೇದಿಕೆ ವತಿಯಿಂದ ಭಾನುವಾರ ಆಯೋಜಿಸಿದ್ದ ಭಕ್ತಿ ಹಾಗೂ ದೇಣಿಗೆ ಸಮರ್ಪಣೆ ಮತ್ತು ಗಣ್ಯರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಜ್ಯ ಸರಕಾರ ಹಲವು ಜಯಂತಿಗಳ ಆಚರಣೆಗೆ ಅನುದಾನ ಮಂಜೂರು ಮಾಡುತ್ತಿದೆ. ಅದನ್ನು ಬಳಸಿಕೊಂಡು ಸಮಾಜದಲ್ಲಿ ಸಂಘಟನೆ ತರಲು ಪ್ರಯತ್ನಿಸಬೇಕು. ಸಮಾಜ ಯುವಪೀಳಿಗೆ ಉತ್ತಮ ವಿದ್ಯಾರ್ಹತೆ ಹೊಂದಿ ಉನ್ನತ ಸ್ಥಾನಕ್ಕೆ ಹೋಗಬೇಕು. ಅದಕ್ಕಾಗಿ ಬಡವರಿಗೆ ವಿದ್ಯೆ ಮತ್ತು ದಾಸೋಹ ನೀಡಬೇಕು ಎಂದು ಹೇಳಿದರು.

ಸೂಡಾ ಅಧ್ಯಕ್ಷ ಎಸ್‌.ಎಸ್‌. ಜ್ಯೋತಿಪ್ರಕಾಶ್‌ ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ವೀರಶೈವ ಸಮಾಜದ ಅಭಿವೃದ್ಧಿಗೆ ಜಿಲ್ಲೆಯಲ್ಲಿ 12-15 ಕೋಟಿ ರೂ.ಅನುದಾನ ಮಂಜೂರು ಮಾಡಿದ್ದಾರೆ. ಅವರು ಅಧಿಕಾರಕ್ಕೆ ಬಂದ ಬಳಿಕ ಸಮುದಾಯದ ಅಭಿವೃದ್ಧಿಯಾಗಿದೆ.

ವೀರಶೈವ ಲಿಂಗಾಯತ ಸಮಾಜವನ್ನು 2ಎಗೆ ಸೇರಿಸುವುದಕ್ಕಾಗಿ ಬಿ.ಎಸ್‌. ಯಡಿಯೂರಪ್ಪ ಅವರು ಪ್ರಯತ್ನಿಸಿದ್ದರು. ಆದರೆ, ಆಗ ಸರಿಯಾದ ಬೆಂಬಲ ಸಿಗದ ಕಾರಣದಿಂದ ಫಲಿಸಲಿಲ್ಲ. ಈಗ ಮಠಗಳು ಮನಸ್ಸು ಮಾಡಿದ್ದಲ್ಲಿ ಎಲ್ಲರನ್ನೂ ಸಂಘಟಿಸಿ ಈ ನಿಟ್ಟಿನಲ್ಲಿ ಕಾರ್ಯಗತರಾಗಬಹುದು. ವೀರಶೈವ ಸಮಾಜದ ಯುವಪೀಳಿಗೆ ಮುಂದೆ ಬರಬೇಕು. ಸಮಾಜವನ್ನು ಸಂಘಟಿಸಬೇಕು. ಕಾಯಕಕ್ಕೆ ಪ್ರಾಧಾನ್ಯತೆ ನೀಡಬೇಕು ಎಂದರು. ನಂದಿಗುಡಿ ಬೃಹನ್ಮಠ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ನೊಳಂಬ ವೀರಶೈವ ಯುವ ವೇದಿಕೆ ಅಧ್ಯಕ್ಷ ಜೆ.ಪಿ. ಚಂದ್ರು ಅಧ್ಯಕ್ಷತೆ ವಹಿಸಿದ್ದರು. ವಕೀಲ ಡಿ.ಎನ್‌. ಹಾಲಸಿದ್ದಪ್ಪ ಉಪನ್ಯಾಸ ನೀಡಿದರು. ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ, ಶ್ರೀ ಬಸವೇಶ್ವರ ಸಮಾಜ ಸೇವಾಸಂಘದ ಅಧ್ಯಕ್ಷ ಎನ್‌.ಜೆ. ರಾಜಶೇಖರ್‌, ಕೆ.ಎಸ್‌.ಆರ್‌.ಟಿ.ಸಿ. ನಿರ್ದೇಶಕ ಪಿ. ರುದ್ರೇಶ್‌, ಕಸಾಪ ಅಧ್ಯಕ್ಷ ಡಿ.ಬಿ. ಶಂಕರಪ್ಪ, ಕೃಷಿ ಉಪ ನಿರ್ದೇಶಕ ಡಿ.ಎಂ. ಬಸವರಾಜ್‌, ಜಾನಪದ ಗಾಯಕ ಕೆ. ಯುವರಾಜ್‌, ವೇದಿಕೆ ಸಹ ಕಾರ್ಯದರ್ಶಿ ಜಯರಾಜ್‌ ಗಾಮದ, ಈಶ್ವರ್‌ ಎಣ್ಣೆರ್‌ ಎ.ವಿ. ನಟರಾಜ್‌ ಇತರರಿದ್ದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.