ಹಾಲಿನ ದರ ಏರಿಸದಿದ್ದರೆ 23ರಂದು ಕೆಎಂಎಫ್‌ಗೆ ಮುತ್ತಿಗೆ

ಶೇ. 50 ರಿಯಾಯತಿಯಲ್ಲಿ ಪಶು ಆಹಾರ ಪೂರೈಸಿ

Team Udayavani, Mar 12, 2022, 4:45 PM IST

16

ಶಿವಮೊಗ್ಗ: ಹಾಲು ಒಕ್ಕೂಟಗಳು ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತೀ ಲೀಟರ್‌ಗೆ ಕನಿಷ್ಟ 30 ರೂ. ಗೆ ಏರಿಸದಿದ್ದರೆ ಮಾ.23 ರಂದು ಕೆಎಂಎಫ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಹಾಲು ಉತ್ಪಾದಕರ ವೇದಿಕೆ ರಾಜ್ಯ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಈಗಾಗಲೇ ರೈತರಿಂದ ಖರೀದಿ ಮಾಡುವ ಪ್ರತಿ ಲೀಟರ್‌ ಹಾಲಿಗೆ 2.50 ರೂ. ಏರಿಕೆ ಮಾಡಿರುವುದಾಗಿ ಘೋಷಿಸಲಾಗಿದೆ. ಇದು ಉತ್ಪಾದಕರಿಗೆ ಯಾವುದಕ್ಕೂ ಸಾಕಾಗುತ್ತಿಲ್ಲ. ಒಕ್ಕೂಟಗಳು ಲಾಭ ಮಾಡಿಕೊಳ್ಳುವುದರ ಜತೆಗೆ ದುಂದು ವೆಚ್ಚ ಮಾಡುತ್ತಿವೆ. ಇದರಿಂದಾಗಿ ರೈತರಿಗೆ ಹೆಚ್ಚಿನ ಬೆಲೆ ನೀಡದೆ ವಂಚಿಸಲಾಗುತ್ತಿದೆ ಎಂದು ದೂರಿದರು.

ಕೊರೊನಾ ನೆಪ ಹೇಳಿ ಹಾಲು ಮಾರಾಟವಾಗುತ್ತಿಲ್ಲವೆಂದು ಖರೀದಿ ದರವನ್ನು ಕಡಿಮೆ ಮಾಡಲಾಗಿತ್ತು. ಆದರೆ ಉತ್ಪಾದಕರು ಈ ಸಂಬಂಧ ಒಕ್ಕೂಟಗಳ ಮೇಲೆ ಯಾವುದೇ ಒತ್ತಡ ಹೇರಿರಲಿಲ್ಲ. ನಷ್ಟ ಸಹಿಸಿಕೊಂಡು ಹಾಲು ಪೂರೈಸುತ್ತಿದ್ದರು. ಆದರೆ ಈಗ ಹಾಲಿಗೆ ಹೆಚ್ಚಿನ ಬೇಡಿಕೆ ಇದೆ. ಹಾಲಿನ ಉಪ ಉತ್ಪನ್ನಗಳಿಗೂ ಬೇಡಿಕೆ ಇದ್ದರೂ ಅದನ್ನು ಪರಿಗಣಿಸದೆ ರೈತರಿಗೆ ಕಡಿಮೆ ಬೆಲೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಉತ್ಪಾದಕರಿಂದ ಖರೀದಿಸುವ ಹಾಲಿಗೆ ವೈಜ್ಞಾನಿಕ ಹಾಗೂ ಏಕರೂಪದ ದರ ರಾಜ್ಯಾದ್ಯಂತ ನಿಗದಿ ಮಾಡಬೇಕು. ಆಹಾರ ಸುರಕ್ಷತಾ ಮಾನದಂಡ ಕಾಯ್ದೆ ಅನ್ವಯ ಹಾಲು ಖರೀದಿಯ ಕನಿಷ್ಠ ಗುಣಮಟ್ಟ ಕಾಯ್ದೆ ಅನ್ವಯ ತಕ್ಷಣ ಜಾರಿಗೊಳಿಸಿ 2017 ರಿಂದ ರಾಜ್ಯದ ಹಾಲು ಉತ್ಪಾದಕರಿಗೆ ಆಗಿರುವ ನಷ್ಟವನ್ನು ನೀಡುವಂತೆ ಆಗ್ರಹಿಸಿದರು.

ಜಿಡ್ಡಿನಾಂಶ ಹಾಗೂ ಎಸ್‌ಎನ್‌ಎಫ್‌ ಆಧಾರದ ಮೇಲೆ ಉತ್ಪಾದಕರಿಗೆ ದರ ನೀಡುವ ವಿಧಾನವನ್ನು ಕೂಡಲೇ ಜಾರಿಗೊಳಿಸಬೇಕು. ಪಶು ಆಹಾರವನ್ನು ಶೇ.50 ರ ರಿಯಾಯಿತಿಯಲ್ಲಿ ಪೂರೈಸಬೇಕು. ಹಾಲು ಒಕ್ಕೂಟಗಳಲ್ಲಿ ನೇಮಕ ಮಾಡಿಕೊಳ್ಳುವಾಗ ಹಾಲು ಉತ್ಪಾದಕರ ಮಕ್ಕಳಿಗೆ ಶೇ. 50 ರಷ್ಟು ಸ್ಥಾನ ನೀಡುವಂತೆ ಒತ್ತಾಯಿಸಿದರು.

ಒಕ್ಕೂಟಗಳಲ್ಲಿ ಅನವಶ್ಯಕವಾಗಿ ಸಿಬ್ಬಂದಿ ನೇಮಕ ಮಾಡಿಕೊಳ್ಳುವುದನ್ನು ನಿಯಂತ್ರಿಸಬೇಕು. ಗುತ್ತಿಗೆ ಕಾರ್ಮಿಕರನ್ನು ಕಡಿಮೆ ಮಾಡಬೇಕು. ಸಂಘಗಳ ಸಿಬ್ಬಂದಿಗೆ ಪಿಎಫ್‌, ಗ್ರಾಜ್ಯುಟಿ, ನಿವೃತ್ತಿ ವೇತನ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ 14 ಹಾಲು ಒಕ್ಕೂಟಗಳಿದ್ದು, ಇವುಗಲ್ಲಿ 9 ಒಕ್ಕೂಟಗಳು ನಷ್ಟದಲ್ಲಿರುವುದಾಗಿ ತೋರಿಸಲಾಗಿದೆ. ಉಳಿದವು ಮಾತ್ರ ಲಾಭದಲ್ಲಿವೆ ಎಂದು ಹೇಳಲಾಗಿದೆ. ಎಲ್ಲಾ ಒಕ್ಕೂಟಗಳು ಮಾರ್ಚ್‌ ತಿಂಗಳಲ್ಲಿ ಮಾತ್ರ ಲಾಭದಲ್ಲಿವೆ ಎಂದು ತೋರಿಸಿ ಸರ್ಕಾರದಿಂದ ಬರುವ ಲಾಭ ಪಡೆಯಲು ಯತ್ನಿಸುತ್ತಿವೆ ಎಂದರು.

ಒಂದು ಲೀಟರ್‌ ಹಾಲು ಉತ್ಪಾದನೆ ಮಾಡಲು 30 ರಿಂದ 40 ರೂ. ವೆಚ್ಚವಾಗುತ್ತದೆ. ಇದನ್ನು ಇದುವರೆಗೂ 22 ರೂ. ಗೆ ಮಾರಾಟ ಮಾಡಲಾಗುತಿತ್ತು. ಈಗ ಒಕ್ಕೂಟಗಳು ಕೇವಲ 2.50 ರೂ. ಮಾತ್ರ ಹೆಚ್ಚಳ ಮಾಡಿವೆ. ಇದು ತೀರಾ ಕಡಿಮೆಯಾಗಿರುವುದರಿಂದ ಕೂಡಲೇ ಪ್ರತೀ ಲೀಟರ್‌ಗೆ 30 ರೂ. ಹೆಚ್ಚಳ ಮಾಡಿ ಖರೀದಿಸುವಂತೆ ಆಗ್ರಹಿಸಿದರು.

ಎಚ್‌.ಎಲ್‌. ಷಡಾಕ್ಷರಿ, ಜೈರಾಮ್‌ ಗೋಂದಿ, ಲೋಕೇಶ್‌ ಜಿ. ಕಲ್ಲುಕೊಪ್ಪ, ಶ್ರೀನಿವಾಸ್‌, ಗಜೇಂದ್ರ, ವೆಂಕಟೇಶ್‌, ಟಿ. ರಾಜಣ್ಣ ಮತ್ತಿತರರು ಇದ್ದರು.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.