ಸಾಗರ: ಬಲಾತ್ಕಾರವಾಗಿ ಖಾಸಗಿ ಜಾಗದಲ್ಲಿ ಕಲ್ಲುಕ್ವಾರೆ; ರಕ್ಷಣೆಗೆ ಮಹಿಳೆ ಮೊರೆ


Team Udayavani, Apr 26, 2022, 3:58 PM IST

Untitled-1

ಸಾಗರ: ತ್ಯಾಗರ್ತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತ್ಯಾಗರ್ತಿ ಗ್ರಾಮದ ಸರ್ವೆ ನಂ. 37 ರಲ್ಲಿರುವ ನಮ್ಮ ಜಾಗದಲ್ಲಿ ಬಲಾತ್ಕಾರವಾಗಿ ಕಲ್ಲುಕ್ವಾರೆ ನಡೆಸಲಾಗುತ್ತಿದೆ. ಮಾವನವರಿಗೆ ಮಂಜೂರಾದ ಭೂಮಿಯಲ್ಲಿ ಕಲ್ಲುಕ್ವಾರೆ ಜಾಗ ನನ್ನ ಗಂಡನಿಗೆ ಸೇರಿದ್ದಾಗಿದ್ದು, ಬಿಜೆಪಿ ಮುಖಂಡರೋರ್ವರು ಬಲಾತ್ಕಾರವಾಗಿ ಕಲ್ಲುಕ್ವಾರೆ ನಡೆಸಿ ನಮ್ಮನ್ನು ನಿರಾಶ್ರಿತರನ್ನಾಗಿ ಮಾಡುತ್ತಿದ್ದಾರೆ. ಇದರ ಜೊತೆಗೆ ದಿನಬೆಳಗಾದರೆ ಜೀವ ಬೆದರಿಕೆಯನ್ನು ನನಗೆ ಹಾಗೂ ನನಗೆ ಆಶ್ರಯಕೊಟ್ಟ ತಮ್ಮನಿಗೆ ಹಾಕಲಾಗುತ್ತಿದೆ ಎಂದು ಸಂತ್ರಸ್ತೆ ನೇತ್ರಾವತಿ ದೂರಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಆರ್ಥಿಕವಾಗಿ ತೀರ ಸಂಕಷ್ಟದಲ್ಲಿದ್ದೇವೆ. ವಾಸಕ್ಕೆ ಮನೆ ಸಹ ಇಲ್ಲ. ನಾನು ಹಾಗೂ ನನ್ನ ಇಬ್ಬರು ಮಕ್ಕಳು ವಿಷ ಕುಡಿಯುವ ಸ್ಥಿತಿ ನಿರ್ಮಾಣವಾಗಿದೆ. ಕಲ್ಲುಕ್ವಾರೆ ನಿಲ್ಲಿಸಿ ಜಾಗವನ್ನು ನಮಗೆ ಕೊಡದೆ ಹೋದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ಗಣಿ ಇಲಾಖೆ ಅಧಿಕಾರಿ ತಾವು ಬರುವ ಸಮಯವನ್ನು ಗಣಿಗಾರಿಕೆ ಮಾಡುವವರಿಗೆ ಮುಂಚಿತವಾಗಿ ಹೇಳುತ್ತಿರುವ ಅನುಮಾನವಿದ್ದು, ಅವರ ದಾಳಿ ಸಂದರ್ಭಕ್ಕಿಂತ ಮೊದಲು ಕಲ್ಲುಕ್ವಾರೆ ಯಂತ್ರಗಳನ್ನು ತೆಗೆದುಕೊಂಡು ಹೋಗಿರುತ್ತಾರೆ ಎಂದು ಆರೋಪಿಸಿದರು.

ನನ್ನ ಗಂಡ ಮದ್ಯವ್ಯಸನಿಯಾಗಿದ್ದು ಕುಟುಂಬ ನಿರ್ವಹಣೆ ಮಾಡುತ್ತಿಲ್ಲ. ನನ್ನ ಮೈದುನನೋರ್ವರ ಕುಮ್ಮಕ್ಕಿನಿಂದ ನಮ್ಮ ಜಾಗವನ್ನು ಅತಿಕ್ರಮಿಸುವ ಕೆಲಸ ಮಾಡಲಾಗುತ್ತಿದೆ. ಕಲ್ಲುಕ್ವಾರೆ ನಿಲ್ಲಿಸಿ ನಮ್ಮ ಜಾಗ ನಮಗೆ ಬಿಟ್ಟು ಕೊಡಿ ಎಂದು ಕೇಳಿದರೆ ನಮ್ಮನ್ನು ಬೆದರಿಸುವ, ಹಲ್ಲೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ. ಈ ಬಗ್ಗೆ ತಹಶೀಲ್ದಾರ್ ಕಚೇರಿಗೆ, ಪೊಲೀಸ್ ಠಾಣೆಗೆ, ಗ್ರಾಮ ಪಂಚಾಯ್ತಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕಲ್ಲುಕ್ವಾರೆ ನಡೆಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಶಾಸಕರಿಗೆ ಸಹ ಫೋನ್ ಮೂಲಕ ನಮ್ಮ ಸಮಸ್ಯೆ ಹೇಳಿಕೊಂಡಿದ್ದೇವೆ. ತಕ್ಷಣ ನಮ್ಮ ಸಮಸ್ಯೆ ಪರಿಹಾರಕ್ಕೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಮುಂದಾಗಬೇಕು ಎಂದರು.

ಗೋಷ್ಠಿಯಲ್ಲಿ ಸಂಗೀತ, ಮಂಜುನಾಥ, ಸುಪ್ರಿಯ ಹಾಜರಿದ್ದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.