ಅಧಿಕಾರಿಗಳಿಗೆ ಅಭಿವೃದ್ಧಿ ಪಾಠ ಮಾಡಿದ ಸಚಿವ ಆರಗ ಜ್ಞಾನೇಂದ್ರ


Team Udayavani, Aug 24, 2021, 7:59 PM IST

ergfg

ತೀರ್ಥಹಳ್ಳಿ: ತಾಲೂಕಿನಲ್ಲಿ ಕೋವಿಡ್ ಸೋಂಕು  ಹೆಚ್ಚಾಗಿದ್ದು ಈ ಬಗ್ಗೆ ಎಲ್ಲರೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ತಾಲೂಕಿನ ಅಭಿವೃದ್ಧಿಗೆ ಎಲ್ಲಾ ಅಧಿಕಾರಿಗಳ ಸೇವೆ ಅಪಾರ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿದಿದ್ದಾರೆ .

ಪಟ್ಟಣದ  ಶಾಂತವೇರಿ ಗೋಪಾಲ ಗೌಡ ರಂಗ ಮಂದಿರದಲ್ಲಿಂದು ನಡೆದ ಎಲ್ಲಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಎಲ್ಲಾ ಇಲಾಖೆಯ ಅಭಿವೃದ್ಧಿ ಕಡೆ ಗಮನಿಸಬೇಕೆಂದರು.

ತೀರ್ಥಹಳ್ಳಿಯನ್ನ ಸಮಸ್ಯೆ ಮುಕ್ತವನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ತಾಲ್ಲೂಕಿನಲ್ಲಿ  ಅಧಿಕಾರಿಗಳು,ಬೇರೆಡೆ ಹೋಲಿಸಿದರೆ ಒಳ್ಳೆಯ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನೂ ಹೆಚ್ಚಿನ ಕೆಲಸ ಮಾಡುವ ಹೊಣೆಗಾರಿಕೆ ನಿಮ್ಮ ಮೇಲಿದೆ. ನನ್ನ ಹೆಸರು ಉಳಿಸಬೇಕಿದೆ ಎಂದರು.

ಮಳೆಯಿಂದ ಬಿದ್ದ ಮನೆ, ಹಳ್ಳದ ದಂಡೆ, ಮಳೆ ಹಾನಿ ಬಗ್ಗೆ ತಕ್ಷಣ ಸ್ಥಳೀಯ ಆಡಳಿತ ಗಮನಿಸಿ ವರದಿ ನೀಡಬೇಕು.ತಡೆಗೋಡೆ, ಕಾಲುವೆ ರಿಪೇರಿ ಆಗಬೇಕು. ರೈತರು ಮೊದಲು ಹಳ್ಳ ದಂಡೆ ಸರಿ ಮಾಡಿಕೊಳ್ಳುತ್ತಿದ್ದರು. ಆದರೆ ಈಗ ಒತ್ತುವರಿ ಆಗಿದೆ. ಕೂಡಲೇ ಹಳ್ಳದ ಹೂಳು ಎತ್ತಬೇಕು ಎಂದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಹಳ್ಳಗಳಲ್ಲಿ ಮರಳು ತೆಗೆಯುವ ಮೂಲಕ ಹಳ್ಳ ಸರಿ ಆಗಬೇಕು. ಆಗ ಪ್ರವಾಹ ಆಗುವುದಿಲ್ಲ. ಸರಕಾರದಿಂದ ಒಳ್ಳೆಯ ಕಾನೂನು ಮಾಡಲಾಗಿದೆ. ಮಳೆ ಮುಗಿತಿದ್ದ ಹಾಗೆ ಅವಕಾಶ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಶಾಲೆಗಳು ಶುರುವಾಗಿವೆ. ಈಗ ಪ್ರತಿ ಶಾಲಾವಾರು ವರದಿ ರಿಪೋರ್ಟ್ ತರಬೇಕು. ಬಿದ್ದು ಹೋಗುವ ಶಾಲೆಗಳ ಬಳಿ ಹೋಗಿ ನೈಜ ವರದಿಯನ್ನು ನೀಡಬೇಕು ಎಂದು ಗೃಹ ಸಚಿವರು ಹೇಳಿದರು.

ಕೋವಿಡ್ ಸಂಖ್ಯೆಯಲ್ಲಿ ತೀರ್ಥಹಳ್ಳಿ ಜಿಲ್ಲೆಗೆ ಮೊದಲ ಸ್ಥಾನದಲ್ಲಿದೆ.   ಹೀಗಾಗಿ ತಕ್ಷಣ ಎಲ್ಲಾ ಕಾರ್ಯಪ್ರವೃತ್ತರಾಗಬೇಕು.ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ತ್ವರಿತಗತಿಯಲ್ಲಿ ಕೆಲಸ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಚುರುಕಾಗಬೇಕು. ಮೊದಲು ಎಲ್ಲರನ್ನು ಟೆಸ್ಟ್ ಮಾಡಿಸಬೇಕು ಎಂದರು.

ಜನ ಮಾಸ್ಕ್ ಹಾಕುತ್ತಿಲ್ಲ, ಸಾಮಾಜಿಕ ಜಾಗೃತಿ ಮೂಡಿಸಬೇಕು. ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ನೋಡಬೇಕು ಎಂದರು.

ಈ ವೇಳೆ ಗ್ರಾಮ ಪಂಚಾಯತ್ ಪಿಡಿಒಗಳು ಮಾತನಾಡಿ, ಎಲ್ಲಾ ಕಡೆ ಲಸಿಕೆ ಕೊರತೆ ಇದೆ. ಜನರಿಗೆ ಸಮಾಧಾನ ಮಾಡುವುದೇ ದೊಡ್ಡ ಸಮಸ್ಯೆ ಆಗಿದೆ. ತಕ್ಷಣ ಲಸಿಕೆ ವ್ಯವಸ್ಥೆ ಆಗಬೇಕು ಎಂದರು. ಸಚಿವರು  ತಕ್ಷಣ ಮಾತನಾಡಿ ಸರಕಾರದ ಗಮನ ಸೆಳೆದು ಹೆಚ್ಚಿನ ಲಸಿಕೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

94 ಸಿ ಅರ್ಜಿ ಹಾಕಲು ಇನ್ನು ಸಮಯ ಇದೆ. ಅಧಿಕಾರಿಗಳು ಜನತೆಗೆ ಮಾಹಿತಿ ನೀಡಬೇಕು. ಜನರಿಗೆ ಯಾವ ಸೌಲಭ್ಯ ಬಂದರೂ ತಲುಪಿಸಿ. ಈ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಎಚ್ಚರ ಎಂದರು.

ಜವಾಬ್ದಾರಿ ನೀಡಿರುವ ಗೃಹ ಇಲಾಖೆಯಲ್ಲಿ ಬದಲಾವಣೆಯ ಛಾಪು ಮೂಡಿಸಿ ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿ ಮಾಡುವ ವಿಶ್ವಾಸ ಇದೆ. ಒಂದು ವ್ಯವಸ್ಥೆ ಸಕ್ರಿಯವಾಗಿ ಸಶಕ್ತವಾಗಿ ಕಾರ್ಯನಿರ್ವಹಿಸಲು ಅಧಿಕಾರಿಗಳ ಮಹತ್ತರ ಜವಾಬ್ದಾರಿ ಇರುತ್ತದೆ. ಸಾರ್ವಜನಿಕರ ಸಮಸ್ಯೆಗಳಿಗೆ ಇಲಾಖೆಯ ಮಟ್ಟದಲ್ಲಿ ಪರಿಹರಿಸಿ ಬಗೆಹರಿಯದಿದ್ದರೆ ಅವರಿಗೆ ಅಗತ್ಯ ತಿಳುವಳಿಕೆ ಕಾನೂನಿನ ಅರಿವು  ಮಾಹಿತಿ ನೀಡಿ ಎಂದರು.

ತಾಲೂಕಿನಲ್ಲಿ  ಪ್ರಕೃತಿ ವಿಕೋಪದಿಂದ ಉಂಟಾದ ಕೃಷಿ ಭೂಮಿ ಜಮೀನುಗಳು, ,ಮನೆಗಳ ಹಾನಿ,ಸಂಪರ್ಕ ರಸ್ತೆ ಸೇತುವೆ ಕುರಿತಾಗ ಪ್ರತಿ ಗ್ರಾಮಪಂಚಾಯಿತಿ ಮಟ್ಟದಲ್ಲಿನ ಅಂಕಿ ಅಂಶ ಪಡೆದ ಸಚಿವರು, ತಕ್ಷಣ ಅಗತ್ಯ ಪರಿಹಾರ ಕ್ರಮಗಳನ್ನು  ಕೈಗೊಳ್ಳುವ  ನಿಟ್ಟಿನಲ್ಲಿ ಎಲ್ಲಾ ಸಂಬಂಧಪಟ್ಟ  ಆಯಾ ಅಧಿಕಾರಿಗಳಿಗೆ ಸೂಚಿಸಿದರು.,

ಅಲ್ಲದೆ ತಾಲ್ಲೂಕಿನಲ್ಲಿ ಕಟ್ಟಡ ಕಟ್ಟುವ ಬಡವರಿಗೆ ಸರ್ಕಾರದ ನೂತನ  ಯೋಜನೆಯ ಮರಳು ವಿತರಣೆ

ಬಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.  ನಾನು ಗೃಹ ಇಲಾಖೆಯಲ್ಲಿ ಹೊಸ ಬದಲಾವಣೆಯ ಛಾಪನ್ನು ಮೂಡಿಸಿ, ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿ ರೂಪಿಸುವ ಹೊಣೆಯನ್ನು ಹೊತ್ತಿದ್ದೇನೆ. ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವ ಕೆಲಸ  ಮಾಡುತ್ತೇನೆ ನಾನು ಸರಳವಾಗಿ ಸದಾ ಕಾಲಕ್ಕೂ ಸಾರ್ವಜನಿಕರ ಜೊತೆ ಹೊಂದಿಕೊಂಡು ಇರುವವನು. ಜನ ನನ್ನ ಮೇಲೆ ನಂಬಿಕೆಯಿಟ್ಟು ನನ್ನ ಬಳಿ ಸಮಸ್ಯೆಗಳನ್ನು ಹೇಳಿಕೊಳ್ಳುವುದಕ್ಕೆ  ಬರುತ್ತಾರೆ.

ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ,ಈ ನಿಟ್ಟಿನಲ್ಲಿ ನಿಮ್ಮೆಲ್ಲರ ಸಹಕಾರ ಅಗತ್ಯ ಎಂದರು.

ಸಭೆಯಲ್ಲಿ ತಹಶೀಲ್ದಾರ್ ಶ್ರೀಪಾದ್,ತಾಲ್ಲೂಕು ಪಂಚಾಯಿತಿ ಸಿಇಒ ಆಶಾಲತಾ,ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು,ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.