ಬಿಜೆಪಿಯದ್ದು ಕುಟುಂಬ ವ್ಯವಸ್ಥೆ, ಹಿರಿಯರು ತೀರ್ಮಾನ ತೆಗೆದುಕೊಂಡಿದ್ದಾರೆ: ಈಶ್ವರಪ್ಪ
Team Udayavani, Jun 9, 2020, 11:50 AM IST
ಶಿವಮೊಗ್ಗ: ಬಿಜೆಪಿಯಲ್ಲಿ ಕುಟುಂಬ ವ್ಯವಸ್ಥೆಯಿದೆ. ಈ ಕುಟುಂಬ ವ್ಯವಸ್ಥೆಯಲ್ಲಿ ಕುಟುಂಬದ ಹಿರಿಯರು ತೀರ್ಮಾನ ತೆಗೆದುಕೊಂಡಿದ್ದಾರೆ. ನಾವು ನಮ್ಮ ವಿವೇಚನೆಯಲ್ಲಿ ತೀರ್ಮಾನ ಮಾಡಿ ತಕ್ಕಂತೆ ಅವರಿಗೆ ಪಟ್ಟಿ ಕಳುಹಿಸಿದ್ದೇವೆ. ಇದಕ್ಕಿಂತ ಒಳ್ಳೆಯದ್ದು ಎಂದು ಅವರು ಯೋಚನೆ ಮಾಡಿ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎಂಬ ಚಿಂತನೆ ಮಾಡಿಕೊಟ್ಟಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು ರಾಜ್ಯಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ ಮಾತನಾಡಿದರು.
ಜಿಲ್ಲೆಯಲ್ಲಿ ಆಯ್ಕೆ ಆಗುವ ಮುಂಚೆ ನಗರದಲ್ಲಿ ಆಯ್ಕೆ ಆಗುತ್ತದೆ. ಜಿಲ್ಲೆಯಿಂದ ರಾಜ್ಯಕ್ಕೆ, ರಾಜ್ಯದಿಂದ ದೇಶಕ್ಕೆ ಆಯ್ಕೆ ಪ್ರಕ್ರಿಯೆ ಹೋಗುತ್ತದೆ. ಜಿಲ್ಲೆ, ರಾಜ್ಯ ಹಾಗೂ ದೇಶದ ಹಿತದೃಷ್ಟಿಯಿಂದ ಯೋಚನೆ ಮಾಡಿಯೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಅದಕ್ಕೆ ಅವರನ್ನು ಹಿರಿಯರು ಅಂತಾ ಕರೆಯುವುದು. ಆ ಹಿರಿಯರು ಏನು ತೀರ್ಮಾನ ತೆಗೆದುಕೊಂಡಿದ್ದಾರೆ. ಅದನ್ನು ಪಕ್ಷದ ಎಲ್ಲಾ ಕಾರ್ಯಕರ್ತರು ಸಂತೋಷದಿಂದ ಸ್ವಾಗತಿಸಿದ್ದಾರೆ ಎಂದಿದ್ದಾರೆ.
ರಾಜ್ಯಸಭಾ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನ ಸಾಧ್ಯವೇ ಇಲ್ಲ. ಅಸಮಾಧಾನ ಎನ್ನುವ ಪ್ರಶ್ನೆಯೇ ಇಲ್ಲ. ಕೋರ್ ಕಮಿಟಿಯಲ್ಲಿ ಹೆಸರು ಕಳುಹಿಸಿದ್ದವರು ಸಹ ಈ ಆಯ್ಕೆಯನ್ನು ಸ್ವಾಗತಿಸಿದ್ದಾರೆ. ಪಟ್ಟಿಯಲ್ಲಿ ಈ ಎರಡು ಹೆಸರು ಇರಲಿಲ್ಲ. ಇವರ ಬಗ್ಗೆ ನಾವು ಚರ್ಚೆ ಮಾಡಿಲ್ಲ. ಸಂಘಟನೆಯನ್ನು ಶಕ್ತಿಶಾಲಿಯಾಗಿ ರೂಪಿಸುವಲ್ಲಿ ಈ ಆಯ್ಕೆ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿಯು ಕಾರ್ಯಕರ್ತರ ಶಕ್ತಿಯಿಂದಲೇ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್