Journalists ಹಿಯಾಳಿಸಿದ ಸಚಿವ ಮಧು ಬಂಗಾರಪ್ಪ; ಪ್ರತಿಭಟನೆ
Team Udayavani, Dec 4, 2023, 5:06 PM IST
ಸಾಗರ: ನಗರದಲ್ಲಿ ಇತ್ತೀಚೆಗೆ ನಡೆದ ತಾಲೂಕು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸ್ಥಳೀಯ ಪತ್ರಕರ್ತರ ವಿರುದ್ಧ ಹಿಯಾಳಿಸುವ ರೀತಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವರ್ತನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ತಾಲೂಕು ಶಾಖೆ ಸೋಮವಾರ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್, ಡಿ. ಒಂದರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ತಾಲೂಕಿನ ಬರ ಪರಿಶೀಲನೆ ಹಾಗೂ ಕುಡಿಯುವ ನೀರಿನ ಪರಿಸ್ಥಿತಿಯ ಬಗ್ಗೆ ತಾಲೂಕು ಅಧಿಕಾರಗಳ ಸಭೆ ನಡೆಸಿದರೂ ಇಲ್ಲಿನ ಪತ್ರಕರ್ತರಿಗೆ ಸಭೆಯ ಆಹ್ವಾನ ನೀಡಿರಲಿಲ್ಲ. ಆದರೆ ಜನಹಿತಕ್ಕಾಗಿ ಪತ್ರಕರ್ತರು ವರದಿಗಾಗಿ ಸಭೆಯ ಸ್ಥಳಕ್ಕೆ ಹೋಗಿದ್ದು ಜಿಲ್ಲೆಯ ಸಮಸ್ಯೆಗಳು ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಸಚಿವ ಮಧು ಬಂಗಾರಪ್ಪ ಉದ್ಧಟತನದಿಂದ ವರ್ತಿಸಿ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ. ಸಮಚಿತ್ತದಿಂದ ಸಮಜಾಯಿಷಿ ನೀಡುವಷ್ಟು ಸಹನೆ ಇಲ್ಲದೆ ಸಚಿವರು ಪತ್ರಕರ್ತರನ್ನು ಹಿಯಾಳಿಸಿ ಅವಮಾನಿಸಿದ್ದಾರೆ. ಸಚಿವರ ವರ್ತನೆ ಪ್ರಜಾಸತ್ತಾತ್ಮಕ ನಡವಳಿಕೆಗಳಿಗೆ ವಿರುದ್ಧವಾಗಿದ್ದು ಸಂಘ ಖಂಡಿಸುತ್ತದೆ ಎಂದರು.
ಸಚಿವರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಬೇಕಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಮಾರುತಿ ತೀವ್ರ ಬೇಜವಾಬ್ದಾರಿ ತೋರಿಸಿದ್ದಾರೆ. ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಘಟನೆಯ ಅಧಿಕೃತ ಕಾರ್ಡ್ ಹೊಂದಿದ ಪ್ರಮುಖ ಪತ್ರಕರ್ತರನ್ನು ಅವಮಾನಿಸಿದ್ದಾರೆ. ಅವರನ್ನು ತತ್ ಕ್ಷಣ ಅಮಾನತುಗೊಳಿಸಿ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಹಿರಿಯ ಪತ್ರಕರ್ತ ಅಖಿಲೇಶ್ ಚಿಪ್ಳಿ ಮಾತನಾಡಿ, ಪತ್ರಕರ್ತರು ಸಾಗರ ಹಿತ ಕಾಯುವ ದೃಷ್ಟಿಯಿಂದ ಪ್ರಶ್ನೆ ಕೇಳುತ್ತಾರೆ. ಸಾಗರ ತಾಲೂಕಿನ ಸಮಸ್ಯೆ ಪತ್ರಕರ್ತರಿಗೆ ಗೊತ್ತಿರುತ್ತದೆ. ಇಂತಹ ಪತ್ರಕರ್ತರು ಸಚಿವರಿಗೆ ಪ್ರಶ್ನೆ ಕೇಳಿದರೆ ಉಡಾಫೆ ಉತ್ತರ ಕೊಡುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಸಚಿವರ ವಿರುದ್ಧ ಮತ್ತಷ್ಟು ಪ್ರತಿಭಟನೆಯನ್ನು ರಾಜ್ಯಾದ್ಯಂತ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.
ಎಂ.ಜಿ.ರಾಘವನ್ ಮನವಿ ಪತ್ರ ವಾಚಿಸಿದರು. ಸಂಘದ ಉಪಾಧ್ಯಕ್ಷ ರವಿನಾಯ್ಡು, ಪ್ರಧಾನ ಕಾರ್ಯದರ್ಶಿ ಮಹೇಶ್ ಹೆಗಡೆ, ಪತ್ರಕರ್ತರಾದ ಎಂ.ರಾಘವೇಂದ್ರ, ರಾಘವೇಂದ್ರ ಶರ್ಮ, ವಸಂತ ನೀಚಡಿ, ಮ.ಸ.ನಂಜುಂಡಸ್ವಾಮಿ, ಉಮೇಶ್ ಮೊಗವೀರ, ನಾಗರಾಜ್, ಶಿವಕುಮಾರ್ ಗೌಡ, ಜಗನ್ನಾಥ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್ ತೀರ್ಪು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ