ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್
Team Udayavani, Aug 8, 2022, 7:36 PM IST
ಸಾಗರ: ಹರ್ ಘರ್ ತಿರಂಗ್ ಕಾರ್ಯಕ್ರಮಕ್ಕಾಗಿ ಸಾವಿರಕ್ಕೂ ರಾಷ್ಟ್ರಧ್ವಜ ಸಿದ್ಧತೆ ಕಾರ್ಯ ನಡೆಯುತ್ತಿರುವ ಸಂದರ್ಭದಲ್ಲಿ ತಾಲೂಕಿನ ಅರಳಗೋಡು ಗ್ರಾಮ ಪಂಚಾಯ್ತಿ ಕಚೇರಿಗೆ ರವಾನೆಯಾದ ಧ್ವಜವೊಂದರಲ್ಲಿನ ಅಶೋಕ ಚಕ್ರದ ಸಂಕೇತ ನಿರ್ದಿಷ್ಟ ಸ್ಥಳದಲ್ಲಿ ಇಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.
ಮನೆ ಮನೆಗೆ ರಾಷ್ಟ್ರಧ್ವಜ ಹಂಚುವ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಚಾಲನೆ ನೀಡಿದ ಜನಪ್ರತಿನಿಧಿಗಳು ರಾಷ್ಟ್ರ ಧ್ವಜಗಳನ್ನು ಪ್ರದರ್ಶಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವೇಳೆ ಈ ದೋಷವನ್ನು ಗುರುತಿಸಲಾಗಿದೆ. ಧ್ವಜದ ಬಿಳಿ ಬಣ್ಣದ ಸ್ಥಳದ ಮಧ್ಯದಲ್ಲಿರಬೇಕಾದ ಅಶೋಕ ಚಕ್ರ ಪಕ್ಕದಲ್ಲಿದೆ ಎಂಬ ಆಕ್ಷೇಪದ ಮಾತುಗಳು ಕೇಳಿಬಂದಿವೆ.
ಈ ಬಗ್ಗೆ ಅರಳಗೋಡು ಗ್ರಾಪಂ ಅಧ್ಯಕ್ಷ ಮೇಘರಾಜ್ ಅರೋಡಿ ಮಾತನಾಡಿ, ಧ್ವಜ ಸಂಬಂಧ ನಿರ್ದಿಷ್ಟ ನಿಯಮಗಳಿರುವ ಹಿನ್ನೆಲೆಯಲ್ಲಿ ದೋಷಪೂರಿತ ಧ್ವಜಗಳ ಬಳಕೆಯಾಗದಂತೆ ಕಟ್ಟೆಚ್ಚರ ಅಗತ್ಯ. ದೋಷಗಳಿರುವ ರಾಷ್ಟ್ರಧ್ವಜ ಬಳಕೆಯಾಗದಂತೆ ನಿಗಾ ವಹಿಸಲಾಗಿದೆ. ಸಿದ್ಧಪಡಿಸಲಾದ ಬಾವುಟಗಳಲ್ಲಿ ದೋಷಗಳಿರದಂತೆ ಪರಿಶೀಲನೆ ನಡೆಸಲಾಗುತ್ತಿದೆ. ಸೋಮವಾರ ಸಹ ಗ್ರಾಪಂ ಕಚೇರಿಯಲ್ಲಿ ಧ್ವಜಗಳ ಪರಿಶೀಲನೆ ಮಾಡಲಾಗುತ್ತಿದೆ ಎಂದರು.
ಕೆಲವು ದಿನಗಳ ಹಿಂದೆ ನಗರಸಭೆ ಆವರಣದಲ್ಲಿ ಧ್ವಜಗಳ ಸಿದ್ಧತೆ ನಡೆಯುತ್ತಿರುವ ಸ್ಥಳದಲ್ಲಿ ಸಹ ಒಂದು ಬಾವುಟದಲ್ಲಿ ಬಣ್ಣಗಳ ಅನುಕ್ರಮಣಿಕೆ ಬದಲಾಗಿರುವುದನ್ನು ತಕ್ಷಣ ಗಮನಿಸಿ, ಬದಲಾಯಿಸಲಾಗಿದೆ. ಸಿದ್ಧಗೊಂಡ ಬಾವುಟವನ್ನು ಕೋಲಿಗೆ ಅಳವಡಿಸುವಾಗ ಹಸಿರು ಬಣ್ಣ ಮೇಲು ತುದಿಯಲ್ಲಿತ್ತು. ಇದನ್ನು ಗಮನಿಸಿದ ಹಿರಿಯರೊಬ್ಬರು ತಕ್ಷಣ ಸಂಬಂಧಪಟ್ಟ ಪ್ರಮುಖರಿಗೆ ತಿಳಿಸಿದ್ದು, ದೋಷ ಕಂಡು ಬಂದ ಬಾವುಟವನ್ನು ಬದಿಗಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ