ಅಧಿಕಾರಿಗಳ ವಿರುದ್ಧ ಶಾಸಕ ಈಶ್ವರಪ್ಪ ಗರಂ
Team Udayavani, Jun 4, 2019, 3:01 PM IST
ಶಿವಮೊಗ್ಗ: ನೀರಿನ ಸರಬರಾಜಿನ ವ್ಯತ್ಯಯದ ಬಗ್ಗೆ ಶಾಸಕ ಕೆ.ಎಸ್.ಈಶ್ವರಪ್ಪ ಅಕಾರಿಗಳಿಗೆ ತರಾಟೆ ತೆಗೆದುಕೊಂಡರು.
ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಸೋಮವಾರ ಶಾಸಕ ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ ನಗರದಲ್ಲಿ ನೀರಿನ ಸರಬರಾಜಿನಲ್ಲಿ ಆಗುತ್ತಿರುವ ವ್ಯತ್ಯಯದ ಬಗ್ಗೆ ಕೆಯುಡಬ್ಲು ಎಸ್ ಮತ್ತು ಪಾಲಿಕೆ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿದರು.
ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು ಕಳೆದ 6 ತಿಂಗಳಿಂದ ಸಾವರ್ಲೈನ್ ರಸ್ತೆಯ ಲಕ್ಷ್ಮಿ ಮೆಡಿಕಲ್ ಬಳಿ ಕುಡಿಯುವ ನೀರಿನ ಪೈಪ್ ಒಡೆದುಹೋಗಿದ್ದು ಅಧಿಕಾರಿಗಳು ಏಕೆ ಗಮನಿಸಲಿಲ್ಲ ಎಂದು ಪ್ರಶ್ನಿಸಿದರು. ಜಲಮಂಡಳಿ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯ ಪ್ರದೇಶಗಳಿಗೆ ಹೋಗಿ ಯಾಕೆ ಗಮನಿಸುತ್ತಿಲ್ಲ. ನಿಮ್ಮ ನಿರ್ಲಕ್ಷ್ಯದಿಂದಾಗಿ ಜನಪ್ರತಿನಿಧಿಗಳಿಗೆ ಜನ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ ಎಂದರು.
ಪಾಲಿಕೆಯಲ್ಲಿ ಹಲವಾರು ವರ್ಷಗಳಿಂದ ಸಮರ್ಪಕವಾಗಿ ನೀರು ಸರಬರಾಜು ಮಾಡುತ್ತಿದ್ದ ಅನುಭವಿ ಅಧಿಕಾರಿಗಳ ಸಲಹೆ ಪಡೆದು ಒಟ್ಟಾಗಿ ಕಾರ್ಯ ನಿರ್ವಹಿಸುವಂತೆ ಕೆಯುಡಬ್ಲುಎಸ್ ಅಧಿಕಾರಿಗಳಿಗೆ ಸೂಚಿಸಿದರು.
ಒಟ್ಟು ನಗರದಲ್ಲಿ 59 ನೀರಿನ ಟ್ಯಾಂಕ್ಗಳಿದ್ದು, ಅದರಲ್ಲಿ 12 ಟ್ಯಾಂಕ್ಗಳು ಪುನರ್ ನಿರ್ಮಾಣವಾಗುತ್ತಿದೆ. 19 ಟ್ಯಾಂಕ್ಗಳಿಗೆ ದಿನದ 24 ಗಂಟೆಗಳ ಕಾಲ ನೀರು ಸರಬರಾಜಿಗೆ ಈಗಾಗಲೇ ಸಂಪರ್ಕ ಕಲ್ಪಿಸಲಾಗಿದ್ದು, 2020ರ ಅಂತ್ಯದೊಳಗೆ ನಗರದಲ್ಲಿ ಸಮರ್ಪಕ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿ ನೀರೆತ್ತುವ ಮೋಟಾರ್ಗಳಿಗೆ ಈಗಾಗಲೇ ಬೇಡಿಕೆ ಸಲ್ಲಿಸಿದ್ದು ಇನ್ನೂ 1 ತಿಂಗಳಿಗೆ ನೀರು ಸರಬರಾಜು ಮಾಡುವಷ್ಟು ನೀರಿನ ಸಂಗ್ರಹವಿದೆ ಎಂದರು.
ಒಳಚರಂಡಿ ಕಾಮಗಾರಿಗೆ ಸಂಬಂಧಿಸಿದಂತೆ ಕೂಡ ವ್ಯಾಪಕ ಚರ್ಚೆ ಮಾಡಲಾಯಿತು. ಕೆಲವು ಸದಸ್ಯರು ನೀರಿನ ಸಮಸ್ಯೆ ಬಗ್ಗೆ ಗಮನ ಸೆಳೆದರು.
ಮೇಯರ್ ಲತಾ ಗಣೇಶ್, ಉಪಮೇಯರ್ ಚನ್ನಬಸಪ್ಪ, ಆಯುಕ್ತೆ ಚಾರುಲತಾ ಸೋಮಲ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುರೇಖಾ ಮುರಳೀಧರ್, ಶಂಕರ್ ಗನ್ನಿ, ಸುವರ್ಣ ಶಂಕರ್, ಜ್ಞಾನೇಶ್ವರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು