ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ನಾನು ಕಾರಣವಲ್ಲ: ಹಾಲಪ್ಪ


Team Udayavani, Sep 18, 2022, 7:35 PM IST

ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ನಾನು ಕಾರಣವಲ್ಲ: ಹಾಲಪ್ಪ

ಸಾಗರ: ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ನಾನು ಕಾರಣವಲ್ಲ. ಅನಗತ್ಯವಾಗಿ ನನ್ನ ಮೇಲೆ ಆರೋಪ ಹೊರಿಸುವ ಕೆಲಸವನ್ನು ಕಾಂಗ್ರೆಸ್ ಸೇರಿದಂತೆ ವಿರೋಧಿಗಳು ಮಾಡುತ್ತಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ತಾಲೂಕಿನ ಹಸಿರುಮಕ್ಕಿ ಸೇತುವೆಯನ್ನು ಭಾನುವಾರ ವೀಕ್ಷಣೆ ಮಾಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ತಾವು ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿ, ಶೀಘ್ರದಲ್ಲಿ ಎದುರಾಗಲಿರುವ ಚುನಾವಣೆಯಲ್ಲಿ ಲಾಭ ಗಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ದೂರಿದರು.

2018 ರಲ್ಲಿ ಕಾಗೋಡು ತಿಮ್ಮಪ್ಪ ಅವರು ಸಚಿವರಾಗಿದ್ದ ಸಂದರ್ಭದಲ್ಲಿ 115.59 ಕೋಟಿ ರೂ. ವೆಚ್ಚದಲ್ಲಿ ಹಸಿರುಮಕ್ಕಿ ಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಕಾಗೋಡು ಆಲೋಚನೆ ಉತ್ತಮವಾಗಿದೆ. ಆದರೆ ಗುತ್ತಿಗೆದಾರ ಕಂಪನಿ ಅವೈಜ್ಞಾನಿಕವಾಗಿ ತಾಂತ್ರಿಕ ವರದಿ ತಯಾರಿಸಿ ಪ್ರಸ್ತಾವನೆ ಸಲ್ಲಿಸಿದ್ದೇ ಸೇತುವೆ ವಿಳಂಬವಾಗಲು ಕಾರಣವಾಗಿದೆ. 1,155 ಮೀ. ಉದ್ದ, 35 ಮೀ. ಅಗಲದ ಹಸಿರುಮಕ್ಕಿ ಸೇತುವೆ 33 ಫಿಲ್ಲರ್ ಮೇಲೆ ನಿರ್ಮಾಣಗೊಳ್ಳಬೇಕು. ಆದರೆ ಚೀನಾ ಮೂಲದ ಎಸ್‌ಪಿಎಲ್ ಇನ್‌ಫಾಸ್ಟ್ರೆಕ್ಚರ್ ಸಂಸ್ಥೆ ಡಿಪಿಆರ್ ತಯಾರಿಸುವಾಗ ನೀರಿನ ಆಳವನ್ನು ಸರಿಯಾಗಿ ಅಂದಾಜು ಮಾಡಿಲ್ಲ. ಇದೀಗ ಮತ್ತೆ 110 ಕೋಟಿ ರೂ. ಸೇತುವೆ ಕಾಮಗಾರಿ ಪೂರ್ಣಗೊಳ್ಳಲು ಬೇಕು ಎಂದು ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಿದರು.

ಇದನ್ನೂ ಓದಿ: ರೈತರು ಉದ್ಧಾರವಾಗಲು ಉದ್ಯಮಿಯಾಗಬೇಕು : ಸಚಿವ ಬಿ.ಸಿ.ಪಾಟೀಲ್

2022 ರ ಮಾರ್ಚ್‌ಗೆ ಕಾಮಗಾರಿ ಮುಗಿಯಬೇಕಾಗಿತ್ತು. ಎರಡು ವರ್ಷ ಕೊರೊನಾ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿತ್ತು. ಈ ವರ್ಷ ಕಾರ್ಮಿಕರ ಕೊರತೆ ನೆಪ ಹೇಳಲಾಗುತ್ತಿದೆ. ಇದೀಗ ಹಣದ ಕೊರತೆ ಇದೆ ಎಂದು ಹೇಳಿದ್ದರಿಂದ ಬೆಂಗಳೂರಿನಲ್ಲಿ ಕಾಮಗಾರಿ ಉಸ್ತುವಾರಿ ವಹಿಸಿರುವ ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮದ ಅಧ್ಯಕ್ಷರು ಮತ್ತು ಅಧಿಕಾರಿಗಳ ಸಭೆ ಕರೆದು ಹೆಚ್ಚುವರಿ ಹಣಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿ ಶೀಘ್ರದಲ್ಲಿಯೆ ಕಾಮಗಾರಿಗೆ ಹೆಚ್ಚುವರಿ ಹಣ ಬಿಡುಗಡೆ ಮಾಡಲು ಪ್ರಯತ್ನಿಸಲಾಗುತ್ತಿದೆ. ಹಾಲಿ ನಿರ್ವಹಿಸಿರುವ ಕಾಮಗಾರಿಯ ಪೂರ್ಣ ಹಣವನ್ನು ಪಾವತಿ ಮಾಡಲಾಗಿದೆ. ಕಾಮಗಾರಿಗೆ ಸಂಬಂಧಪಟ್ಟ ಹಣವನ್ನು ಹಾಲಪ್ಪ ಕೊಡಿಸಿಲ್ಲ, ಸರ್ಕಾರ ಬಿಡುಗಡೆ ಮಾಡಿಲ್ಲ ಎನ್ನುವುದು ಸುಳ್ಳು ಸುದ್ದಿಯಾಗಿದೆ ಎಂದು ತಿಳಿಸಿದರು.

ಕೆಲವರು ಸೇತುವೆ ಕಾಮಗಾರಿ ವಿಳಂಬವಾಗಿರುವುದಕ್ಕೆ ನಾನೇ ಕಾರಣ ಎಂದು ಹೋರಾಟ ಹಮ್ಮಿಕೊಂಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟಕ್ಕೆ ನಾನು ಬೆಲೆ ಕೊಡುತ್ತೇನೆ. ಆದರೆ ಹಿಂದೆ ಕಾಗೋಡು ತಿಮ್ಮಪ್ಪ ಅವರು ಸರಿಯಾದ ಗುತ್ತಿಗೆದಾರ ಸಂಸ್ಥೆಯನ್ನು ಗುರುತಿಸದೆ ಕಾಮಗಾರಿ ಹೊಣೆ ನೀಡಿದ್ದು ಯಾರ ತಪ್ಪು. ಮುಂದಿನ ಒಂದರಿಂದ ಎರಡು ವರ್ಷದೊಳಗೆ ಹೆಚ್ಚುವರಿ ಹಣ ಕೊಡಿಸಿ ಹಸಿರುಮಕ್ಕಿ ಸೇತುವೆ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಕೆಆರ್‌ಐಡಿಎಲ್ ಅಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ಪ್ರಮುಖರಾದ ಸುವರ್ಣ ಟೀಕಪ್ಪ, ಸುಬ್ರಹ್ಮಣ್ಯ, ಅಶೋಕ್, ಚೇತನರಾಜ್ ಕಣ್ಣೂರು, ಗಿರೀಶ್ ಗೌಡ, ಸಿದ್ದುಗೌಡ, ಮಂಜಯ್ಯ ಜೈನ್, ಅರುಣ್ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.