ಬಾಲಕಿಯರ ವಸತಿ ನಿಲಯಕ್ಕೆ ಶಾಸಕರ ದಿಢೀರ್ ಭೇಟಿ
Team Udayavani, Jan 17, 2022, 7:39 PM IST
ಸಾಗರ: ಸ್ವಚ್ಛತೆ, ಆಹಾರ ಮತ್ತು ವಿದ್ಯಾಭ್ಯಾಸದ ಬಗ್ಗೆ ಪರಿಶೀಲಿಸಲು ನಗರಸಭೆ ವ್ಯಾಪ್ತಿಯ ಎಸ್ಎನ್ ನಗರದ ಕಂಬಳಿಕೊಪ್ಪದ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯಕ್ಕೆ ಶಾಸಕ, ಎಂಎಸ್ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ದಿಢೀರ್ ಭೇಟಿ ನೀಡಿದರು.
ದಿಢೀರ್ ಭೇಟಿ ನೀಡಿದ ಶಾಸಕರು, ಅಲ್ಲಿನ ಸಮಸ್ಯೆಗಳ ಬಗ್ಗೆ ಹಾಗೂ ಅವಶ್ಯಕತೆಗಳ ಬಗ್ಗೆ ಮಾಹಿತಿ ಪಡೆದ ನಂತರ ಡಿಜಿಟಲ್ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕೈದು ದಿನಗಳಿಂದ ವಸತಿ ನಿಲಯದ ಹೆಣ್ಣು ಮಕ್ಕಳು ಕರೆ ಮಾಡಿ ಹಾಸ್ಟೆಲಿನಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇದೆ. ಈ ಹಿನ್ನೆಲೆಯಲ್ಲಿ ಇವತ್ತು ಭೇಟಿ ನೀಡಿದ್ದೇನೆ. ಇಲ್ಲಿ ಬಂದು ವಿದ್ಯಾರ್ಥಿನಿಗಳಿಂದ ಮಾಹಿತಿ ಪಡೆದ ಸಂದರ್ಭದಲ್ಲಿ ನೀರಿನ ಸಮಸ್ಯೆ ಇದೆ ಎಂದು ತಿಳಿಸಿದ್ದಾರೆ.
ನೌಕರರ ಸಮಸ್ಯೆ ಇದೆ, ಗೋಧಿ ಹಿಟ್ಟು ಸರಿಯಿಲ್ಲ ಎಂದು ತಿಳಿಸಿದ್ದಾರೆ. ತಕ್ಷಣ ಅಧಿಕಾರಿಗಳ ಜೋತೆ ಸಭೆ ನಡೆಸಿ ಸರಿಪಡಿಸಲಾಗುವುದು ಹಾಗೂ ವಿದ್ಯಾರ್ಥಿಗಳಿಗೆ ನೀಡುವ ಕಿಟ್ಗಳಲ್ಲಿ ಸರಿಯಾಗಿ ವಸ್ತುಗಳು ಬರುತ್ತಿಲ್ಲ ಎಂದು ದೂರಿದ್ದಾರೆ. ಮಕ್ಕಳು ಹೇಳಿರುವ ಎಲ್ಲಾ ಸಮಸ್ಯೆಗಳನ್ನೂ ಅತಿ ಶೀಘ್ರದಲ್ಲಿ ಸರಿಪಡಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ನಗರಸಭೆ ಉಪಾಧ್ಯಕ್ಷ ವಿ. ಮಹೇಶ್, ಸ್ಥಳೀಯ ನಗರ ಸಭೆ ಸದಸ್ಯ ಲಿಂಗರಾಜು, ಸಾಗರ ಉಪವಿಭಾಗ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ವಿನೋದ್ರಾಜ್, ರವಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ