ಮಾ .18ರಂದು ಶಿವಮೊಗ್ಗಕ್ಕೆ ಮೋದಿ, 2 ಲಕ್ಷ ಜನ ಸೇರುವ ನಿರೀಕ್ಷೆ: ರಾಘವೇಂದ್ರ
Team Udayavani, Mar 16, 2024, 6:44 PM IST
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ನಗರಕ್ಕೆ 1.15ಕ್ಕೆ ಆಗಮಿಸಲಿದ್ದು, ಅವರ ಸ್ವಾಗತಕ್ಕೆ ಕಾರ್ಯಕರ್ತರ ಪಡೆ ಸಜ್ಜಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನಗರದ ಫ್ರೀಡಂ ಪಾರ್ಕ್ನಲ್ಲಿ ವೇದಿಕೆ ಸಿದ್ಧತೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ತೆಲಂಗಾಣದಿಂದ ನೇರವಾಗಿ ಶಿವಮೊಗ್ಗಕ್ಕೆ ಮಧ್ಯಾಹ್ನ 1.15ಕ್ಕೆ ಆಗಮಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷ ಜನ ಸೇರಲಿದ್ದು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ. ಒಂದು ವರ್ಷ ಅವಧಿಯಲ್ಲಿ ಪ್ರಧಾನಿ ಮೋದಿ ಮೂರನೇ ಭೇಟಿ ಇದಾಗಿದೆ.
ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜನರಿಗೆ ಆಹಾರ ವಿತರಣೆ ಮಾಡುವುದಿಲ್ಲ. ಪ್ರಧಾನಿ ಭಾಷಣ ಕೇಳಲು ಲಕ್ಷಾಂತರ ಜನರು ಬರುವ ಕಾರಣ ವಾಹನ ನಿಲುಗಡೆಗೆ ಬೊಮ್ಮನಕಟ್ಟೆ, ಎಪಿಎಂಸಿ ಮತ್ತು ಸೈನ್ಸ್ ಮೈದಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲಮಪ್ರಭು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ನಾವೀಗ ಪ್ರಧಾನಿ ಕಾರ್ಯಕ್ರಮದತ್ತ ಮಾತ್ರ ಗಮನ ಕೇಂದ್ರೀಕರಿಸಿದ್ದೇವೆ. ಈಶ್ವರಪ್ಪ ಪಕ್ಷೇತರ ಸ್ಪರ್ಧೆ ಸೇರಿದಂತೆ ಉಳಿದ ವಿಚಾರ ಮಾತನಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ