Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ
Team Udayavani, Apr 30, 2024, 7:01 PM IST
ತೀರ್ಥಹಳ್ಳಿ: ಮೋದಿ ಒಬ್ಬ ಸುಳ್ಳುಗಾರ, ಅಧಿಕಾರಕ್ಕೆ ಬಂದು 10 ವರ್ಷದಲ್ಲಿ ದೇಶವನ್ನು ಕೊಳ್ಳೆ ಹೊಡೆದಿದ್ದಾರೆ. ಅಂಬಾನಿ, ಅದಾನಿಗೆ ಹಣ ಮಾಡಿಕೊಡಲು ಜನರಿಗೆ ಬರೆ ಹಾಕಿದ್ದಾರೆ. ಪ್ರತಿ ವಸ್ತುವಿನ ಬೆಲೆ ಗಗನಕ್ಕೆ ಏರಿದೆ. ದೇಶದಲ್ಲಿ ಪ್ರಧಾನಿ ಸುಳ್ಳು ಭಾಷಣ ಮಾಡಿದ್ದು ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದರು.
ಏ. 29ರ ಸೋಮವಾರ ರಾತ್ರಿ ತೀರ್ಥಹಳ್ಳಿ ಪಟ್ಟಣದಲ್ಲಿ ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದರು.
ಐಪಿಎಲ್ ಬೆಟ್ಟಿಂಗ್, ಡ್ರಗ್ಸ್ ಮಾಫಿಯಾದಿಂದ ಹಣ ಮಾಡುತ್ತಿದ್ದಾರೆ. ಅವರಿಗೆ ಇದ್ಯಾವುದು ಗೊತ್ತೇ ಇಲ್ವಾ? ಸಿದ್ದರಾಮಯ್ಯ ರಾಜ್ಯದಲ್ಲಿ ಬಡವರಿಗೆ ಹಲವು ಯೋಜನೆ ಕೊಟ್ಟಿದ್ದಾರೆ. ದೇಶದಲ್ಲಿ ಕಾಂಗ್ರೆಸ್ 60 ವರ್ಷ ಆಳಿ ಊಟಕ್ಕಿಲ್ಲದ ಹಂತದಿಂದ ದೇಶವನ್ನು ಯುದ್ಧ, ಅಭಿವೃದ್ಧಿ ಎಲ್ಲವನ್ನು ಮಾಡಿದೆ. ಆದರೆ ಬಿಜೆಪಿ ಹಾಗೂ ಮೋದಿ ಅವರು, ಪಾಕಿಸ್ತಾನ, ಮುಸ್ಲಿಂ, ತಾಲಿಬಾನ್ ಅಂತ ಇಲ್ಲಿ ಕೋಮು ದ್ವೇಷ ಬಿತ್ತಿ ತನ್ನ ರಾಜಕೀಯ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಗೀತಾ ಶಿವರಾಜ್ ಕುಮಾರ್ ಮಾತನಾಡಿ, ನನಗೆ ಒಂದು ಅವಕಾಶ ಕೊಡಿ. ನಿಮ್ಮೆಲ್ಲರ ಸೇವೆಗೆ ನಾನು ಬದ್ಧ. ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದರು.
ಶಿವರಾಜ್ ಕುಮಾರ್ ಮಾತನಾಡಿ, ಬಡವರು, ಶ್ರೀಮಂತ ಅಂತ ಬೇಧ-ಭಾವ ಬೇಡ, ಎಲ್ಲರೂ ಹೃದಯದ ಮೂಲಕ ಪ್ರೀತಿಸಬೇಕು. ರಾಘವೇಂದ್ರ ಅವರಿಗೆ ಅವಕಾಶ ಕೊಟ್ಟಿದ್ದೀರಿ. ಗೀತಾಳಿಗೆ ಒಮ್ಮೆ ಅವಕಾಶ ಕೊಡಿ. ಅವಳಿಗೆ ನಾನು ಗ್ಯಾರಂಟಿ. ಮೇ 7ಕ್ಕೆ ಮತ ಹಾಕಿ ಗೆಲ್ಲಿಸಿ ಎಂದು ಮನವಿ ಮಾಡಿ ತಮ್ಮ ಡೈಲಾಗ್ ಮತ್ತು ಹಾಡಿನ ಮೂಲಕ ಗಮನ ಸೆಳೆದರು.
ಬಾರದ ಚಲನಚಿತ್ರ ನಟ ನಟಿಯರು !
ಖ್ಯಾತ ಚಲನಚಿತ್ರ ನಟರಾದ ಡಾಲಿ ಧನಂಜಯ್, ದುನಿಯಾ ವಿಜಯ್, ಪ್ರೇಮ್, ವಿಜಯ ರಾಘವೇಂದ್ರ, ಚಿಕ್ಕಣ್ಣ, ನಿಶ್ವಿಕಾ ನಾಯ್ಡು, ಚಂದನ್ ಶೆಟ್ಟಿ, ಅನುಶ್ರೀ, ಅಕುಲ್ ಬಾಲಾಜಿ ಹಾಗೂ ಅನೇಕ ಚಿತ್ರನಟರು ಈ ಬೃಹತ್ ರೋಡ್ ಶೋನಲ್ಲಿ ಭಾಗವಹಿಸಬೇಕಿತ್ತು. ಆದರೆ ರಿಪ್ಪನ್ ಪೇಟೆ ಹಾಗೂ ಹೊಸನಗರದಲ್ಲಿ ನಡೆದ ಕಾರ್ಯಕ್ರಮಗಳು ತಡವಾದ ಕಾರಣ ತೀರ್ಥಹಳ್ಳಿಗೆ ಗೈರಾದರು.
ಈ ಸಂದರ್ಭದಲ್ಲಿ ಕಿಮ್ಮನೆ ರತ್ನಾಕರ್, ಡಾ.ಎಂ ಮಂಜುನಾಥ್ ಗೌಡ, ಶೃಂಗೇರಿ ಶಾಸಕ ರಾಜೇಗೌಡ, ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ
BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು
MUST WATCH
ಹೊಸ ಸೇರ್ಪಡೆ
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್ಗೂ ಹಾನಿ
ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್ ವಿದ್ಯಾರ್ಥಿಗಳು ದುರ್ಮರಣ
Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ