ಕೆರೆ ಡಿನೋಟಿಫಿಕೇಶನ್‌ ಮೂಲಕ ಹಣ ಮಾಡುವ ಹುನ್ನಾರ


Team Udayavani, Jul 27, 2017, 2:28 PM IST

27-SHIV-2.jpg

ಸಾಗರ: ಕೆಲ ದಿನಗಳ ತಮ್ಮ ಹೇಳಿಕೆಯಿಂದ ರಾಜ್ಯದ ಕಾಡಿಗೆ ಕಂಟಕ ತಂದಿಟ್ಟ ಸಚಿವ ಕಾಗೋಡು ತಿಮ್ಮಪ್ಪ ಅವರು ಈಗ ಕೆರೆಗಳತ್ತ ಕಣ್ಣು ಹಾಕಿದ್ದಾರೆ. ತಮ್ಮ ಇಳಿ ವಯಸ್ಸಿನಲ್ಲಿ ಹಣ ಮಾಡುವ ವ್ಯವಸ್ಥಿತ ಸಂಚಿನ ಭಾಗವಾಗಿಯೇ ಅವರು ಮೂಲ ಸ್ವರೂಪ ಕಳೆದುಕೊಂಡ ನೆಪದಲ್ಲಿ ಕೆರೆಗಳ ಡಿ-ನೋಟಿಫಿಕೇಶನ್‌ ಗೆ ಮುಂದಾಗಿದ್ದಾರೆ. ಇದು ಬಿಲ್ಡರ್‌ಗಳ ಮೂಲಕ ಹಣ ಸಂಪಾದಿಸಲು ಮಾಡಿರುವ ತಂತ್ರಗಾರಿಕೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಳಾದ ಕೆರೆಗಳ ಹೂಳು ತೆಗೆದು ಜಲ ಮರುಪೂರಣ ಮಾಡುವ ಬರದಿಂದ ಕಂಗೆಟ್ಟ ರಾಜ್ಯಕ್ಕೆ ಕಾಯಕಲ್ಪ ಮಾಡಬೇಕಿತ್ತು. ಆದರೆ ಇಳಿ ವಯಸ್ಸಿನಲ್ಲಿ ಕಾಗೋಡು ಅವರಿಗೆ ಹಣ ಮಾಡುವ ಲೆಕ್ಕಾಚಾರ ಬಂದಿದೆ. ಬೆಂಗಳೂರಿನ ರಾಜಕಾಲುವೆ ಒತ್ತುವರಿ ಪ್ರದೇಶವನ್ನು ತೆರವುಗೊಳಿಸಲು ಸಾಧ್ಯವಾಗದೆ ಮೌನವಾಗಿ ಕುಳಿತಿದ್ದಾರೆ. ರಾಜಾ ಕಾಲುವೆಯಲ್ಲಿ ಮಂತ್ರಿ ಮಹಲ್‌, ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಕಾಂಗ್ರೆಸ್‌ ಮುಖಂಡರ ಆಸ್ತಿ ಇದೆ ಎಂಬುದೇ ಕಾರಣ ಎಂದು ಆಪಾದಿಸಿದರು.

ಕಾಗೋಡು ತಮ್ಮ ಪುತ್ರಿಯನ್ನು ರಾಜಕೀಯಕ್ಕೆ ತಂದಿರುವುದರ ಹಿಂದೆ ಅವರ ನಂತರ ಟಿಕೆಟ್‌ ಯಾರಿಗೆ ಎಂಬುದು ಸ್ಪಷ್ಟವಾಗಿದೆ. ಈ ಬೆಳವಣಿಗೆಗಳನ್ನು ನೋಡಿ ಕಾಂಗ್ರೆಸ್‌ನ ಎರಡನೇ ಹಂತದ ನಾಯಕರು ನೇಣು ಹಾಕಿಕೊಳ್ಳುವಂತಾಗಿದೆ ಎಂದು ವ್ಯಂಗ್ಯವಾಡಿದರು.
ಸರ್ವಋತು ಜಲಪಾತದ ಹೆಸರಿನಲ್ಲಿ ವಿಶ್ವವಿಖ್ಯಾತ ಜೋಗ ಜಲಪಾತದ ಪರಿಸರದ ಉದ್ದೇಶಿತ ಯೋಜನೆ ಜಾರಿಗೆ ಅವಕಾಶ ಕೊಡುವುದಿಲ್ಲ. ಈ ಭಾಗದಲ್ಲಿ ಹಕ್ಕುಪತ್ರ ಇಲ್ಲದೆ ಸಂಕಷ್ಟ ಸ್ಥಿತಿಯಲ್ಲಿರುವ 425ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವು ನೀಡಬೇಕಾದ ಕಾಗೋಡು ಬಿ.ಆರ್‌. ಶೆಟ್ಟಿಯಂತಹ ಬಂಡವಾಳಶಾಹಿಗೆ ಸಾವಿರಾರು ಎಕರೆ ಜಾಗವನ್ನು ಕೊಡಲು ಹೊರಟಿರುವ ಕ್ರಮ ಖಂಡನೀಯ ಎಂದರು.

ನಾಲಿಗೆ ಹರಿತವಿದೆ ಎಂದು ಶಾಸಕ ಮಧು ಬಂಗಾರಪ್ಪ ಬಿ.ಎಸ್‌. ಯಡಿಯೂರಪ್ಪ ಅವರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅವರ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಕುರಿತು ಕೂಡ ನಾವು ಸಾವಿರ ಮಾತನಾಡಬಹುದು. ಹಾಗೆಲ್ಲ ಮಾತನಾಡುವುದು ಸಭ್ಯತೆಯಲ್ಲ. ಯುವ ರಾಜಕಾರಣಿ ತಮ್ಮ ಜವಾಬ್ದಾರಿಯನ್ನು ಅರಿತು  ಗೌರವಯುತವಾಗಿ ಮಾತನಾಡಬೇಕು ಎಂದರು. 

ತಾಲೂಕಿನ ಅರಣ್ಯ ಇಲಾಖೆಯಲ್ಲಿ ನೆಡುತೋಪು ವಿಷಯದಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದಕ್ಕೆ ಕಾರಣವಾಗಿರುವ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್‌ ಗಂಗೊಳ್ಳಿ ಅವರನ್ನು ಇನ್ನು ಹದಿನೈದು ಇಪ್ಪತ್ತು ದಿನದಲ್ಲಿ ವರ್ಗಾವಣೆ ಮಾಡುವ ಮೂಲಕ ಸೂಕ್ತ ತನಿಖೆ ನಡೆಸದೆ ಇದ್ದಲ್ಲಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮನೆ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಸ್ವಾತಂತ್ರ್ಯ ಬಂದ ನಂತರ ಇಷ್ಟು ಹಾಳಾಗಿರುವುದು ಈಗಲೇ ಎಂದು ಕಾಣುತ್ತದೆ. ರಾಜ್ಯದ ಎಲ್ಲ ಭಾಗದ ಜನ ಜೋಗ
ಜಲಪಾತವನ್ನು ನೋಡಲು ಬರಲು ಇದೇ ರಸ್ತೆ ಬಳಸುತ್ತಿದ್ದಾರೆ. ಈ ಸ್ಥಿತಿಯನ್ನು ನೋಡಿದರೆ ಸಾಗರ ಕ್ಷೇತ್ರದಲ್ಲಿ ಶಾಸಕರೇ ಇಲ್ಲವೇನೋ ಎಂಬ
ಭಾವನೆ ಮೂಡುತ್ತದೆ ಎಂದು ಕುಟುಕಿದರು. ಗೋಷ್ಠಿಯಲ್ಲಿ ಬಿಜೆಪಿ ಪ್ರಮುಖರಾದ ಸಂತೋಷ್‌ ಶೇಟ್‌, ಅರವಿಂದ ರಾಯ್ಕರ್‌, ನಾಗರತ್ನ, ಭೀಮನೇರಿ ಶಿವಪ್ಪ, ಬಿ. ಮೋಹನ್‌, ವಿ. ಮಹೇಶ್‌, ಕಲಸೆ ಚಂದ್ರಪ್ಪ, ಎಸ್‌.ಎಲ್‌. ಮಂಜುನಾಥ್‌, ಭೀಮನೇರಿ ಶಿವಪ್ಪ, ಸುವರ್ಣ ಟೀಕಪ್ಪ, ಚಂದ್ರಶೇಖರ ಅದರಂತೆ ಇನ್ನಿತರರು ಇದ್ದರು. 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.