MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ


Team Udayavani, Apr 16, 2024, 3:11 PM IST

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

ಶಿವಮೊಗ್ಗ: ಅಂಬೇಡ್ಕರ್‌ ಜಯಂತಿಯ ಪವಿತ್ರ ದಿನದಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆಯಾಗಿದೆ. ಈ ಪ್ರಣಾಳಿಕೆಗೆ ದೇಶದ ಅನೇಕ ಹಿರಿಯರು ಮತ್ತು ತಜ್ಞರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಲಹೆ ಮತ್ತು ಮಾರ್ಗದರ್ಶನ ನೀಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮುಂದಿನ 10 ವರ್ಷಗಳಲ್ಲಿ ಏನು ಮಾಡಬೇಕು ಎಂಬುದನ್ನು ನಮೋ ಆ್ಯಪ್‌ ಮೂಲಕ 40 ಲಕ್ಷಕ್ಕೂ ಸಾರ್ವಜನಿಕರು ಸಲಹೆಗಳನ್ನು ನೀಡಿದ್ದರು. ಅದನ್ನು ಸ್ವೀಕರಿಸಿ ಪಕ್ಷದಿಂದ ಉತ್ತಮವಾದ ಪ್ರಣಾಳಿಕೆ ಅಧಿಕೃತವಾಗಿ ಲೋಕಾರ್ಪಣೆಗೊಂಡಿದೆ ಎಂದರು.

ದೇಶದ ಜನಸಾಮಾನ್ಯರು ಪ್ರತಿಯೊಬ್ಬ ವ್ಯಕ್ತಿಯೂ ಸಂತೋಷದಿಂದ ಜೀವನ ನಡೆಸಲು ಬೇಕಾದ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಪ್ರಯತ್ನ ಮಾಡಲಾಗಿದೆ. ಆರ್ಥಿಕ ಮತ್ತು ರಾಜತಾಂತ್ರಿಕವಾಗಿ ಭಾರತ ವಿಶ್ವದಲ್ಲೇ ಸೂಪರ್‌ ಪವರ್‌ ಆಗಲು ಯೋಜನೆ ರೂಪಿಸಲಾಗಿದೆ. ಇಡೀ ವಿಶ್ವವೇ ಭಾರತದ 18ನೇ ಲೋಕಸಭೆ ಚುನಾವಣೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹಲವಾರು ರಾಷ್ಟ್ರಗಳ ರಾಜತಾಂತ್ರಿಕರು ಭಾರತದಲ್ಲಿ ಬೀಡುಬಿಟ್ಟಿದ್ದಾರೆ. 95 ಕೋಟಿಗೂ ಅಧಿಕ ಮತದಾರರು ದೇಶದಲ್ಲಿ ಸುಮಾರು 10 ಲಕ್ಷ ಬೂತ್‌ಗಳಲ್ಲಿ ಮತ ಚಲಾಯಿಸಲಿದ್ದಾರೆ ಎಂದರು.

ಮೋದಿ ಸರ್ಕಾರ ಬರುವ ಹಿಂದಿನ 10 ವರ್ಷಗಳಲ್ಲಿ ನಡೆದ ಆಡಳಿತವನ್ನು ಜನ ನೋಡಿದ್ದಾರೆ. 60 ವರ್ಷ ಆಳಿದ ಕಾಂಗ್ರೆಸ್‌ ದೇಶದ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ ಹೊರಡಿಸಿರಲಿಲ್ಲ. 10 ವರ್ಷ ಆಳಿದ ಮೋದಿ ಸರ್ಕಾರ ಎಲ್ಲಾ ಅಭಿವೃದ್ಧಿಯ ಅಂಕಿ- ಅಂಶಗಳ ಸಹಿತ ಶ್ವೇತ ಪತ್ರ ಹೊರಡಿಸಿದ್ದು, ವಿಶ್ವದಲ್ಲೇ ಮೂರನೇ ಸ್ಥಾನದತ್ತ ಬೃಹತ್‌ ಆರ್ಥಿಕ ಶಕ್ತಿಯಾಗಿ ಭಾರತ ದಾಪುಗಾಲು ಹಾಕುತ್ತಿದೆ. ಕಾಂಗ್ರೆಸ್‌ ಅವಧಿಯಲ್ಲಿ 10 ವರ್ಷದಲ್ಲಿ 2800 ಮೆ. ವ್ಯಾ. ಸೋಲಾರ್‌ ಶಕ್ತಿ ಉತ್ಪತ್ತಿಯಾಗುತ್ತಿತ್ತು. ಮೋದಿ ಅವ ಧಿಯಲ್ಲಿ 72 ಸಾವಿರ ಮೆ.ವ್ಯಾ. ಸೋಲಾರ್‌ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ಬರುವ ದಿನಗಳಲ್ಲಿ ಮನೆ- ಮನೆಗಳಲ್ಲಿ ಸೋಲಾರ್‌ ವಿದ್ಯುತ್‌ ಉಚಿತ ಉತ್ಪಾದನೆಯಾಗಲಿದೆ ಎಂದರು.

ಡಿಜಿಟಲ್‌ ಪೇಮೆಂಟ್‌ ಸಿಸ್ಟಂ, ಯುಪಿಐ, ಆರ್ಥಿಕ ಸ್ಥಿರತೆ ಕಾಪಾಡಿ ಕೊಂಡು ಬಂದಿದ್ದು ವಿಶೇಷವಾಗಿ ಅನಿವಾಸಿ ಭಾರತೀಯರಿಗೆ ವಿಶ್ವದೆಲ್ಲೆಡೆ ಗೌರವ ಸಿಗುತ್ತಿದೆ. ಮಹಿಳೆಯರಿಗೆ ಶೇ. 33 ಮೀಸಲಾತಿ ಘೋಷಣೆ ಮಾಡಲಾಗಿದೆ ಎಂದರು.

ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್‌ ಮಾತನಾಡಿ, ಏ. 18ರಂದು ಬೆಳಗ್ಗೆ 9 ಗಂಟೆಗೆ ರಾಮಣ್ಣ ಪಾರ್ಕ್‌ನಲ್ಲಿ ಪೂಜೆ ಸಲ್ಲಿಸಿ ಬೃಹತ್‌ ಮೆರವಣಿಗೆಯೊಂದಿಗೆ ಸಂಸದ ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಸಲಿದ್ದಾರೆ. ಗೋಪಿ ಸರ್ಕಲ್‌ ಬಳಿ ಸಾರ್ವಜನಿಕ ಸಭೆ ಕೂಡ ನಡೆಯಲಿದೆ. ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ.ಕುಮಾರ ಸ್ವಾಮಿ, ಬಿ.ವೈ. ವಿಜಯೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಚನ್ನಬಸಪ್ಪ, ಶಾರದಾ ಪೂರ್ಯಾ ನಾಯ್ಕ, ಡಿ.ಎಸ್‌. ಅರುಣ್‌, ಭಾರತಿಶೆಟ್ಟಿ, ಎಸ್‌. ರುದ್ರೇಗೌಡ, ಮಾಜಿ ಶಾಸಕರಾದ ಕುಮಾರ್‌ ಬಂಗಾರಪ್ಪ, ಅಶೋಕ್‌ ನಾಯ್ಕ, ಹರತಾಳು ಹಾಲಪ್ಪ, ಕೆ.ಬಿ. ಪ್ರಸನ್ನ ಕುಮಾರ್‌, ಎಂ.ಬಿ. ಭಾನು ಪ್ರಕಾಶ್‌, ಆರ್‌.ಕೆ. ಸಿದ್ದರಾಮಣ್ಣ ಸೇರಿದಂತೆ ಅನೇಕರು ಭಾಗವಹಿಸಲಿದ್ದು ಹಬ್ಬದ ವಾತಾವರಣದಲ್ಲಿ ನಾಮಪತ್ರ ಸಲ್ಲಿಸುವ ಮೂಲಕ ಬೃಹತ್‌ ರಣಕಹಳೆ ಮೊಳಗಿಸಲಾಗುವುದು ಎಂದರು.

ಡಿ.ಎಸ್‌. ಅರುಣ್‌, ಮಾಲತೇಶ್‌, ನಾಗರಾಜ್‌, ಮೋಹನ್‌ ರೆಡ್ಡಿ, ಹರಿಕೃಷ್ಣ, ಜ್ಯೋತಿಪ್ರಕಾಶ್‌, ಐಡಿಯಲ್‌ ಗೋಪಿ, ಅಣ್ಣಪ್ಪ, ಚಂದ್ರಶೇಖರ್‌, ಮೊದಲಾದವರಿದ್ದರು.

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಸುಳ್ಳು ಭರವಸೆಯನ್ನು ಮಾಮೂಲಿನಂತೆ ಘೋಷಿಸಿದ್ದು, ಈ ಬಗ್ಗೆ ಜನ ವಿಶ್ವಾಸ ಕಳೆದುಕೊಂಡು ತಿರಸ್ಕಾರ ಮಾಡಿದ್ದಾರೆ. ಸ್ಟ್ಯಾಂಪ್‌ ಡ್ಯೂಟಿ, ಅಬಕಾರಿ ಎಲ್ಲವೂ ಶೇ.80ರಷ್ಟು ಏರಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಅಕ್ಕಿಯನ್ನು ತನ್ನದೆಂದು ಸುಳ್ಳು ಹೇಳುವ ಕಾಂಗ್ರೆಸ್‌ ಮೋಸವನ್ನು ಜನ ಅರ್ಥ ಮಾಡಿಕೊಂಡಿದ್ದಾರೆ. ಏ.18 ಮತ್ತು 19 ರಂದು ಶಿವಮೊಗ್ಗ ಕ್ಷೇತ್ರದ ಜನತೆ ಹುಬ್ಬೇರಿಸುವಂತೆ ಕಾಂಗ್ರೆಸ್‌ನ ಪ್ರಮುಖರು ಬಿಜೆಪಿ ಸೇರಲಿದ್ದಾರೆ.– ಬಿ.ವೈ. ರಾಘವೇಂದ್ರ, ಸಂಸದ

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.