ಪೌರಕಾರ್ಮಿಕ ಅನಧಿಕೃತ ಗೈರುಹಾಜರಿಗೆ ಶಿಸ್ತುಕ್ರಮ ಅನಿವಾರ್ಯ: ಮಧುರಾ ಎಚ್ಚರಿಕೆ
Team Udayavani, Mar 1, 2022, 5:51 PM IST
ಸಾಗರ: ಇಲ್ಲಿನ ನಗರಸಭೆ ಆವರಣಕ್ಕೆ ಮಂಗಳವಾರ ಬೆಳಗಿನ ಅವಧಿಯಲ್ಲಿ ದಿಢೀರ್ ಭೇಟಿ ನೀಡಿದ ನಗರಸಭಾಧ್ಯಕ್ಷೆ ಮಧುರಾ ಶಿವಾನಂದ್ ಪೌರಕಾರ್ಮಿಕರ ಹಾಜರಿ ದಾಖಲೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಪೌರಕಾರ್ಮಿಕರು ನಗರಸಭೆಯ ಅಧಿಕಾರಿಗಳಿಗೆ ಪೂರ್ವ ಮಾಹಿತಿ ನೀಡದೆ ಗೈರಾಗುತ್ತಿದ್ದಾರೆ ಎಂಬ ಮಾಹಿತಿ ಇದೆ. ರಜೆ ಪತ್ರ ನೀಡದೆ ಹಾಗೂ ಮಾಹಿತಿ ನೀಡದೆ ಗೈರಾದವರ ಮೇಲೆ ಶಿಸ್ತುಕ್ರಮ ಅನಿವಾರ್ಯ. ಅನಾರೋಗ್ಯ ಅಥವಾ ತುರ್ತು ಕಾರ್ಯ ಇದ್ದ ಸಂದರ್ಭ ಮುಂಚಿತವಾಗಿ ತಿಳಿಸಬೇಕು. ಬದಲಿ ವ್ಯವಸ್ಥೆ ಮಾಡಿಕೊಡಬೇಕು. ಅನಧಿಕೃತ ಗೈರಾದವರಿಗೆ ಸವಲತ್ತು ನೀಡಲಾಗುವದಿಲ್ಲ ಎಂದರು.
ಪೌರಕಾರ್ಮಿಕರು ಅನಧಿಕೃತ ಗೈರಾಗುವ ಬಗ್ಗೆ ಪ್ಯಾಕೇಜ್ ಗುತ್ತಿಗೆದಾರರು ಗಮನ ಹರಿಸಬೇಕು. ಆಕಸ್ಮಿಕ ಅವಘಢ ಸಂಭವಿಸಿದರೆ ಅನಧಿಕೃತವಾಗಿ ಬದಲಿ ವ್ಯವಸ್ಥೆಯಲ್ಲಿ ಕರ್ತವ್ಯಕ್ಕೆ ಹಾಜರಾದ ಪೌರಕಾರ್ಮಿಕರಿಗೆ ಸೂಕ್ತ ಸೌಲಭ್ಯ ನೀಡಲು ಸಾಧ್ಯವಾಗುವುದಿಲ್ಲ. ನಗರ ವಿಸ್ತಾರವಾಗಿದ್ದು, ಪೌರಕಾರ್ಮಿಕರ ಸಂಖ್ಯೆ ಕಡಿಮೆ ಇದೆ. ಜತೆಗೆ ಅನಧಿಕೃತವಾಗಿ ಗೈರಾದರೆ ನಗರ ನೈರ್ಮಲ್ಯ ಕಾರ್ಯಕ್ಕೆ ಅಡಚಣೆಯಾಗುತ್ತದೆ ಎಂದರು.
ಪರಿಸರ ವಿಭಾಗದ ರಚನಾ, ಪೌರಕಾರ್ಮಿಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ