ಸನಾತನ ಧರ್ಮ ರಕ್ಷಣೆಗೆ ಮೈಸೂರು ಸಂಸ್ಥಾನ ಬದ್ಧ


Team Udayavani, Feb 4, 2019, 11:10 AM IST

ray-4.jpg

ಶಿವಮೊಗ್ಗ: ರಾಜ್ಯದ ಇತಿಹಾಸದಲ್ಲಿ ಬ್ರಾಹ್ಮಣ ಸಮಾಜ ಎಲ್ಲಾ ಸಮುದಾಯಗಳೊಂದಿಗೆ ಸಂಬಂಧ ಕಾಪಾಡಿಕೊಂಡು ಬರುತ್ತಿದೆ. ಅಲ್ಲದೆ ಸನಾತನ ಧರ್ಮವನ್ನು ಅನುಸರಿಸಿಕೊಂಡು ಬರುತ್ತಿವೆ. ಸಮುದಾಯದ ಬಾಂಧವ್ಯವನ್ನು ಮೈಸೂರು ಸಂಸ್ಥಾನ ಹೀಗೆ ಮುಂದುವರಿಸಿಕೊಂಡು ಹೋಗುತ್ತದೆ ಎಂದು ಮೈಸೂರು ಸಂಸ್ಥಾನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದರು.

ನಗರದ ಗಾಯತ್ರಿ ಮಾಂಗಲ್ಯ ಮಂದಿರಲ್ಲಿ ಭಾನುವಾರ ಹೊಯ್ಸಳ ಕರ್ನಾಟಕ ಸಂಘಗಳ ಒಕ್ಕೂಟ, ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಘದಿಂದ ಆಯೋಜಿಸಿದ್ದ ಹೊಯ್ಸಳ ಕರ್ನಾಟಕ ರಾಜ್ಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಪೂರ್ವಜರು ಮಾಡಿರುವ ಸಂಪ್ರದಾಯಗಳನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ. ಧಾರ್ಮಿಕ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಬ್ರಾಹ್ಮಣ ಸಮುದಾಯದ ತನ್ನದೇ ಆದ ಕೊಡುಗೆಗಳನ್ನು ನೀಡಿದೆ. ಮೈಸೂರು ಸಂಸ್ಥಾನ ಪರ್ಕಳ ಪೀಠ ಹಾಗೂ ಶೃಂಗೇರಿ ಪೀಠದಲ್ಲಿನ ರಾಜಗುರುಗಳ ಮಾರ್ಗದರ್ಶನದಿಂದ ಧಾರ್ಮಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಮುಂದೆಯೂ ಸಹ ಮೈಸೂರು ಸಂಸ್ಥಾನ ಧಾರ್ಮಿಕ ಕಾರ್ಯಗಳನ್ನು ನಿರಂತರವಾಗಿ ಮುಂದುವರಿಸಿಕೊಂಡು ಹೋಗುತ್ತದೆ ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್‌ ಮಾತನಾಡಿ, ಬ್ರಾಹ್ಮಣ ಸಮುದಾಯ ಪ್ರಕೃತಿ ಆರಾಧನೆ ಹಾಗೂ ಸಂಸ್ಕೃತಿ ಪುರಸ್ಕಾರ ಮಾಡುತ್ತಾ ವಿಕೃತಿಯನ್ನು ತಿರಸ್ಕರಿಸಿದೆ. ಬ್ರಾಹ್ಮಣ ಸಮುದಾಯ ತನ್ನ ಮೇಲೆ ಎಷ್ಟೇ ಶೋಷಣೆಯಾದರೂ ಸಹ ಶಕ್ತಿಯಾಗಿ ಸಂಘಟಿಸಿಕೊಂಡು ಮೇಲೇರುವ ಪ್ರಯತ್ನ ಮಾಡುತ್ತಿದೆ ಎಂದ ಅವರು, ಭಾರತದಲ್ಲಿ ಕೃಷಿ ಹಾಗೂ ಋಷಿ ಎರಡು ಮುಖ್ಯವಾಗಿದ್ದು. ಋಷಿ ಸಂಸ್ಕೃತಿ ಸಿದ್ಧಾಂತಗಳ ಮೂಲಕ ಜ್ಞಾನ ತುಂಬುವ ಕೆಲಸ ಮಾಡುತ್ತಿದೆ. ಕೃಷಿಗೆ ಪ್ರಕೃತಿ ಶೋಷಣೆೆ ಮಾಡದೆ ಬದುಕುವ ವಿದ್ಯೆಯನ್ನು ಕಲಿಸಿಕೊಡುತ್ತದೆ ಎಂದರು.

ಸಮಾವೇಶದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದ ವಿಧಾನ ಪರಿಷತ್‌ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಮಾತನಾಡಿ, ಭಾರತೀಯ ಸಂಸ್ಕೃತಿಯನ್ನು ಉಳಿಸುವ ಹೊಣೆ ಯುವಜನತೆಯ ಮೇಲಿರುವುದರಿಂದ ಅವರಿಗೆ ಸೂಕ್ತ ಮಾರ್ಗದರ್ಶನ ಮಾಡುವ ಮೂಲಕ ಅವರ ಮನಸ್ಥಿತಿಯನ್ನು ಉತ್ತಮ ಪಡಿಸಬೇಕಿದೆ ಎಂದರು.

ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್‌ ಮಾತನಾಡಿ, ಬ್ರಾಹ್ಮಣ ಸಮಾಜವು ಸಮಾಜಮುಖೀ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಬ್ರಾಹ್ಮಣ ಸಮಾಜ ತಮ್ಮದೇ ಕೊಡುಗೆ ನೀಡಿದೆ ಎಂದರು.

ಬ್ರಾಹ್ಮಣ ಸಮುದಾಯದಲ್ಲಿ ಇನ್ನೂ ಸಹ ಅನೇಕ ಜನರು ಆರ್ಥಿಕವಾಗಿ ಸಬಲರಾಗಿಲ್ಲ. ಹಾಗಾಗಿ ಅವರನ್ನು ಸಹ ಆರ್ಥಿಕವಾಗಿ ಸಬಲರನ್ನಾಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಬ್ರಾಹ್ಮಣ ಸಮುದಾಯ ಮುಂದಾಗುವುದರೊಂದಿಗೆ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.

ಮಾಜಿ ಅಡ್ವೋಕೇಟ್ ಜನರಲ್‌ ಅಶೋಕ್‌ ಹಾರನಹಳ್ಳಿ ಮಾತನಾಡಿ, ಇಂದು ಸಮಾಜದ ಪ್ರಮುಖ ಅಂಗಗಳಲ್ಲಿ ಸಾಮಾಜಿಕ ಬದ್ಧತೆ, ನೈತಿಕತೆ ಕುಸಿದಿದೆ. ಹಣದ ವ್ಯಾಮೋಹ ಹೆಚ್ಚಾಗಿ ಸಂಬಂಧಗಳು ಸಡಿಲಗೊಳ್ಳುತ್ತಿದೆ. ಈ ಸಂದರ್ಭದಲ್ಲಿ ತಮ್ಮ ನಡವಳಿಕೆಯನ್ನು ಬದಲಾಯಿಸಿಕೊಳ್ಳುವ ಅವಶ್ಯಕತೆ ಇದೆ ಎಂದರು.

ಪ್ರತಿಯೊಬ್ಬರು ತಮ್ಮಲ್ಲಿ ಸದಾಚಾರವನ್ನು ಅಳವಡಿಸಿಕೊಂಡಾಗ ರಾಷ್ಟ್ರದ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರದ ಹಿತಕ್ಕಾಗಿ ಸಂಕಲ್ಪ ಮಾಡಿಕೊಂಡು ಸದಾಚಾರವನ್ನು ನಮ್ಮ ದೇಹದ ಅಂಗಾಂಗಳಾಗಿ ಅಳವಡಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದರು. ಕಾರ್ಯಕ್ರಮದಲ್ಲಿ 50 ಮಂದಿ ನಿವೃತ್ತ ಯೋಧರನ್ನು ಗೌರವಿಸಲಾಯಿತು. ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಕೆ.ಎನ್‌. ವೆಂಕಟನಾರಾಯಣ, ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಘದ ಜಿಲ್ಲಾಧ್ಯಕ್ಷ ಎಂ. ವೇಣುಗೋಪಾಲ್‌, ಹೊಯ್ಸಳ ಕರ್ನಾಟಕ ಸಂಘಗಳ ಒಕ್ಕೂಟದ ಅಧ್ಯಕ್ಷ ಡಿ.ಎನ್‌. ವೆಂಕಟೇಶಮೂರ್ತಿ ಮತ್ತಿತರರು ಇದ್ದರು.

ನನ್ನ ಯಶಸ್ಸಿಗೆ ಗುರು ಪುಟ್ಟಣ್ಣ ಕಾರಣ: ಶ್ರೀನಾಥ್‌
ದುಡಿಯುವ ಶಕ್ತಿ, ಪ್ರೀತಿಸುವ ಜನರು ಇದ್ದಾಗ ಯಾವ ಕ್ಷೇತ್ರದಲ್ಲಾದರೂ ಯಶಸ್ಸು ಗಳಿಸಬಹುದು ಎಂದು ಚಲನಚಿತ್ರ ನಟ ಶ್ರೀನಾಥ್‌ ಅಭಿಪ್ರಾಯಪಟ್ಟರು. ಜೀವನದ ಅನೇಕ ಸರಿ, ತಪ್ಪುಗಳ ಮಧ್ಯೆಯೂ ಸಿನಿಮಾರಂಗದಿಂದ ಸಾಕಷ್ಟು ಪ್ರೀತಿ ಸಿಕ್ಕಿದೆ. ನಾನು ಈ ಹಂತಕ್ಕೆ ಬರಲು ನನ್ನ ಗುರು ಪುಟ್ಟಣ್ಣ ಕಣಗಾಲ್‌ ಕಾರಣ. ಅವರು ನನ್ನ ಚಿತ್ರ ನಿರ್ದೇಶಿಸಿರುವ ಜತೆಗೆ ನನ್ನ ಬದುಕನ್ನೂ ನಿರ್ದೇಶಿಸಿದ್ದಾರೆ. ಏನು ಮಾಡಬೇಕು, ಮಾಡಬಾರದು ಎಂದು ಕಲಿಸಿದ್ದಾರೆ. ಅವರ ಸ್ನೇಹದ ಕಡಲಲ್ಲಿ, ನೆನಪಿನ ದೋಣಿಯಲ್ಲಿ, ಪಯಣಿಗ ನಾನಮ್ಮ ಎನ್ನುವ ಹಾಡು ನನ್ನ ಜೀವನದ ಹಾಡಾಗಿದೆ ಎಂದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.