ಸೆಪ್ಟೆಂಬರ್ ಏಳಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ
Team Udayavani, Aug 31, 2019, 12:32 PM IST
ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೆಪ್ಟೆಂಬರ್ ಏಳರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದ ಹೆಲಿಪ್ಯಾಡ್ ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜಭವನದಲ್ಲಿ ಈಗಾಗಲೇ ಚರ್ಚೆಯಾಗಿದೆ.. ಅನುಮತಿ ದೊರಕಬೇಕಿದೆ. ಪ್ರವಾಹದ ಹಾನಿ ಕುರಿತು ಬ್ಲೂ ಪ್ರಿಂಟ್, ಪ್ರೇಸೆಂಟೇಶನ್ ಮೂಲಕ ಪ್ರಧಾನಿಗೆ ಮನವರಿಕೆ ಮಾಡಲಾಗುವುದು. ಕೇಂದ್ರ ತಂಡ ವರದಿ ನೀಡಿದ ಬಳಿಕ ಪರಿಹಾರ ಬಿಡುಗಡೆಯಾಗಲಿದೆ ಎಂದು ಹೇಳಿದರು.
ಡಿಕೆಶಿವಕುಮಾರ್ ಅವರ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರರಿಸಿದ ಯಡಿಯೂರಪ್ಪ, ಅದಕ್ಕೂ ನಮಗೂ ಸಂಬಂಧವಿಲ್ಲ ಎಂದರು.
ಯಡಿಯೂರಪ್ಪ ಕಾರವಾರ ಪ್ರವಾಸ ರದ್ದು: ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರ ಕಾರವಾರ ಪ್ರವಾಸ ರದ್ದಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಫ್ಟರ್ ಲ್ಯಾಂಡಿಂಗ್ ಕಷ್ಟವಾಗುವ ಹಿನ್ನೆಲೆ ಕಾರವಾರ ಪ್ರವಾಸ ರದ್ದು ಮಾಡಿದ್ದು ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ಸಿಎಂ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು