ಅಪಘಾತ ನಿಯಂತ್ರಣಕ್ಕೆ ಅಗತ್ಯ ಕ್ರಮ; ಆಯುಕ್ತೆ ಗಾಯತ್ರಿದೇವಿ
ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದರೂ ಚಾಲಕರ ನಿರ್ಲಕ್ಷ್ಯದಿಂದ ಈ ರೀತಿ ಆಗುತ್ತಿವೆ.
Team Udayavani, Mar 25, 2022, 6:48 PM IST
ಹೊಳಲ್ಕೆರೆ: ತಾಲೂಕಿನ ದುಮ್ಮಿ ಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಳಕ್ಕೆ ಸಾರಿಗೆ ಇಲಾಖೆಯ ಶಿವಮೊಗ್ಗ ಪ್ರಾದೇಶಿಕ ಆಯುಕ್ತೆ ಗಾಯತ್ರಿದೇವಿ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಸ್ ಚಾಲಕ ಅತಿ ವೇಗದಿಂದ ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಎದುರಿಗೆ ಬೈಕ್ ಬರುತ್ತಿದ್ದರೂ ಲೆಕ್ಕಿಸದೆ ಲಾರಿ ಹಿಂದಿಕ್ಕುವ ಭರದಲ್ಲಿ ಬೈಕ್ಗೆ ಡಿಕ್ಕಿ ಹೊಡೆಸಿದ್ದಾನೆ. ದುಮ್ಮಿ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವುದೇ ಸಮಸ್ಯೆ ಇಲ್ಲದಿದ್ದರೂ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ನಾಲ್ಕು ಜೀವಗಳು ಬಲಿಯಾಗಿವೆ. ಬೈಕ್ ಚಾಲಕ ನಾಲ್ವರನ್ನು ಕೂಡ್ರಿಸಿಕೊಂಡುಚಲಾಯಿಸುವುದು ಕೂಡ ಅಪಾಯಕಾರಿ. ಜೀವ
ಹಾನಿ ತಪ್ಪಿಸಲು ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸಬೇಕೆಂದರು.
ಅಪಘಾತ ಸಂಭವಿಸದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದರೂ ಚಾಲಕರ ನಿರ್ಲಕ್ಷ್ಯದಿಂದ ಈ ರೀತಿ ಆಗುತ್ತಿವೆ. ರಸ್ತೆ ಅಪಘಾತ ತಡೆಗೆ ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಸಾರಿಗೆ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಅಪಘಾತ ನಿಯಂತ್ರಣಕ್ಕೆ ಹಳ್ಳಿಗಳಲ್ಲಿ ಬೀದಿನಾಟಕ ಪ್ರದರ್ಶನ, ಕಾನೂನು ಅರಿವು, ಹೊಳಲ್ಕೆರೆಯಿಂದ ಚನ್ನಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಿರುವುಗಳಲ್ಲಿ ಹಳದಿ ಪಟ್ಟಿ, ಹಂಪ್ಸ್ ಹಾಗೂ ಮಾರ್ಗಸೂಚಿ ಫಲಕ ಅಳವಡಿಕೆಯಂತಹ ವಿವಿಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಚಿತ್ರದುರ್ಗದ ಪ್ರಾದೇಶಿಕ ಸಾರಿಗೆ ಅ ಧಿಕಾರಿ ಎಸ್. ಬಾಲಕೃಷ್ಣ, ಹಿರಿಯ ವಾಹನ ನಿರೀಕ್ಷಕ ಎನ್.ಬಿ. ಕರುಣಾಕರ, ಸಿಪಿಐ ರವೀಶ್, ಪಿಎಸ್ಐ ಮೋಹನ್ ಇತರರು ಇದ್ದರು.
ಮಾದಕ ಪರ್ದಾಥ, ಕುಡಿತ, ಗುಟ್ಕಾ ಹಾಕಿಕೊಂಡು ವಾಹನಗಳನ್ನು ಓಡಿಸುವ ವಾಹನ ಚಾಲಕರಿಗೆ ದಂಡ ವಿಧಿಸಲು ಇಲಾಖೆ ಸಿದ್ದವಿದೆ. ಅಪಘಾತ ಎಸಗಿದ ಬಸ್ ಚಾಲಕನಿಗೆ ಎರಡು ದಿನಗಳ ಹಿಂದೆ ಮಂಗಳೂರಿನಲ್ಲಿ ಗುಟ್ಕಾ ಹಾಕಿಕೊಂಡಿದ್ದಕ್ಕೆ ನಾವೇ 2 ಸಾವಿರ ರೂ. ದಂಡ ವಿಧಿಸಿದ್ದೆವು. ಆದರೂ ಎಚ್ಚೆತ್ತುಕೊಳ್ಳದೆ ಅಪಘಾತ ಮಾಡಿ ನಾಲ್ವರ ಸಾವಿಗೆ ಕಾರಣನಾಗಿರುವುದು ನೋವು ತಂದಿದೆ.
ಗಾಯತ್ರಿದೇವಿ, ಸಾರಿಗೆ ಇಲಾಖೆಯ ಶಿವಮೊಗ್ಗ
ಪ್ರಾದೇಶಿಕ ಆಯುಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು