ಭೂಮಿ ಒಡೆಯರಾದವರಿಗೆ ಹಳೆಯ ಇತಿಹಾಸ ಬೇಡ; ಕಾಗೋಡು ಬೇಸರ


Team Udayavani, Apr 18, 2022, 4:06 PM IST

Untitled-1

ಸಾಗರ: ಕಾಗೋಡು ಚಳುವಳಿಯಿಂದ ಉಪಕೃತರಾಗಿ ಭೂಮಿ ಪಡೆದ ಗೇಣಿದಾರರು ಈಗ ಭೂಒಡೆಯರಾಗಿ ಕುಳಿತಿದ್ದಾರೆ. ಹೋರಾಟದ ಫಲದಿಂದ ನಾವು ಭೂಒಡೆಯರಾಗಿದ್ದೇವೆ ಎಂದು ಮರೆತಿರುವುದು ದುರದೃಷ್ಟಕರ ಸಂಗತಿ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.

ಇಲ್ಲಿನ ಶೃಂಗೇರಿ ಶಂಕರಮಠದ ಭಾರತೀತೀರ್ಥ ಸಭಾಭವನದಲ್ಲಿ ಸೋಮವಾರ ಡಾ. ಎಚ್. ಗಣಪತಿಯಪ್ಪ ಸೇವಾ ಟ್ರಸ್ಟ್, ತಾಲೂಕು ರೈತ ಸಂಘ ಮತ್ತು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಆಯೋಜಿಸಿದ್ದ ನೇಗಿಲ ಯೋಗಿ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೊಳಗದ ಮೂಲಕ ಭತ್ತ ಸುರಿದು ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಗೇಣಿ ಹೋರಾಟದ ಭೂಮಿ ಪಡೆದವರಿಗೆ ಒಡೆಯನಾಗುವ ಚಿಂತೆ ಹೆಚ್ಚಿದೆಯೇ ವಿನಾ ಹಳೆಯ ಇತಿಹಾಸ ಬೇಡವಾಗಿದೆ. ಇಂದು ಗೇಣಿದಾರರು ಭೂಒಡೆಯರಾಗಿದ್ದಾರೆ ಎಂದರೆ ಅದಕ್ಕೆ ಚಳುವಳಿಯನ್ನು ರೈತ ಸಂಘದ ಮೂಲಕ ಹುಟ್ಟು ಹಾಕಿದ ಗಣಪತಿಯಪ್ಪ ಕಾರಣವಾಗಿದ್ದಾರೆ. ಗೇಣಿ ಭೂಮಿ ಪಡೆದವರು ಗಣಪತಿಯಪ್ಪ ಅವರ ಫೋಟೋವನ್ನು ಹೃದಯದಲ್ಲಿ ಶಾಶ್ವತವಾಗಿ ಇರಿಸಿಕೊಳ್ಳಬೇಕು. ಕಾಗೋಡು ಭೂಮಿ ಹೋರಾಟಕ್ಕೆ ಧ್ವನಿ ನೀಡಿದವರು ಅಂದಿನ ಮುಖ್ಯಮಂತ್ರಿ ಡಿ. ದೇವರಾಜ ಅರಸು. ಕಾಗೋಡು ಸತ್ಯಾಗ್ರಹ ಜನರ ಸ್ಮೃತಿಪಟಲದಿಂದ ದೂರವಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆ ನಮ್ಮೆಲ್ಲರ ಮೇಲೆ ಇದೆ ಎಂದು ಹೇಳಿದರು.

ನೇಗಿಲ ಯೋಗಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮಾಜಿ ಶಾಸಕ ಬಿ. ಸ್ವಾಮಿರಾವ್, ಹೋರಾಟದಿಂದ ಉಪಕೃತರಾದವರು ಹೋರಾಟವನ್ನು ಮರೆತಿದ್ದು ವಿಪರ್ಯಾಸದ ಸಂಗತಿ. ಕಾಗೋಡು ಸತ್ಯಾಗ್ರಹದಲ್ಲಿ ಗಣಪತಿಯಪ್ಪ ಅವರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುವ ಜೊತೆಗೆ ಭೂಮಾಲೀಕರ ದಾಸ್ಯದಿಂದ ಗೇಣಿದಾರರನ್ನು ಹೊರಗೆ ತರುವಲ್ಲಿ ಗಣಪತಿಯಪ್ಪ ಪ್ರಮುಖಪಾತ್ರ ವಹಿಸಿದ್ದರು. ಅವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸಿ, ನೇಗಿಲಯೋಗಿ ಪ್ರಶಸ್ತಿ ನೀಡುತ್ತಿರುವುದು ಸ್ಮರಣೀಯ ಸಂಗತಿ ಎಂದು ತಿಳಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿಷ್ಣುನಾಯ್ಕ್ ಅಂಕೋಲ, ನಮಗೆ ನೆರಳು ಮತ್ತು ಭೂಮಿ ನೀಡಿದ ಹೋರಾಟವನ್ನು ಎಂದಿಗೂ ಮರೆಯಬಾರದು. 1936ರಲ್ಲಿ ದಿನಕರ ದೇಸಾಯಿ ದಕ್ಷಿಣ ಕನ್ನಡದಲ್ಲಿ ಹೋರಾಟಕ್ಕೆ ಚಾಲನೆ ನೀಡಿದರು. ಇದರಿಂದ ಪ್ರೇರೇಪಿತರಾದ ಗಣಪತಿಯಪ್ಪ ಅವರು 1945 ರಲ್ಲಿ ದಿನಕರ ದೇಸಾಯಿ ಅವರನ್ನು ಕಾಗೋಡು ಗ್ರಾಮಕ್ಕೆ ಕರೆಸಿ ರೈತರಲ್ಲಿ ಪ್ರೇರಣೆ ನೀಡಿದ್ದರು. ಕಾಗೋಡು ಹೋರಾಟ ಸಹಸ್ರಾರು ರೈತರ ಬದುಕಿಗೆ ಬೆಳಕು ನೀಡಿದೆ ಎಂದು ಹೇಳಿದರು.

ಟ್ರಸ್ಟ್ ಅಧ್ಯಕ್ಷ ಉಮೇಶ್ ಹಿರೇನೆಲ್ಲೂರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ದಿಕ್ಸೂಚಿ ಭಾಷಣ ಮಾಡಿದರು. ವೇದಿಕೆಯಲ್ಲಿ ಶೃಂಗೇರಿ ಶಂಕರಮಠದ ಧರ್ಮದರ್ಶಿ ಅಶ್ವಿನಿಕುಮಾರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಿ.ಪರಮೇಶ್ವರಪ್ಪ, ಸಾಹಿತ್ಯ ಪರಿಷತ್ ಅಧ್ಯಕ್ಷ ವಿ.ಟಿ.ಸ್ವಾಮಿ, ರೈತ ಸಂಘದ ಅಧ್ಯಕ್ಷ ದಿನೇಶ್ ಸಿರವಾಳ, ಸಂಚಾಲಕ ರಮೇಶ್ ಕೆಳದಿ ಉಪಸ್ಥಿತರಿದ್ದರು. ಗವಿಯಪ್ಪ ಎಲ್.ಟಿ. ಮತ್ತು ಸಂಗಡಿಗರು ಪ್ರಾರ್ಥಿಸಿದರು. ಹೊಯ್ಸಳ ಗಣಪತಿಯಪ್ಪ ಸ್ವಾಗತಿಸಿದರು. ಕಿರಣ್ ವಂದಿಸಿದರು. ಬಿ.ಡಿ.ರವಿಕುಮಾರ್ ನಿರೂಪಿಸಿದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.