ಸವಾಲು,ಸಂಕಷ್ಟಗಳ ನಡುವೆ ಪತ್ರಿಕೆಗಳು ನಂಬಿಕೆಗೆ ಅರ್ಹ: ಕುಮಾರ್ ಬಂಗಾರಪ್ಪ


Team Udayavani, Jul 24, 2022, 8:31 PM IST

1-wqewqwqeq

ಸೊರಬ: ಆಧುನಿಕತೆಯ ಭರಾಟೆಯಲ್ಲಿ ಪತ್ರಿಕೆಗಳು ಹಲವು ಸವಾಲುಗಳು ಮತ್ತು ಸಂಕಷ್ಟಗಳ ನಡುವೆ ಜನತೆಗೆ ವಸ್ತುನಿಷ್ಠ ವರದಿಯನ್ನು ತಲುಪಿಸುವ ಮೂಲಕ ನಂಬಿಕೆಗೆ ಅರ್ಹವಾಗಿವೆ ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.

ಭಾನುವಾರ ಪಟ್ಟಣದ ಗುರುಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ನೂತನ ಕಚೇರಿ ಪ್ರಾರಂಭೋತ್ಸವ, ಪತ್ರಿಕಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ತಂತ್ರಜ್ಞಾನಗಳು ಮುಂದುವರೆದಂತೆ ದೃಶ್ಯ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳು ಅತಿ ವೇಗವಾಗಿ ಯುವ ಜನತೆಯನ್ನು ತಲುಪುತ್ತಿವೆ. ಆದರೆ, ದೃಶ್ಯ ಮಾಧ್ಯಮಗಳು ತತಕ್ಷಣದ ಘಟನಾವಳಿಗಳ ಕುರಿತು ವರದಿ ಬಿತ್ತರಿಸಿವೆ, ಆದರೆ, ಪತ್ರಿಕೆಗಳು ವಿಮರ್ಶಾತ್ಮಕವಾಗಿ ವರದಿಗಳನ್ನು ಪ್ರಕಟಿಸುವ ಮೂಲಕ ಶತಮಾನದಿಂದಲೂ ಜನತೆಯನ್ನು ಎಚ್ಚರಿಸುವ ಕೆಲಸ ಮಾಡುತ್ತಿವೆ. ಆಡಳಿತವನ್ನು ಚುರುಕುಗೊಳಿಸುವ ಪ್ರಯತ್ನ ಮಾಡುತ್ತಿವೆ. ಪತ್ರಿಕೆಗಳು ಏಕ ಮುಖವಾದ ದೃಷ್ಟಿಕೋನ ಹೊಂದಿದಾಗ ಸಮಾಜಕ್ಕೆ ಆತಂಕಕಾರಿಯಾಗುತ್ತವೆ ಎಂದರು.

ರಾಜಾಡಳಿತದ ಅವಧಿಯಲ್ಲಿ ರಾಜ ಮಹಾರಾಜರನ್ನು ಆಧಾರ ಗೌರವದಿಂದ ಕಾಣಲಾಗುತ್ತಿತ್ತು. ತದ ನಂತರ ಪ್ರಜಾಪ್ರಭುತ್ವ ಆಡಳಿತಕ್ಕೆ ಬಂದ ಮೇಲೆ ಪ್ರಜೆಗಳೇ ಪ್ರಭುಗಳಾದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೂರು ಅಂಗಗಳಿದ್ದರೂ ಸಹ ನಾಲ್ಕನೇ ಅಂಗವೆಂದು ಪತ್ರಿಕಾ ರಂಗವನ್ನು ಪರಿಗಣಿಸಲಾಗುತ್ತದೆ. ಹಲವು ಪತ್ರಿಕೆಗಳು ಆರಂಭದಿಂದಲೂ ಒಂದೇ ಸಂಸ್ಕೃತಿಯನ್ನು ಅಳವಡಿಸಿಕೊಂಡು ಬಂದಿದ್ದರೆ, ಇತ್ತೀಚೆಗೆ ಕೆಲ ಪತ್ರಿಕೆಗಳು ಓದುಗ ಬಯಸುವ ವರದಿ ನೀಡುವ ಮೂಲಕ ಜನತೆಯನ್ನು ಸ್ಪರ್ಧಾತ್ಮಕವಾಗಿ ತಲುಪುತ್ತಿರುವ ನಿದರ್ಶನಗಳಿವೆ. ಪ್ರಸ್ತುತ ದಿನಮಾನಗಳಲ್ಲಿ ಪತ್ರಿಕೆಗಳು ಜಾಹೀರಾತು ಇಲ್ಲದೇ ಪ್ರಕಟಗೊಳಿಸುವುದೇ ಕಷ್ಟ ಎನ್ನುವ ಸ್ಥಿತಿಗೆ ಬಂದು ತಲುಪಿವೆ. ಮುದ್ರಣ ಕಾಗದಕ್ಕೂ ಸರ್ಕಾರದ ಸಹಾಯ ಧನ ನೀಡುವಂತೆ ಒತ್ತಾಯ ಮಾಡುವ ಸ್ಥಿತಿಗೆ ತಲುಪಿವೆ. ಸಣ್ಣ ಪತ್ರಿಕೆಗಳ ಸ್ಥಿತಿ ಸಾಕಷ್ಟು ಸಂಕಷ್ಟದಲ್ಲಿದೆ. ಆದರೂ, ಪತ್ರಿಕೆಗಳಲ್ಲಿ ಪ್ರಕಟವಾಗುವ ವರದಿಗಳು ಮನಸ್ಸಿನ ಅಂತರಾಳದಲ್ಲಿ ಉಳಿಯಲು ಸಾಧ್ಯವಿದೆ. ಇತಿಹಾಸ ಅರಿವಿನ ಜೊತೆಗೆ ಇಂದಿನ ಸ್ಥಿತಿಗತಿಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಪತ್ರಿಕಾ ಮಾಧ್ಯಮದಿಂದ ಮಾತ್ರ ಸಾಧ್ಯ ಎಂದರು.

ಪತ್ರಕರ್ತರ ಸಂಘಕ್ಕೆ ಶೀಘ್ರದಲ್ಲಿಯೇ ನಿವೇಶನ ನೀಡುವ ಕುರಿತು ಯೋಜನೆ ರೂಪಿಸಲಾಗಿದೆ. ಸುಮಾರು 2 ಕೋಟಿ. ರೂ., ವೆಚ್ಚದಲ್ಲಿ ಸುಸಜ್ಜಿತ ಪತ್ರಿಕಾ ಭವನವನ್ನು ನಿರ್ಮಿಸಿಕೊಡಲಾಗುವುದು. ತಾತ್ಕಾಲಿಕವಾಗಿ ಹಳೇ ಗ್ರಂಥಾಲಯದ ಕಟ್ಟಡದಲ್ಲಿ ಕಚೇರಿಗೆ ಬೇಕಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪತ್ರಿಕಾಗೋಷ್ಠಿ ಮತ್ತು ಪತ್ರಕರ್ತರು ಒಂದಡೆ ಸೇರಿ ಸಭೆ ಮತ್ತಿತರರ ಕಾರ್ಯಚಟುವಟಿಕೆ ನಡೆಸಲು ಅನುಕೂಲವಾಗುವಂತೆ ಅವಕಾಶ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಕೈಲಾದ ಸಹಾಯ ಮಾಡುವುದಾಗಿ ತಿಳಿಸಿದರು.

ಪತ್ರಿಕಾ ದಿನಾಚರಣೆ ಕುರಿತು ವಿಶೇಷ ಉಪನ್ಯಾಸ ನೀಡಿದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಎನ್. ರವಿಕುಮಾರ್ ಟೆಲೆಕ್ಸ್ ಮಾತನಾಡಿ, ಗ್ರಾಮೀಣ ಭಾಗದ ಪತ್ರಕರ್ತರು ಕೇವಲ ಗೌರವ ಧನಕ್ಕೆ ಕಾರ್ಯನಿರ್ವಹಿಸುವ ಜೊತೆಗೆ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಪತ್ರಕರ್ತರ ಸಂಘವು ಸದಾ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಸಾಮಾಜಿಕ ಜಾಲತಾಣಗಳು ಹಾಗೂ ದೃಶ್ಯ ಮಾಧ್ಯಮಗಳ ಭರಾಟೆಯ ನಡುವೆಯೂ ಪತ್ರಿಕೆಗಳು ಸ್ವಂತಿಕೆಯನ್ನು ಕಾಯ್ದುಕೊಂಡು ಕಾರ್ಯನಿರ್ವಹಿಸುತ್ತಿವೆ ಎಂದರು.

ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಜೆ.ಎಸ್. ನಾಗರಾಜ ಜೈನ್, ಪ್ರಧಾನ ಕಾರ್ಯದರ್ಶಿಯಾಗಿ ಟಿ. ರಾಘವೇಂದ್ರ, ಉಪಾಧ್ಯಕ್ಷರಾಗಿ ಮುಹಮ್ಮದ್ ಆರೀಫ್, ಖಚಾಂಚಿಯಾಗಿ ಕೆ.ಪಿ. ಪ್ರವೀಣ್ ಕುಮಾರ್, ಸಹ ಕಾರ್ಯದರ್ಶಿಯಾಗಿ ನೋಪಿ ಶಂಕರ ಅಧಿಕಾರ ವಹಿಸಿಕೊಂಡರು. ಜಿಲ್ಲಾಧ್ಯಕ್ಷ ಕೆ.ವಿ. ಶಿವಕುಮಾರ್ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ಶಿವಪ್ಪ ಹಿತ್ಲರ್ ಪುತ್ರಿಯರಾದ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕಗಳಿಸಿದ ಗಮನಾ ಎಸ್. ಹಿತ್ಲರ್ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ಸಾಧನಾ ಎಸ್. ಹಿತ್ಲರ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿವೇಕಾನಂದ ಸದ್ಪಾವನಾ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಎಸ್.ಎಂ. ನೀಲೇಶ್ ಅವರಿಗೆ ಅಭಿನಂದಿಸಲಾಯಿತು.

ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಯು.ಎಂ. ನಟರಾಜ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್, ಜಿಲ್ಲಾ ಉಪಾಧ್ಯಕ್ಷರಾದ ವೈದ್ಯ, ಆರ್.ಎಸ್. ಹಾಲಸ್ವಾಮಿ, ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್, ಹಿರಿಯ ಪತ್ರಕರ್ತ ಬಂಡಿಗಡಿ ನಂಜುಡಪ್ಪ, ಯು.ಎನ್. ಲಕ್ಷ್ಮೀಕಾಂತ್, ಜಗನ್ನಾಥಪ್ಪ, ಸೇರಿದಂತೆ ತಾಲೂಕು ಕಾರ್ಯನಿರತ ಪತ್ರಕರ್ತರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.