ನಾಮಕಾವಸ್ಥೆಗೆ ಸೀಮಿತವಾದ ಲಾಕ್ಡೌನ್
Team Udayavani, Jul 20, 2020, 2:14 PM IST
ಭದ್ರಾವತಿ: ಭಾನುವಾರದ ಲಾಕ್ಡೌನ್ ನಾಮಕಾವಸ್ಥೆಯದ್ದು ಎನಿಸಿದೆ. ಸರ್ಕಾರ ಕಟ್ಟುನಿಟ್ಟಿನ ಲಾಕ್ಡೌನ್ ಎಂದು ಹೇಳಿದೆ. ಆದರೆ ವಾಸ್ತವದಲ್ಲಿ ಲಾಕ್ಡೌನ್ಗೆ ತಾಲೂಕಿನಲ್ಲಿ ವ್ಯಾಪಾರಸ್ಥರು ಮಾತ್ರ ಮಾನ್ಯತೆ ನೀಡಿ, ಮೆಡಿಕಲ್ ಶಾಪ್, ಹಾಲು, ಮಾಂಸದ ಅಂಗಡಿಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ಅಂಗಡಿ- ಮುಂಗಟ್ಟುಗಳನ್ನು ಮುಚ್ಚಿ ಲಾಕ್ಡೌನ್ಗೆ ಪೂರಕವಾಗಿ ಸ್ಪಂದಿಸಿದ್ದಾರೆ.
ಆದರೆ ಹಲವು ನಾಗರಿಕರು ಮಾತ್ರ ಇದಕ್ಕೆ ಅಪವಾದವೆನ್ನುವಂತೆ ನಗರದ ಪ್ರಮುಖ ಬೀದಿಗಳಲ್ಲಿ ವಾಹನಗಳಲ್ಲಿ ಎಲ್ಲೆಂದರಲ್ಲಿ ಸಂಚರಿಸುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಪೊಲೀಸರು ರಸ್ತೆಗಳಲ್ಲಿದ್ದರೂ ಸಹ ಏನನ್ನೂ ಮಾಡಲಾಗದ ಸ್ಥಿತಿ ಅವರದ್ದಾಗಿದೆ. ಸರ್ಕಾರ ಒಂದೆಡೆ ಲಾಕ್ ಡೌನ್ ಯಶಸ್ವಿಯಾಗಬೇಕೆಂದು ಜನಸಂಚಾರ ರಸ್ತೆಗಳಲ್ಲಿ ಇಲ್ಲದಂತೆ ನೋಡಿಕೊಳ್ಳಬೇಕೆನ್ನುತ್ತದೆ. ಆದರೆ ಮತ್ತೂಂದೆಡೆ ಮಾಂಸದ ಅಂಗಡಿ, ಮೀನು, ತರಕಾರಿ ಇತ್ಯಾದಿ ವಸ್ತುಗಳ ಮಾರಾಟಕ್ಕೆ ಲಾಕ್ಡೌನ್ವೇಳೆ ಅವಕಾಶ ಕಲ್ಪಿಸಿದೆ. ಇದರ ಜೊತೆಗೆ ಪೊಲೀಸರು ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎನ್ನುತ್ತದೆ. ಆದರೆ ಲಾಠೀಚಾರ್ಜ್ ಮಾಡಬೇಡಿ ಎನ್ನುತ್ತದೆ. ಈ ರೀತಿ ಇಬ್ಬಗೆ ನೀತಿಯ ಪ್ರದರ್ಶನವನ್ನು ಸರ್ಕಾರ ಮಾಡುತ್ತಿರುವುದರಿಂದ ಜನರು ಇದರ ದುರುಪಯೋಗಪಡೆದು ರಸ್ತೆಗಳಲ್ಲಿ ಸಂಚರಿಸುತ್ತಿದ್ದಾರೆ. ಇದನ್ನು ನೋಡಿದರೂ ಏನೂ ಮಾಡಲಾಗದ ರೀತಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಪೊಲೀಸರು ಅಳಲು ವ್ಯಕ್ತಪಡಿಸಿದರು.
ಸೀಲ್ಡೌನ್ ಕಥೆಯೂ ಅಷ್ಟೇ: ನಗರಸಭೆ, ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಕಾಲಿಗೆ ಚಕ್ರ ಕಟ್ಟಿ ಕೊಂಡವರಂತೆ ವಿಶ್ರಾಂತಿಯಿಲ್ಲದೆ ಕೋವಿಡ್ ನಿಯಂತ್ರಣಕ್ಕೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಅದರ ಫಲವಾಗಿ ನಗರಸಭೆ ವ್ಯಾಪ್ತಿಯಲ್ಲಿ ಈವರೆಗೆ 17 ಕಂಟೈನ್ಮೆಂಟ್ ಝೋನ್ಗಳಲ್ಲಿ ಸೀಲ್ಡೌನ್ ಮಾಡಲಾಗಿದೆ. ಸೀಲ್ಡೌನ್ ಆದ ಪ್ರದೇಶಗಳ ನಿವಾಸಿಗಳು ಕನಿಷ್ಟ 14ದಿನಗಳ ಕಾಲ ತಮ್ಮ ಮನೆಯಿಂದ ಹೊರಗೆ ಹೋಗುವಂತಿಲ್ಲ ಎಂಬ ನಿಯಮವಿದೆ. ಆದರೆ ಕೆಲವು ಕಡೆಗಳಲ್ಲಿ ಸೀಲ್ಡೌನ್ ಆದ ಪ್ರದೇಶದ ಜನರು ಈ ನಿಯಮ ಉಲ್ಲಂಘಿಸಿ ಬೇರೆ ರಸ್ತೆಗಳಲ್ಲಿ ಸಂಚರಿಸುತ್ತಿದ್ದಾರೆ. ಬಸವೇಶ್ವರ ವೃತ್ತದ ಸಮೀಪದ ಮಾರುಕಟ್ಟೆಯ ಪ್ರದೇಶದ ಸುತ್ತಮುತ್ತಲಿನ ಪ್ರದೇಶ ಸೀಲ್ಡೌನ್ ಮಾಡ ಲಾಗಿದ್ದರೂ ಸಹ ಅಲ್ಲಿನ ಕೆಲವು ನಿವಾಸಿಗಳು ಹೂ, ತರಕಾರಿ ವ್ಯಾಪಾರವನ್ನು ನಗರದ ಮುಖ್ಯ ರಸ್ತೆ ಬದಿಯಲ್ಲಿ ಮಾಡುತ್ತಿರುವುದು ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ
ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ
B.Y. Raghavendra: ಇಂಟರ್ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್ ಮತಬೇಟೆ
Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?