ಯಾವ ರೈತರಿಗೂ ಅನ್ಯಾಯವಾಗಲು ಬಿಡಲ್ಲ: ಬಿವೈಆರ್‌


Team Udayavani, Jul 27, 2020, 11:56 AM IST

ಯಾವ ರೈತರಿಗೂ ಅನ್ಯಾಯವಾಗಲು ಬಿಡಲ್ಲ: ಬಿವೈಆರ್‌

ಶಿಕಾರಿಪುರ: ಸಂಸದ ಬಿ.ವೈ. ರಾಘವೇಂದ್ರ ರೈಲ್ವೆ ಯೋಜನೆ ಭೂ ಸ್ವಾಧೀನ ಕುರಿತು ರೈತರು ಮತ್ತು ಅಧಿಕಾರಿಗಳ ಸಭೆ ನಡೆಸಿದರು.

ಶಿಕಾರಿಪುರ: ಪಟ್ಟಣದ ತಾಪಂ ಸಭಾಂಗಣದಲ್ಲಿ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ರೈಲ್ವೆ ಯೋಜನೆಗೆ ಭೂ ಸ್ವಾಧೀನ ಪಡಿಸಿಕೊಳ್ಳುವ ಸಲುವಾಗಿ ಭೂಮಿ ನೀಡುವ ರೈತರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಿಕಾರಿಪುರ- ರಾಣೆಬೆನ್ನೂರು- ಶಿವಮೊಗ್ಗ ರೈಲ್ವೆ ಯೋಜನೆಗೆ ಭೂಮಿ ನೀಡುವ ರೈತರಿಗೆ ಯಾವುದೇ ರೀತಿಯಲ್ಲಿ ಮೋಸ ಆಗುವುದಿಲ್ಲ ಎಂದು ಭರವಸೆ ನೀಡಿದರು. ರೈತ ಗುತ್ತಿ ಕನ್ನಪ್ಪ ಎಂಬುವವರು ಹಳಿಯೂರು ಭಾಗದ ಸರ್ವೆ ನಂ. 172 ರಲ್ಲಿ ಜಮೀನಿದ್ದು ಇಲ್ಲಿ ಜಮೀನು ಮಂಜೂರು ಆಗಿರುವುದು ಒಬ್ಬರಿಗೆ. ಪಹಣಿ ಆಗಿರುವುದು ಒಬ್ಬರಿಗೆ, ಪೋಡಿ ಆಗಿರುವುದು ಇನ್ನೊಬ್ಬರಿಗೆ. ಉಳುಮೆ ಮಾಡುತ್ತಿರುವುದು ಇನ್ನೊಬ್ಬರು. ಹೀಗಿರುವಾಗ ಭೂ ಸ್ವಾ ಧೀನ ಪ್ರಕ್ರಿಯೆ ನಡೆದ ಮೇಲೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಶ್ನಿಸಿದರು.

ತಾಲೂಕಿನ ಹಾರೋಗೊಪ್ಪ, ಎರೆಕಟ್ಟೆ, ದೂಪದಳ್ಳಿ, ಸದಾಶಿವಪುರ ತಾಂಡಾ, ಬೇಗೂರು ಸೇರಿದಂತೆ ಒಟ್ಟು 11 ಗ್ರಾಮಗಳಲ್ಲಿ ರೈಲ್ವೆ ಯೋಜನೆಗೆ ಭೂ ಸ್ವಾ
ಧೀನ ಪ್ರಕ್ರಿಯೆ ನಡೆಸಲಾಗುವುದು.ಈ ಗ್ರಾಮಗಳಲ್ಲಿ ಒಟ್ಟಾರೆಯಾಗಿ 277 ಎಕರೆ ಜಮೀನು ಸ್ವಾ ಧೀನ ಪ್ರಕ್ರಿಯೆಗೆ ಒಳ ಪಡಿಸಲಾಗುವುದು. ಇದರಲ್ಲಿ 73
ಎಕರೆ ಬಗರ್‌ಹುಕುಂ, 55 ಎಕರೆ ಸರ್ಕಾರಿ ಜಮೀನು, 10 ಎಕರೆ ಕಂದಾಯ ಇಲಾಖೆಯ ಜಮೀನು, 5.18 ಎಕರೆ ಶೃಂಗೇರಿ ಮಠದ ಜಮೀನು ಹೀಗೆ
ಜಮೀನುಗಳಿದ್ದು, ಇದರಲ್ಲಿ ಉಳುಮೆ ಮಾಡುವ ಎಲ್ಲಾ ರೈತರಿಗೂ ಮುಖ್ಯಮಂತ್ರಿ ಹಾಗೂ ತಾವು ಸೇರಿ ಅಧಿಕಾರಿಗಳ ಜೊತೆ ಸಮಾಲೋಚನಾ ಸಭೆ
ನಡೆಸಿ ಸೂಕ್ತ ಪರಿಹಾರ ಕೊಡಿಸಲು ಬದ್ಧರಾಗಿದ್ದೇವೆ  ಎಂದರು.

ತಾಲೂಕಿನ ನೀರಾವರಿ ಯೋಜನೆಗೆ ಹಿರೇಕೆರೂರು ತಾಲೂಕಿನಲ್ಲಿ ಸುಮಾರು 37 ಎಕರೆಯಷ್ಟು ಭೂ ಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು ಅಲ್ಲಿನ ಎಲ್ಲಾ ರೈತರು ಭೂಮಿಯನ್ನು ಮುಕ್ತ ಮನಸ್ಸಿನಿಂದ ಬಿಟ್ಟು ಕೊಡಲು ನಿರ್ಧರಿಸಿದ್ದಾರೆ. ಅದೇ ರೀತಿ ತಾಲೂಕಿನ ಅಭಿವೃದ್ಧಿಗೆ ರೈತರು ಸಹಕಾರ ನೀಡಬೇಕು ಎಂದರಲ್ಲದೆ, ಭೂ ಸ್ವಾ ಧೀನ ಪ್ರಕ್ರಿಯೆ ಸಮಯದಲ್ಲಿ ಅಡಕೆ, ತೆಂಗು, ಬಾಳೆ, ಗಂಧ ಈ ರೀತಿಯಾಗಿ ವಿವಿಧ ರೀತಿಯ ಬೆಳೆಗಳನ್ನು ಬೆಳೆದ ರೈತರಿಗೆ ಅವರವರ ಬೆಳೆಗಳಿಗನುಸಾರವಾಗಿ ಜಂಟಿ ಸರ್ವೆ ಕಾರ್ಯ ನಡೆಸಿ ಪರಿಹಾರ ನೀಡಲು ಪ್ರಯತ್ನ ನಡೆಸಲಾಗುವುದು ಎಂದರು.

ರೈತರು ಭೂಮಿಯನ್ನು ಬಿಟ್ಟು ಕೊಡಲಿ, ಕೊಡದಿರಲಿ. ಸರ್ಕಾರ ರೈಲ್ವೆ ಯೋಜನೆ ನಿಲ್ಲಿಸುವುದಿಲ್ಲ. ಭೂಮಿ ಬಿಟ್ಟು ಕೊಟ್ಟವರಿಗೆ, ಕೊಡದಿದ್ದವರಿಗೆ ಅವರವರ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು ಎಂದ ಅವರು, ಸ್ವಾತಂತ್ರ್ಯಾ ನಂತರ ಶಿವಮೊಗ್ಗಕ್ಕೆ ಮಾತ್ರ ಸೀಮಿತವಾಗಿದ್ದ ರೈಲ್ವೆ ಯೋಜನೆ ಉತ್ತರ ಕರ್ನಾಟಕಕ್ಕೂ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್‌. ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಕೆ. ರೇವಣಪ್ಪ, ತಾಪಂ ಅಧ್ಯಕ್ಷ ಪ್ರಕಾಶ್‌ ಉಡುಗಣಿ, ಭೂ ಸ್ವಾ ಧೀನಾಧಿಕಾರಿ ಸರೋಜಮ್ಮ, ಸಾಗರ ಉಪ ವಿಭಾಗಾಧಿಕಾರಿ ಡಾ|ನಾಗರಾಜ್‌, ತಹಶೀಲ್ದಾರ್‌ ಕವಿರಾಜ್‌ ಇದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.