ಸ್ಪಷ್ಟವಾಗಿ ಹೇಳುತ್ತೇನೆ.. ನನ್ನನ್ನೂ ಯಾರೂ ಸೈಡ್ ಲೈನ್ ಮಾಡುತ್ತಿಲ್ಲ: ಯಡಿಯೂರಪ್ಪ
Team Udayavani, Oct 19, 2021, 12:28 PM IST
ಶಿವಮೊಗ್ಗ: ಬಿಜೆಪಿಯಾಗಲಿ ಅಥವಾ ನರೇಂದ್ರ ಮೋದಿಯವರು ಹಾಗೂ ಯಾರೇ ಅಗಲಿ ನನ್ನನ್ನು ಸೈಡ್ ಲೈನ್ ಮಾಡಿಲ್ಲ. ನಾನು ಮತ್ತೆ ಮತ್ತೆ ಬಹಳ ಸ್ಪಷ್ಟ ಮಾಡಿ ಹೇಳುತ್ತೇನೆ, ನಾನು ಸ್ವಇಚ್ಛೆಯಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಯಾರು ಒತ್ತಡ ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೊಂದಲ ತರುವಂತಹ ಪ್ರಯತ್ನವನ್ನು ಯಾರು ಮಾಡಬೇಡಿ. ಎಲ್ಲರೂ ಒಗ್ಗಟ್ಟಾಗಿ ಪಕ್ಷ ಸಂಘಟಿಸೋಣ. ನಮ್ಮೆಲ್ಲರ ಅದೃಷ್ಟಕ್ಕೆ ಜಗತ್ತು ಮೆಚ್ಚಿದ ಮೋದಿ ಪ್ರಧಾನಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಬೆಂಬಲಿಗರಾಗಿ ನಾವೇಲ್ಲಾ ನಿಂತುಕೊಳ್ಳುತ್ತೇವೆ ಎಂದರು.
ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದೆ. ಅ.20 ಹಾಗೂ 21 ರಂದು ಸಿಂಧಗಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದೇನೆ. ಅ.22 ಹಾಗೂ 23 ರಂದು ಹಾನಗಲ್ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ. ಅಗತ್ಯ ಬಿದ್ದರೆ ಹಾನಗಲ್ ಕ್ಷೇತ್ರದಲ್ಲಿ ಇನ್ನೂ ಒಂದು ದಿನ ಇರುತ್ತೇನೆ. ಎಲ್ಲಾ ಎಂಎಲ್ ಎ, ಎಂಪಿ ಗಳು ಸಹ ಜೊತೆಗೆ ಬರಲಿದ್ದು, ಸಿಎಂ ಬೊಮ್ಮಾಯಿ, ನಾನು ಎಲ್ಲರೂ ಓಡಾಡುತ್ತೇವೆ. ನೂರಕ್ಕೆ ನೂರರಷ್ಟು ಎರಡು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂದರು.
ಇದನ್ನೂ ಓದಿ:ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ
ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿಯವರ ಅಭಿವೃದ್ಧಿ ಕಾರ್ಯಗಳು ಜನರಿಗೆ ತಲುಪಿವೆ. ಬೊಮ್ಮಾಯಿಯವರು ಇತ್ತೀಚೆಗೆ ಉತ್ತಮ ಕೊಡುಗೆ ನೀಡಿದ್ದು, ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ತಲುಪುತ್ತಿವೆ. ಜೊತೆಗೆ ನಾನಿದ್ದಗಾಲೂ ಮಾಡಿದ ಅಭಿವೃದ್ಧಿ ಕಾರ್ಯಗಳೇ ನಮಗೆ ಶ್ರೀರಕ್ಷೆಯಾಗಿವೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಭಾಗ್ಯಲಕ್ಷ್ಮೀ ಯೋಜನೆ ಜಾರಿಗೆ ತಂದೆ. ಲಕ್ಷಾಂತರ ಹೆಣ್ಣುಮಕ್ಕಳು ತಮ್ಮ ಕಾಲ ಮೇಲೆ ನಿಂತು, ಗೌರವದಿಂದ ಬದುಕುವ ವ್ಯವಸ್ಥೆಯಾಗಿದೆ. ಅನೇಕ ಅಭಿವೃದ್ಧಿ ಕಾರ್ಯ ಮಾಡಿರುವ ನಮ್ಮ ಪಕ್ಷಕ್ಕೆ ಜನ ಬೆಂಬಲ ಕೊಡ್ತಾರೆ ಎಂಬ ವಿಶ್ವಾಸವಿದೆ. ಎರಡು ಕ್ಷೇತ್ರದಲ್ಲೂ ಬಹುದೊಡ್ಡ ಅಂತರದಲ್ಲಿ ಬಿಜೆಪಿ ಗೆಲ್ಲಲಿದೆ. ಯಾವುದೇ ಚುನಾವಣೆ ಬಂದರೂ ನಾವು ಹಗುರವಾಗಿ ತೆಗೆದುಕೊಳ್ಳಲ್ಲ. ಚುನಾವಣೆಯಲ್ಲಿ ಗೆಲ್ಲಲು ಶಕ್ತಿ ಮೀರಿ ಪ್ರಯತ್ನ ಮಾಡ್ತೇವೆ ಎಂದು ಯಡಿಯೂರಪ್ಪ ಹೇಳಿದರು.
ಸಿದ್ದರಾಮಯ್ಯಗೆ ಶೋಭೆಯಲ್ಲ: ಸಿದ್ದರಾಮಯ್ಯ ಅವರು ಬಹಳ ಹಗುರವಾಗಿ ಇತ್ತೀಚೆಗೆ ಮಾತನಾಡುತ್ತಿದ್ದಾರೆ. ಒಬ್ಬ ವಿರೋಧ ಪಕ್ಷದ ನಾಯಕನಾಗಿ ಅವರಿಗೆ ಶೋಭೆ ತರಿಸಲ್ಲ. ಇನ್ನಾದರೂ ಸ್ವಲ್ಪ ನಾಲಿಗೆಯನ್ನು ಹದ್ದು ಬಸ್ತಿನಲ್ಲಿಟ್ಟುಕೊಂಡು ಮಾತನಾಡ್ಬೇಕು. ಇಲ್ಲವಾದರೇ ರಾಜ್ಯದ ಜನರೇ ಸಿದ್ದರಾಮಯ್ಯನವರಿಗೆ ಪಾಠ ಕಲಿಸುತ್ತಾರೆ ಎಂದ ಬಿಎಸ್ವೈ ಹೇಳಿದರು.
ಪ್ರಧಾನಿ ಮೋದಿ ಸರ್ಕಾರ, ನನ್ನ ಸರ್ಕಾರ ಹಾಗೂ ಈಗಿನ ಸರ್ಕಾರ ಯಾರಿಗೂ ಅನ್ಯಾಯ ಮಾಡಿಲ್ಲ. ಅಲ್ಪಸಂಖ್ಯಾತರಿಗೆ ವಂಚನೆ ಮಾಡಿದ ಒಂದು ಉದಾಹರಣೆ ಇದ್ದರೇ ನನಗೆ ಕೊಡಿ. ಅವರಿಗೊಂದು ಇವರಿಗೊಂದು ಯಾವತ್ತು ಮಾಡಿಲ್ಲ. ತಾರತಮ್ಯ ಮಾಡದೇ ಎಲ್ಲರಿಗೂ ಒಂದೇ ತರಹ ನೋಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಕೆಲಸ ಮಾಡಿದೆ. ಹಾಗಾಗೀ ಯಾವುದೇ ಅಲ್ಪಸಂಖ್ಯಾತರು ಬೇಜಾರು ಮಾಡಿಕೊಳ್ಳುವ ವಿಚಾರವೇ ಬರಲ್ಲ ಎಂದು ಯಡಿಯೂರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ