ರಸ್ತೆ ಪಕ್ಕದಲ್ಲೇ ತ್ಯಾಜ್ಯ: ಶಿವಮೊಗ್ಗ ಮಹಾನಗರ ಪಾಲಿಕೆ ನಿರ್ಲಕ್ಷ್ಯಕ್ಕೆ ಜಾನುವಾರುಗಳು ಬಲಿ
Team Udayavani, Nov 6, 2021, 11:43 AM IST
ಶಿವಮೊಗ್ಗ: ನಗರದಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯ ವಿಲೇವಾರಿಯಲ್ಲಿ ಮಹಾನಗರ ಪಾಲಿಕೆ ನಿರ್ಲಕ್ಷ್ಯ ತೋರುತ್ತಿದ್ದು, ಜಾನುವಾರುಗಳು ಬಲಿಯಾಗುತ್ತಿರುವ ಘಟನೆ ನಡೆದಿದೆ.
ಘನತ್ಯಾಜ್ಯ ಸಮಪರ್ಕವಾಗಿ ವಿಲೇವಾರಿ ಮಾಡದ ಪರಿಣಾಮ ಜಾನುವಾರುಗಳು ಬಲಿಯಾಗುತ್ತಿವೆ. ತ್ಯಾಜ್ಯವನ್ನು ಡಂಪಿಂಗ್ ಯಾರ್ಡ್ ಬದಲು ಚಾನಲ್ ಪಕ್ಕದ ಖಾಲಿ ಜಾಗದಲ್ಲಿ ಹಾಕುತ್ತಿದ್ದು, ಶಿವಮೊಗ್ಗ ನಗರ ಸಮೀಪದ ಅನುಪಿನಕಟ್ಟೆ ಬಳಿ ಇರುವ ತುಂಗಾ ಎಡದಂಡೆ ಕಾಲುವೆಯ ಅಕ್ಕಪಕ್ಕದ ಖಾಲಿ ಜಾಗದಲ್ಲಿ ಘನತ್ಯಾಜ್ಯ ವಿಲೇವಾರಿ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ:ಭತ್ತದ ಕೃಷಿಗೆ ಹಾನಿ, ತೋಟಗಳಿಗೆ ನುಗ್ಗಿದ ನೀರು
ಮಹಾನಗರ ಪಾಲಿಕೆಯ ಕೆಲವು ವಾಹನ ಚಾಲಕರು ಘನತ್ಯಾಜ್ಯ, ಕಟ್ಟಡ ನಿರ್ಮಾಣದ ವೇಸ್ಟ್, ಕಲ್ಯಾಣ ಮಂಟಪದ ಘನತ್ಯಾಜ್ಯವನ್ನು ತಂದು ರಸ್ತೆ ಬದಿಯಲ್ಲಿಯೇ ವಿಲೇವಾರಿ ಮಾಡುತ್ತಿದ್ದಾರೆ. ಇದು ಜಾನುವಾರುಗಳಿಗೆ ಸಂಕಷ್ಟ ತಂದಿರಿಸಿದೆ.
ರಸ್ತೆ ಬದಿಯಲ್ಲಿ ಸುರಿದ ಘನತ್ಯಾಜ್ಯ ತಿಂದು ಅನುಪಿನಕಟ್ಟೆ ಗ್ರಾಮದಲ್ಲಿ ಕಳೆದ ಎರಡು ದಿನದಲ್ಲಿ 5 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿದೆ. ಅನುಪಿನ ಕಟ್ಟೆ ಗ್ರಾಮದ ಚಿತ್ರಾ ಪ್ರಕಾಶ್, ರತ್ನಮ್ಮ ಬೋರೆಗೌಡ ಸೇರಿದಂತೆ ಹಲವರ ಮನೆಯ ಜಾನುವಾರುಗಳು ಸಾವನ್ನಪ್ಪಿದೆ.
ಶಿವಮೊಗ್ಗ ಮಹಾನಗರ ಪಾಲಿಕೆ ನಿರ್ಲಕ್ಷ್ಯಕ್ಕೆ ಅನುಪಿನಕಟ್ಟೆ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಘನತ್ಯಾಜ್ಯವನ್ನು ಸಮಪರ್ಕವಾಗಿ ವಿಲೇವಾರಿ ಮಾಡುವಂತೆ ಒತ್ತಾಯ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ