ಬರದಿಂದ ಬರಿದಾಗ್ತಿದೆ ಲಿಂಗನಮಕ್ಕಿ ಜಲಾಶಯ


Team Udayavani, Apr 25, 2017, 12:25 AM IST

Linganamakki-Dam-24-4.jpg

ಶಿವಮೊಗ್ಗ: ತೀವ್ರ ಬರದಿಂದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ದಿನೇದಿನೇ ಕುಸಿಯುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಈ ಬಾರಿ ಕನಿಷ್ಠ ನೀರಿನ ಮಟ್ಟ ದಾಖಲೆಯಾಗುವ ಸಾಧ್ಯತೆ ಇದೆ. ರವಿವಾರ ಜಲಾಶಯದ ನೀರಿನ ಮಟ್ಟ 1,750 ಅಡಿಗೆ ತಲುಪಿತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 1,768.45 ಅಡಿಯಷ್ಟು ನೀರಿತ್ತು. ಕಳೆದ ವರ್ಷ ಶರಾವತಿ ವಿದ್ಯುದಾಗಾರದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಸುಮಾರು 6 ತಿಂಗಳ ಕಾಲ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಂಡಿತ್ತು. ಇದರಿಂದಾಗಿ ಜಲಾಶಯದ ನೀರಿನ ಸಂಗ್ರಹದಲ್ಲಿ ಉಳಿಕೆಯಾಗಿತ್ತು.

ಮಳೆಗಾಲ ಆರಂಭವಾಗುವಾಗ ಜಲಾಶಯದಲ್ಲಿ ಸಾಕಷ್ಟು ನೀರಿದ್ದರೂ, ಒಟ್ಟಾರೆ ಮುಂಗಾರು ಮಳೆ ಕೊರತೆ ಕಾರಣದಿಂದ ಜಲಾಶಯದಲ್ಲಿ ನೀರಿನ ಪ್ರಮಾಣ 1,800 ಅಡಿ ಕೂಡ ತಲುಪಲಿಲ್ಲ. ಅನಂತರವೂ ಮಳೆಯಾಗದ್ದರಿಂದ ಜಲಾಶಯದ ನೀರಿನ ಪ್ರಮಾಣ ಕುಸಿಯುತ್ತಲೇ ಹೋಯಿತು. ಜತೆಗೆ ವಿದ್ಯುತ್‌ ಬೇಡಿಕೆಯೂ ಜಾಸ್ತಿಯಿದ್ದುದರಿಂದ ಇದ್ದ ನೀರನ್ನು ವಿದ್ಯುತ್‌ ಉತ್ಪಾದನೆಗೆ ಬಳಕೆ ಮಾಡಲಾಯಿತು. ಹೀಗಾಗಿ ನೀರಿನ ಸಂಗ್ರಹ ಕಡಿಮೆಯಾಗುತ್ತಲೇ ಇದೆ.

2003ರಲ್ಲಿ ಜಲಾಶಯದ ನೀರಿನಮಟ್ಟ 1,725 ಅಡಿವರೆಗೆ ಕುಸಿತ ಕಂಡಿತ್ತು. ಈ ಬಾರಿ ಇದನ್ನು ಮೀರುವ ಸಾಧ್ಯತೆ ಇದೆ. ಆದರೆ, ಎಲ್ಲವೂ ವಿದ್ಯುತ್‌ ಬೇಡಿಕೆಯ ಮೇಲೆ ನಿಂತಿದೆ. ಸದ್ಯ ರಾಜ್ಯದಲ್ಲಿ ಸರಾಸರಿ 9,300 ಮೆಗಾವ್ಯಾಟ್‌ ವಿದ್ಯುತ್‌ ಬೇಡಿಕೆಯಿದ್ದು, ಇದರಲ್ಲಿ ಶೇ.65-70ರಷ್ಟು ವಿದ್ಯುತ್‌ನ್ನು ಹೊರಗಡೆಯಿಂದ ಪಡೆಯಲಾಗುತ್ತಿದೆ. ರಾಜ್ಯದ ವಿವಿಧ ಜಲಾಶಯಗಳಲ್ಲಿ ಇರುವ ನೀರನ್ನು ಜತನದಿಂದ ಕಾಯ್ದುಕೊಳ್ಳಲು ರಾಜ್ಯ ಸರಕಾರ ತೀರ್ಮಾನಿಸಿರುವುದರಿಂದ ಸಾಧ್ಯವಾದಷ್ಟು ಕಡಿಮೆ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ವಾಸ್ತವವಾಗಿ ಈಗಿರುವ ನೀರನ್ನು ಪೂರ್ಣ ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದನೆಗೆ ಬಳಸಿದಲ್ಲಿ 10 ದಿನದಲ್ಲಿ ಜಲಾಶಯ ಖಾಲಿಯಾಗುತ್ತದೆ. ಆದರೆ, ಹಾಗಾಗದಂತೆ ನೋಡಿಕೊಳ್ಳಲಾಗುತ್ತದೆ. ಪ್ರತಿ ದಿನ ಸುಮಾರು 6 ಸಾವಿರ ಕ್ಯೂಸೆಕ್ಸ್ ನೀರನ್ನು ವಿದ್ಯುತ್‌ ಉತ್ಪಾದನೆಗೆ ಬಳಸಲಾಗುತ್ತಿದೆ.

1,742 ಅಡಿಗೆ ನೀರಿನ ಮಟ್ಟ ಕುಸಿದರೆ ಮೊದಲ ಹಂತದಲ್ಲಿ ಲಿಂಗನಮಕ್ಕಿ ಜಲಾಶಯದ ತಟದಲ್ಲಿಯೇ ಉತ್ಪಾದಿಸಲಾಗುವ ವಿದ್ಯುತ್‌ ಘಟಕವನ್ನು ಸ್ಥಗಿತಗೊಳಿಸಲಾಗುತ್ತದೆ. ಬಳಿಕ ಸ್ಲ್ಯೂಯೀಸ್‌ ಗೇಟ್‌ ಮೂಲಕ ನೀರನ್ನು ಬಿಡುಗಡೆ ಮಾಡಿ ಶರಾವತಿ ವಿದ್ಯುದಾಗಾರದಲ್ಲಿ ಮಾತ್ರ ವಿದ್ಯುತ್‌ ಉತ್ಪಾದಿಸಲು ಸಾಧ್ಯ. 1,715 ಅಡಿಗೆ ನೀರು ಕುಸಿತ ಕಂಡರೆ ಅಲ್ಲಿಗೆ ಸಂಪೂರ್ಣವಾಗಿ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಬೇಕಾಗುತ್ತದೆ. ಆದರೆ, ಹಾಗಾಗದಂತೆ ನೋಡಿಕೊಳ್ಳಲಾಗುತ್ತಿದ್ದು, ಇರುವ ನೀರನ್ನು ಮುಂದಿನ 50 ದಿನಗಳಿಗೆ ಸಮನಾಗಿ ಹಂಚಿ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ ಎನ್ನುತ್ತಾರೆ ಕಾರ್ಯ ನಿರ್ವಾಹಕ ಅಭಿಯಂತರ ಶಿವಕುಮಾರ್‌, ಸಹಾಯಕ ಅಭಿಯಂತರ ಕೃಷ್ಣಮೂರ್ತಿ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಸತೀಶ್‌.

ಮಳೆಯಾಗಲಿಲ್ಲ
ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದ್ದರೂ ಲಿಂಗನಮಕ್ಕಿ ಯೋಜನಾ ಪ್ರದೇಶದಲ್ಲಾಗಲಿ, ಜಲಾನಯನ ಪ್ರದೇಶಗಳಲ್ಲಾಗಲಿ ಇದುವರೆಗೆ ಹಿಂಗಾರು ಮಳೆಯಾಗಲಿ, ಮುಂಗಾರು ಪೂರ್ವ ಮಳೆಯಾಗಲಿ ಬಿದ್ದಿಲ್ಲ. ಜಲಾಶಯ ಸಂಪೂರ್ಣ ಖಾಲಿಯಾಗಿದೆ ಎನಿಸುತ್ತಿದೆ. ಜಲಾಶಯದ ಮುಖ್ಯ ಅಣೆಕಟ್ಟು ಪೂರ್ಣವಾಗಿ ಗೋಚರಿಸುತ್ತಿದೆ. ಜಲಾಶಯದ ಭಾಗದಲ್ಲಿ ಹುಲ್ಲುಗಳು ಬೆಳೆದಿದ್ದು, ಜಾನುವಾರುಗಳು ಮೇಯುತ್ತಿವೆ. ಬಿಸಿಲು ಹೆಚ್ಚುತ್ತಲೇ ಹೋಗಿ ವಿದ್ಯುತ್‌ ಉತ್ಪಾದನೆಗೂ ನೀರನ್ನು ಬಳಕೆ ಮಾಡಿದ್ರೆ ಈ ಬಾರಿ ಜಲಾಶಯದಲ್ಲಿ ದಾಖಲೆ ಪ್ರಮಾಣದಲ್ಲಿ ನೀರಿನ ಮಟ್ಟ ಕುಸಿಯೋದು ಮಾತ್ರ ಸತ್ಯ.

– ಗೋಪಾಲ್‌ ಯಡಗೆರೆ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.